ಬ್ರೇಕಿಂಗ್ ನ್ಯೂಸ್
16-08-23 07:01 pm HK News Desk ದೇಶ - ವಿದೇಶ
ಇಸ್ಲಾಮಬಾದ್, ಆಗಸ್ಟ್ 16: ಮುಸ್ಲಿಂ ಮೂಲಭೂತವಾದಿಗಳ ಗುಂಪೊಂದು ಧರ್ಮನಿಂದೆಯ ಆರೋಪದ ಮೇಲೆ ಚರ್ಚ್ಗೆ ಬೆಂಕಿ ಹಚ್ಚಿದ್ದು ಕ್ರಿಶ್ಚಿಯನ್ನರು ಭಯಭೀತರಾದ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.
ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನರ ಜೀವನವೂ ನರಕವಾಗಿದೆ. ಈ ಬಾರಿ ಮುಸ್ಲಿಂ ಮೂಲಭೂತವಾದಿಗಳ ಗುಂಪೊಂದು ಫೈಸಲಾಬಾದ್ ಜಿಲ್ಲೆಯಲ್ಲಿ ಚರ್ಚ್ಗೆ ಬೆಂಕಿ ಹಚ್ಚಿದೆ.
ಧರ್ಮನಿಂದೆಯ ಆರೋಪದ ಮೇಲೆ ಚರ್ಚ್ ಅನ್ನು ಸುಟ್ಟು ನಾಶಪಡಿಸಲಾಗಿದೆ. ಪಾಕಿಸ್ತಾನದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲಿನ ಮತ್ತೊಂದು ದಾಳಿಯಲ್ಲಿ ಫೈಸಲಾಬಾದ್ ಜಿಲ್ಲೆಯ ಚರ್ಚ್ ಗೆ ಬೆಂಕಿ ಹಚ್ಚಲಾಗಿದೆ. ಧರ್ಮನಿಂದೆಯ ಆರೋಪದ ಮೇಲೆ ಗುಂಪೊಂದು ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯಲ್ಲಿ ಚರ್ಚ್ ಅನ್ನು ಧ್ವಂಸ ಮಾಡಿದೆ.



ಪಾಕಿಸ್ತಾನದಲ್ಲಿ ಚರ್ಚ್ಗೆ ಬೆಂಕಿ!
ಸಾಮಾಜಿಕ ಜಾಲತಾಣ ಟ್ವಿಟ್ಟರ್ನಲ್ಲಿ ಬರೆದುಕೊಂಡಿರುವ ಬಿಷಪ್ ಮಾರ್ಷಲ್, "ನಾನು ಇದನ್ನು ಬರೆಯುವಾಗ ನಾನು ಪದಗಳೇ ಬರುತ್ತಿಲ್ಲ. ಪಾಕಿಸ್ತಾನದ ಫೈಸಲಾಬಾದ್ ಜಿಲ್ಲೆಯ ಜರನ್ವಾಲಾ ಘಟನೆಯ ಬಗ್ಗೆ ನಾವು, ಬಿಷಪ್ಗಳು, ಪಾದ್ರಿಗಳು ಮತ್ತು ಸಾಮಾನ್ಯ ಜನರು ತೀವ್ರ ದುಃಖಿತರಾಗಿದ್ದೇವೆ''
''ಇಲ್ಲಿ ಚರ್ಚ್ಗೆ ಬೆಂಕಿ ಹಚ್ಚಲಾಗಿದೆ ಮತ್ತು ಬೈಬಲ್ ಅನ್ನು ಅವಮಾನಿಸಲಾಗಿದೆ. ಮಾತ್ರವಲ್ಲದೆ ಕ್ರಿಶ್ಚಿಯನ್ನರನ್ನು ಪವಿತ್ರ ಕುರಾನ್ ಉಲ್ಲಂಘಿಸಿದ್ದಾರೆಂದು ಸುಳ್ಳು ಆರೋಪ ಹೊರಿಸಲಾಗಿದೆ" ಎಂದು ಅವರು ಕಿರುಕುಳದ ಆರೋಪ ಮಾಡಿದ್ದಾರೆ.





ತನ್ನ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ನ್ಯಾಯ ಮತ್ತು ಕ್ರಮಕ್ಕಾಗಿ ನಾನು ಕರೆ ನೀಡುತ್ತಿದ್ದೇನೆ ಎಂದು ಬಿಷಪ್ ಮಾರ್ಷಲ್ ಹೇಳಿದ್ದಾರೆ. ಜೊತೆಗೆ ಅವರು ನಾಗರಿಕರ ಸುರಕ್ಷತೆಗೆ ಒತ್ತಾಯಿಸಿದ್ದಾರೆ. ಪಾಕಿಸ್ತಾನದಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಾರೆ. ಇಲ್ಲಿ ಅಲ್ಪಸಂಖ್ಯಾತರಿಗೆ ಸ್ವಾತಂತ್ರ್ಯವಿಲ್ಲ ಎಂದು ಹೇಳಿದ್ದಾರೆ.
ಸಹಿಷ್ಣು ಮತ್ತು ಸಮಾನತೆಯ ದೇಶವನ್ನು ರಚಿಸುವ ಉದ್ದೇಶದಿಂದ 1947 ರಲ್ಲಿ ಪಾಕಿಸ್ತಾನವನ್ನು ಸ್ಥಾಪಿಸಲಾಯಿತು. ಆದರೆ ಅದು ಕೇವಲ ಹೇಳುವುದಕ್ಕಾಗಿ ಮಾತ್ರ. ಪಾಕಿಸ್ತಾನವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲಾಗಿದೆ ಮತ್ತು ಕಳೆದ 76 ವರ್ಷಗಳಲ್ಲಿ ಅಲ್ಪಸಂಖ್ಯಾತರು ಬಹುತೇಕ ನಾಶವಾಗಿದ್ದಾರೆ.
A church was vandalized and set on fire in the Faisalabad district of Pakistan, in yet another assault on religious minorities, according to Lahore-based Bishop Azad Marshall. A church in the Faisalabad area of Punjab province was vandalized and damaged as a result of the blasphemy accusations.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 05:36 pm
HK News Staffer
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm