ಬ್ರೇಕಿಂಗ್ ನ್ಯೂಸ್
06-08-20 07:12 am Headline Karnataka News Network ದೇಶ - ವಿದೇಶ
ನವದೆಹಲಿ(ಆ. 06): ಆರ್ಥಿಕ ಅಧಃಪತನವನ್ನು ತಪ್ಪಿಸಲು ರೆಪೋ ದರ ಇನ್ನಷ್ಟು ಇಳಿಯಬಹುದು ಎಂಬ ಉದ್ಯಮಪಂಡಿತರ ನಿರೀಕ್ಷೆ ಇವತ್ತು ಹುಸಿಯಾಗಿದೆ. ರೆಪೋ ಮತ್ತು ರಿವರ್ಸ್ ರೆಪೋ ದರದಲ್ಲಿ ಯಥಾಸ್ಥಿತಿ ಪಾಲನೆ ಮಾಡಲು ಆರ್ಬಿಐ ನಿರ್ಧರಿಸಿದೆ.
ಹಣಕಾಸು ಚಲನೆಗೆ ಪ್ರಮುಖ ಪಾತ್ರ ವಹಿಸುವ ರೆಪೋ ದರ ಶೇ. 4ರಲ್ಲಿ ಮುಂದುವರಿಯಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕ ಮಾಧ್ಯಮಗಳಿಗೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಚಟುವಟಿಕೆ ಬಹಳ ಸೂಕ್ಷ್ಮ ಸ್ಥಿತಿಯಲ್ಲೇ ಮುಂದುವರಿದಿದೆ. ಆದರೆ, ಜಾಗತಿಕ ಹಣಕಾಸು ಮಾರುಕಟ್ಟೆಗಳು ಆಶಾದಾಯಕವೆನಿಸಿವೆ ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ.
ಈ ಬಾರಿಯ ಎಂಪಿಸಿ ಸಭೆಯಲ್ಲಿ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಬಹುದು ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಶೆ. 75ರಷ್ಟು ಅರ್ಥಶಾಸ್ತ್ರಜ್ಞರು ಅಂದಾಜು ಮಾಡಿದ್ದರು. ಈ ತ್ರೈಮಾಸಿಕವಷ್ಟೇ ಅಲ್ಲ ಮುಂದಿನ ತ್ರೈಮಾಸಿಕದಲ್ಳೂ 25 ಬೇಸಿಸ್ ಪಾಯಿಂಟ್ ಇಳಿಕೆಯಾಗಿ ರೆಪೋ ದರ ಶೇ 3.5ಕ್ಕೆ ಇಳಿಕೆಯಾಗಬಹುದು ಎಂದು ತಜ್ಞರು ನಿರೀಕ್ಷಿಸಿದ್ದರು. ಆದರೆ, ಎಂಪಿಸಿ ಸಭೆಯಲ್ಲಿ ಯಥಾಸ್ಥಿತಿ ಪಾಲನೆಯ ನಿರ್ಧಾರದೊಂದಿಗೆ ದೇಶದ ಅರ್ಥಶಾಸ್ತ್ರಜ್ಞರ ನಿರೀಕ್ಷೆ ಹುಸಿಯಾದಂತಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm