ಬ್ರೇಕಿಂಗ್ ನ್ಯೂಸ್
06-11-20 01:34 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 06: ಕೊರೊನಾ ವೈರಸ್ ಪುನುಗು ಬೆಕ್ಕಿನ ಜಾತಿಯ ಪ್ರಾಣಿಗಳಿಂದ ಹರಡುತ್ತಿದೆ ಎನ್ನುವ ಗುಮಾನಿ ವಿಜ್ಞಾನಿಗಳಲ್ಲಿದೆ. ಈಗಾಗ್ಲೇ ಸ್ಪೇನ್, ನೆದರ್ಲೇಂಡ್ ದೇಶಗಳಲ್ಲಿ ಲಕ್ಷಾಂತರ ಮುಂಗುಸಿ ಅಥವಾ ಪುನುಗು ಜಾತಿಯ ಅಲ್ಲಿನ ಜನ ಇಂಗ್ಲಿಷ್ ಭಾಷೆಯಲ್ಲಿ ಮಿಂಕ್ ಎಂದು ಕರೆಯುವ ಪ್ರಾಣಿಗಳನ್ನು ಕೊಂದು ಹಾಕಿದ್ದಾರೆ.
ಇದೇ ವೇಳೆ, ಯುರೋಪ್ ರಾಷ್ಟ್ರಗಳಲ್ಲೇ ಅತಿ ಹೆಚ್ಚು ಮಿಂಕ್ ಪ್ರಾಣಿಗಳನ್ನು ಹೊಂದಿರುವ ಡೆನ್ಮಾರ್ಕ್ ತನ್ನ ದೇಶದಲ್ಲಿರುವ ಎಲ್ಲ ಪ್ರಾಣಿಗಳನ್ನು ಕೊಲ್ಲುವಂತೆ ಆದೇಶ ಮಾಡಿದೆ. ಅಲ್ಲಿ ಸರಿಸುಮಾರು 17 ಮಿಲಿಯನ್ ಮುಂಗುಸಿ ಜಾತಿಯ ಮಿಂಕ್ ಪ್ರಾಣಿಗಳಿದ್ದು ಅವುಗಳನ್ನು ಪೂರ್ತಿ ಕೊಂದು ಹಾಕುವುದೇ ಅಲ್ಲಿನ ಸರಕಾರಕ್ಕೆ ಚಿಂತೆಯಾಗಿದೆ.
17 ಮಿಲಿಯನ್ ಅಂದರೆ, ಸಾಮಾನ್ಯ ಲೆಕ್ಕದಲ್ಲಿ ಲೆಕ್ಕ ಹಾಕುವುದಾದರೆ 1.70 ಕೋಟಿ ಮಿಂಕ್ ಪ್ರಾಣಿಗಳಿದ್ದು, ಅವುಗಳೆಲ್ಲವನ್ನೂ ಕೊಲ್ಲಲು ಡೆನ್ಮಾರ್ಕ್ ಪ್ರಧಾನಿ ಮೀಟ್ ಪ್ರೆಡರಿಕ್ಸನ್ ಆದೇಶ ಮಾಡಿದ್ದಾರೆ. ಪ್ರತಿ ದಿನವೂ ಮಿಂಕ್ ಫಾರ್ಮ್ ಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಮತ್ತು ಅದರ ಮಾಲೀಕರಿಗೆ ಕೊರೊನಾ ಸೋಂಕು ಕಂಡುಬರುತ್ತಿರುವುದನ್ನು ಅಲ್ಲಿನ ಸರಕಾರ ಪತ್ತೆ ಮಾಡಿದೆ. ಆದರೆ, ಸೋಂಕು ಮಾನವನಿಂದ ಪ್ರಾಣಿಗಳಿಗೆ ಹರಡಿದೆಯೇ ಅಥವಾ ಪ್ರಾಣಿಗಳ ಮೂಲಕ ಮಾನವನಿಗೆ ಹರಡುತ್ತಿದೆಯೇ ಎನ್ನುವುದು ದೃಢಪಟ್ಟಿಲ್ಲ.



ಪ್ರಾಣಿಗಳನ್ನು ತಪಾಸಣೆ ಮಾಡುವಾಗ ಅದರಲ್ಲೂ ಕೊರೊನಾ ವೈರಸ್ ಇರುವುದು ಕಂಡುಬಂದಿದೆ. ಹೀಗಾಗಿ ನಮ್ಮ ಜನರ ಹಿತವನ್ನು ಕಾಪಾಡುವುದು ಮುಖ್ಯ. ಆದ್ದರಿಂದ ಈ ಪ್ರಾಣಿಗಳನ್ನು ಕೊಂದು ಇನ್ನಿಲ್ಲವಾಗಿಸುವುದೇ ಸದ್ಯದ ದೊಡ್ಡ ಜವಾಬ್ದಾರಿ ಎಂದಿದ್ದಾರೆ ಅಲ್ಲಿನ ಪ್ರಧಾನಿ.
ಈ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಮತ್ತು ಪ್ಯಾರಿಸ್ ಮೂಲದ ವಿಜ್ಞಾನಿಗಳು ಮಿಂಕ್ ಪ್ರಾಣಿಗಳು ಮತ್ತು ಮನುಷ್ಯರ ನಡುವೆ ಸೋಂಕು ಹರಡುತ್ತಿದೆಯೇ ಅನ್ನುವ ಬಗ್ಗೆ ಅಧ್ಯಯನ ಕೈಗೊಂಡಿದ್ದಾರೆ.
The world’s largest mink producer, Denmark, says it plans to cull more than 15 million of the animals, due to fears that a Covid-19 mutation moving from mink to humans could jeopardise future vaccines.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am