ಬ್ರೇಕಿಂಗ್ ನ್ಯೂಸ್
29-08-23 09:41 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 29: ನಾಲ್ಕು ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಸರ್ಕಾರ ಗೃಹೋಪಯೋಗಿ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯನ್ನು 200 ರೂ.ನಷ್ಟು ಇಳಿಸಲು ನಿರ್ಧರಿಸಿದೆ. ಮಂಗಳವಾರ ಕೇಂದ್ರ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಆಗಿದ್ದು ಬುಧವಾರದಿಂದಲೇ ಹೊಸ ದರ ಅನ್ವಯವಾಗಲಿದೆ.
ಸದ್ಯ 14 ಕಿಲೋ ಎಲ್ಪಿಜಿ ಸಿಲಿಂಡರ್ ಬೆಲೆ 1,100 ರೂ. ಅಸುಪಾಸಿನಲ್ಲಿ ಇದೆ. 200 ರೂ. ಸಬ್ಸಿಡಿ ಘೋಷಿಸಿದ್ದು ಹೊಸ ಬೆಲೆಯ ಪ್ರಕಾರ, ಸಿಲಿಂಡರ್ ಬೆಲೆ 900 ರೂ.ಗೆ ಇಳಿಯಲಿದೆ. ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಿಲಿಂಡರ್ ದರ ಮತ್ತಷ್ಟು ಇಳಿಯಲಿದೆ. ಉಜ್ವಲ ಯೋಜನೆಯಡಿ ಈಗಾಗಲೇ 200 ರೂ. ಸಬ್ಸಿಡಿ ಇರುವುದರಿಂದ ಅವರಿಗೆ ಈಗ 400 ರೂ. ಒಟ್ಟು ಬೆಲೆಯಲ್ಲಿ ಇಳಿಕೆಯಾಗಲಿದ್ದು 700 ರೂ. ಅಂದಾಜಿಗೆ ಸಿಲಿಂಡರ್ ಸಿಗಲಿದೆ.
ಸಬ್ಸಿಡಿ ರಹಿತ 14 ಕಿಲೋ ಎಲ್ಪಿಜಿ ಸಿಲಿಂಡರ್ ದರ ಬೆಂಗಳೂರಿನಲ್ಲಿ 1,105.50 ರೂ ಇದೆ. ಕೋಲ್ಕತಾದಲ್ಲಿ 1,118.50 ರೂ ಇದೆ. ಚೆನ್ನೈನಲ್ಲಿ 1,102.50 ರೂ ಇದೆ. ದೆಹಲಿಯಲ್ಲಿ 1103 ರೂ. ಇದೆ. ಸಂಪುಟ ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಅನುರಾಗ್ ಠಾಕೂರ್, ಇದು ಕೇಂದ್ರ ಸರ್ಕಾರ ನೀಡುತ್ತಿರುವ ಓಣಂ ಗಿಫ್ಟ್ ಎಂದು ಹೇಳಿ ಸಿಲಿಂಡರ್ ಬೆಲೆ ಇಳಿಕೆಯ ಮಾಹಿತಿ ನೀಡಿದ್ದಾರೆ. ಇದೇ ವೇಳೆ, ಪಿಎಂ ಉಜ್ವಲ ಯೋಜನೆಯಡಿ 75 ಲಕ್ಷ ಕುಟುಂಬಗಳಿಗೆ ಹೊಸತಾಗಿ ಗ್ಯಾಸ್ ಕನೆಕ್ಷನ್ ನೀಡಲಾಗುವುದು ಎಂದಿದ್ದಾರೆ.
ಮೇ ತಿಂಗಳ ನಂತರ ಐಒಸಿ, ಭಾರತ್ ಪೆಟ್ರೋಲಿಯಂ ಮೊದಲಾದ ತೈಲ ಮಾರುಕಟ್ಟೆ ಕಂಪನಿಗಳು ಮೂರು ಬಾರಿ ಎಲ್ಪಿಜಿ ದರಗಳನ್ನು ಏರಿಸಿವೆ. ಜುಲೈ ತಿಂಗಳಲ್ಲಿ 50 ರೂ. ಹೆಚ್ಚಳವಾಗಿತ್ತು. 2021ರ ಫೆಬ್ರವರಿಯಲ್ಲಿ ಸಿಲಿಂಡರ್ ದರ 694 ರೂ. ಇತ್ತು. ಆನಂತರ, ಎರಡು ವರ್ಷಗಳಲ್ಲಿ 13 ಬಾರಿ ದರ ಏರಿಸಿದ್ದು ಈವರೆಗಿನ ಗರಿಷ್ಠ ದರವಾಗಿ 1100 ರೂ. ಗಡಿ ದಾಟಿತ್ತು. ಈ ವರ್ಷಾಂತ್ಯದಲ್ಲಿ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
The government on Tuesday announced a Rs 200 per cylinder cut in prices of domestic cooking gas as it looked to counter the promise of cheaper LPG made by the Congress party in upcoming assembly elections in states like Madhya Pradesh. At present, a 14.2-kg LPG cylinder in the national capital costs Rs 1,103 - more than double the rate it came for in May 2020.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 05:36 pm
HK News Staffer
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm