ಬ್ರೇಕಿಂಗ್ ನ್ಯೂಸ್
14-08-23 02:03 pm HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 14: ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ 19 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ, ಯುವಕನ ತಂದೆ ಕೂಡ ಸಾವನ್ನಪ್ಪಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.
ತಮಿಳುನಾಡಿನ ಚೆನ್ನೈನಲ್ಲಿರುವ ತನ್ನ ಮನೆಯಲ್ಲಿ ತಂದೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ 2022 ರಲ್ಲಿ 12 ನೇ ತರಗತಿಯಲ್ಲಿ 427 ಅಂಕಗಳೊಂದಿಗೆ ಪಾಸಾಗಿದ್ದ ಜಗದೀಶ್ವರನ್ ಎಂಬ ವಿದ್ಯಾರ್ಥಿ ಸತತ ಎರಡು ಪ್ರಯತ್ನಗಳಲ್ಲಿ ನೀಟ್ ಪ್ರವೇಶ ಪರೀಕ್ಷೆಯನ್ನು ಪಾಸಾಗಲು ಸಾಧ್ಯವಾಗಲಿಲ್ಲ. ಇತ್ತೀಚಿನ ಫಲಿತಾಂಶದಿಂದ ತೀವ್ರ ನೊಂದಿದ್ದ ಜಗದೀಶ್ವರನ್ ಶನಿವಾರ ತಂದೆ ಕರೆ ಮಾಡಿದರೂ ಸ್ಪಂದಿಸಿರಲಿಲ್ಲ. ನಂತರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಜಗದೀಶ್ವರನ್ ಆತ್ಮಹತ್ಯೆಗೆ ತುತ್ತಾಗಿದ್ದರು. ಆದರೆ ಇದೇ ನೋವಲ್ಲಿದ್ದ ತಂದೆ ಸೆಲ್ವಶೇಖರ್ ಅವರೂ ಕೂಡ ಇಂದು ಶವವಾಗಿ ಪತ್ತೆಯಾಗಿದ್ದಾರೆ.
ಮಗ ಜಗದೀಶ್ವರನ್ ಸಾವನ್ನಪ್ಪಿದ ಮಾರನೇ ದಿನವೇ ತಂದೆ ಸೆಲ್ವಶೇಖರ್ ಶವವಾಗಿ ಪತ್ತೆಯಾಗಿದ್ದರು. ಮಗನ ಸಾವಿನ ದುಃಖ ತಾಳಲಾರದೆ ಸೆಲ್ವಶೇಖರ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ .ಸ್ಟಾಲಿನ್ ಅವರು ಸಾವಿಗೆ ಸಂತಾಪ ಸೂಚಿಸಿದ್ದು, "ಆತ್ಮಹತ್ಯೆಯ ಆಲೋಚನೆಗಳನ್ನು ಮಾಡಬೇಡಿ. ಆತ್ಮ ವಿಶ್ವಾಸವನ್ನು ಹೊಂದಲು ಹಾಗೂ ಬದುಕಲು ಕಲಿಯಿರಿ" ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.
ಇದೇ ವೇಳೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್, ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದು ಹಾಕುತ್ತೇವೆ. ಯಾರೂ ಕೂಡ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾನು ವಿದ್ಯಾರ್ಥಿಗಳೊಂದಿಗೆ ಮನವಿ ಮಾಡುತ್ತೇನೆ. ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದುಹಾಕುತ್ತೇವೆ. ತಮಿಳುನಾಡು ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿದೆ ಎಂದು ಹೇಳಿದ್ದಾರೆ.
ನೀಟ್ ಅಭ್ಯರ್ಥಿ ಜಗದೀಶ್ವರನ್, ಆತ್ಮಹತ್ಯೆ ಮಾಡಿಕೊಂಡಿದ್ದು ಕೇಳಿ ನನಗೆ ಆಘಾತವಾಯಿತು. ಅವರ ಪೋಷಕರನ್ನು ಸಮಾಧಾನ ಮಾಡುವುದು ಹೇಗೆ ಎಂದು ಯೋಚಿಸುತ್ತಿರುವಾಗಲೇ, ಅವರ ತಂದೆ ಸೆಲ್ವಶೇಖರ್ ಕೂಡ ಆತ್ಮಹತ್ಯೆ ಮಾಡಿಕೊಂಡರು. ಜಗದೀಶ್ವರನ್ ಅವರ ಕುಟುಂಬ, ಸ್ನೇಹಿತ ವರ್ಗ ಹಾಗೂ ಬಂಧು ಬಳಗಕ್ಕೆ ಹೇಗೆ ಸಾಂತ್ವನ ಹೇಳುವುದು ಎಂದು ನನಗೆ ತಿಳಿಯತ್ತಿಲ್ಲ. ವೈದ್ಯನಾಗುವ ಆಸೆ ಕಂಡಿದ್ದ ಬುದ್ದಿವಂತ ವಿದ್ಯಾರ್ಥಿಯೊಬ್ಬ ನೀಟ್ನಿಂದ ಆತ್ಮಹತ್ಯೆ ಮಾಡಿಕೊಂಡವರ ಸಾಲಿಗೆ ಸೇರಿದ್ದು ದುರಂತ’ ಎಂದು ಅವರು ಹೇಳಿದ್ದಾರೆ.
A 19-year-old medical aspirant died by suicide in Chennai after he failed to clear the NEET exam twice. He was found hanging in his room. He was rushed to a hospital where he was declared brought dead.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm