ಬ್ರೇಕಿಂಗ್ ನ್ಯೂಸ್
03-08-23 07:11 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 3: ಮಂದಿರವಾದರೂ, ಮಸೀದಿಯಾದರೂ ದೇವರು ಒಬ್ಬನೇ. ನೀವು ಅವನನ್ನು ಯಾವುದಾದ್ರೂ ಒಂದು ಕಡೆ ನೋಡಬಹುದು ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಜ್ಞಾನವಾಪಿ ಮಸೀದಿ ಅವರಣದಲ್ಲಿ ವೈಜ್ಞಾನಿಕ ಸರ್ವೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿ ದೆಹಲಿಯ ಸಂಸತ್ ಆವರಣದಲ್ಲಿ ಪ್ರತಿಕ್ರಿಯೆ ನೀಡಿರುವ ಫಾರೂಕ್ ಅಬ್ದುಲ್ಲಾ, 'ಮಂದಿರವಾದರೂ ಆಗಲಿ ಅಥವಾ ಮಸೀದಿಯಾದರೂ ಆಗಲಿ, ದೇವರು ಒಬ್ಬನೇ.. ನೀವು ಅವನನ್ನು (ದೇವರು) ಮಂದಿರ ಅಥವಾ ಮಸೀದಿ ಒಂದು ಸ್ಥಳದಲ್ಲಿ ನೋಡಬಹುದು ಎಂದು ಹೇಳಿದ್ದಾರೆ.
ಹೈಕೋರ್ಟ್ ಆದೇಶಕ್ಕೆ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿರುವ ಮುಸ್ಲಿಂ ವೈಯುಕ್ತಿಕ ಕಾನೂನು ಮಂಡಳಿ ಪ್ರಕರಣಕ್ಕೆ ಸಂಬಂಧಿಸಿದಂತೆ Places of Worship Act ಜಾರಿಗೊಳಿಸಬೇಕು ಎಂದು ಆಗ್ರಹಿಸಿದೆ. ಈ ಕುರಿತು ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿರುವ ಮಂಡಳಿ ಸದಸ್ಯ ಮೌಲಾನಾ ಖಾಲಿದ್ ರಶೀದ್ ಫರಂಗಿ ಮಹಾಲಿ ಅವರು, “ಈ ಮಸೀದಿಯು ಸುಮಾರು 600 ವರ್ಷಗಳಷ್ಟು ಹಳೆಯದಾಗಿದೆ ಮತ್ತು ಕಳೆದ 600 ವರ್ಷಗಳಿಂದ ಮುಸ್ಲಿಮರು ಇಲ್ಲಿ ನಮಾಜ್ ಮಾಡುತ್ತಿದ್ದಾರೆ. ಹೀಗಾಗಿ ಇಲ್ಲಿ Places of Worship Act ಜಾರಿಗೊಳಿಸಬೇಕು. ಮುಸ್ಲಿಮರು ಶತಮಾನಗಳಿಂದ ಇಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಸಂಪರ್ಕಿಸುವ ಬಗ್ಗೆ ಯೋಚನೆ ಇದೆ ಎಂದಿದ್ದಾರೆ.
ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ. ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಸಮೀಕ್ಷೆ ನಡೆಸುವಂತೆ ಹೈಕೋರ್ಟ್ ಅನುಮತಿ ನೀಡಿದೆ.
Whether it is a temple or a mosque, there is only one God. You can see him somewhere," former Jammu and Kashmir CM and National Conference (NC) party president Farooq Abdullah said. Reacting to the Allahabad High Court's decision to allow a scientific survey of the Gyanvapi mosque premises, Abdullah said, "Whether it is a temple or a mosque, there is only one God. You can see him (God) in a temple or a mosque in one place," he said.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm