ಬ್ರೇಕಿಂಗ್ ನ್ಯೂಸ್
06-08-20 07:12 am Headline Karnataka News Network ದೇಶ - ವಿದೇಶ
ನವದೆಹಲಿ(ಆ. 06): ಆರ್ಥಿಕ ಅಧಃಪತನವನ್ನು ತಪ್ಪಿಸಲು ರೆಪೋ ದರ ಇನ್ನಷ್ಟು ಇಳಿಯಬಹುದು ಎಂಬ ಉದ್ಯಮಪಂಡಿತರ ನಿರೀಕ್ಷೆ ಇವತ್ತು ಹುಸಿಯಾಗಿದೆ. ರೆಪೋ ಮತ್ತು ರಿವರ್ಸ್ ರೆಪೋ ದರದಲ್ಲಿ ಯಥಾಸ್ಥಿತಿ ಪಾಲನೆ ಮಾಡಲು ಆರ್ಬಿಐ ನಿರ್ಧರಿಸಿದೆ.
ಹಣಕಾಸು ಚಲನೆಗೆ ಪ್ರಮುಖ ಪಾತ್ರ ವಹಿಸುವ ರೆಪೋ ದರ ಶೇ. 4ರಲ್ಲಿ ಮುಂದುವರಿಯಲಿದೆ. ಭಾರತೀಯ ರಿಸರ್ವ್ ಬ್ಯಾಂಕ್ನ ಹಣಕಾಸು ನೀತಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆಯ ಬಳಿಕ ಮಾಧ್ಯಮಗಳಿಗೆ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಚಟುವಟಿಕೆ ಬಹಳ ಸೂಕ್ಷ್ಮ ಸ್ಥಿತಿಯಲ್ಲೇ ಮುಂದುವರಿದಿದೆ. ಆದರೆ, ಜಾಗತಿಕ ಹಣಕಾಸು ಮಾರುಕಟ್ಟೆಗಳು ಆಶಾದಾಯಕವೆನಿಸಿವೆ ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ.
ಈ ಬಾರಿಯ ಎಂಪಿಸಿ ಸಭೆಯಲ್ಲಿ ರೆಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಬಹುದು ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಶೆ. 75ರಷ್ಟು ಅರ್ಥಶಾಸ್ತ್ರಜ್ಞರು ಅಂದಾಜು ಮಾಡಿದ್ದರು. ಈ ತ್ರೈಮಾಸಿಕವಷ್ಟೇ ಅಲ್ಲ ಮುಂದಿನ ತ್ರೈಮಾಸಿಕದಲ್ಳೂ 25 ಬೇಸಿಸ್ ಪಾಯಿಂಟ್ ಇಳಿಕೆಯಾಗಿ ರೆಪೋ ದರ ಶೇ 3.5ಕ್ಕೆ ಇಳಿಕೆಯಾಗಬಹುದು ಎಂದು ತಜ್ಞರು ನಿರೀಕ್ಷಿಸಿದ್ದರು. ಆದರೆ, ಎಂಪಿಸಿ ಸಭೆಯಲ್ಲಿ ಯಥಾಸ್ಥಿತಿ ಪಾಲನೆಯ ನಿರ್ಧಾರದೊಂದಿಗೆ ದೇಶದ ಅರ್ಥಶಾಸ್ತ್ರಜ್ಞರ ನಿರೀಕ್ಷೆ ಹುಸಿಯಾದಂತಾಗಿದೆ.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm