ಬ್ರೇಕಿಂಗ್ ನ್ಯೂಸ್
08-11-20 04:47 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 8: ಅತ್ತ ಐಎಎಸ್ ಅಧಿಕಾರಿಯಾಗಿ ಹೆಸರು ಮಾಡಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಂಚಲನ ಮೂಡಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲು ಸಜ್ಜಾಗಿದ್ದಾರೆ.
ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಬಳಿಕ ಬಿಜೆಪಿ ಮತ್ತು ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಅಭಿಯಾನ ಆರಂಭಿಸಿದ್ದರು. ಸಿಎಎ ವಿರೋಧಿ ಹೋರಾಟದಲ್ಲೂ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಸೆಂಥಿಲ್ ಅವರನ್ನು ಪ್ರಶ್ನೆ ಮಾಡಿದಾಗ, ರಾಜಕೀಯಕ್ಕೆ ಸೇರುವುದನ್ನು ಖಚಿತಪಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು 2009ರ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ 'ಡೆಕ್ಕನ್ ಹೆರಾಲ್ಡ್' ಪತ್ರಿಕೆಗೆ ತಿಳಿಸಿದ್ದಾರೆ.
41ರ ಹರೆಯದ ಮಾಜಿ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ(ಟಿಎನ್ಸಿಸಿ) ಸೇರಲಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್, ಸೆಂಥಿಲ್ರನ್ನು ಪಕ್ಷಕ್ಕೆ ಕರೆತರಲು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೂ ನೆಲೆ ಇಲ್ಲ. ಡಿಎಂಕೆ, ಎಐಡೆಎಂಕೆ ಸೇರಿ ಪ್ರಾದೇಶಿಕ ಪಕ್ಷಗಳದ್ದೇ ಅಧಿಪತ್ಯ. ಹೀಗಿರುವಾಗ ಬಿಜೆಪಿ ಅಣ್ಣಾಮಲೈ ಮೂಲಕ ನೆಲೆ ಕಂಡುಕೊಳ್ಳಲು ಪ್ರಯತ್ನದಲ್ಲಿದೆ. ಇದೇ ವೇಳೆ, ಅಣ್ಣಾಮಲೈಗೆ ಎದುರಾಗಿ ಸೆಂಥಿಲ್ ಅವರನ್ನು ಕಾಂಗ್ರೆಸ್ ರಾಜಕೀಯಕ್ಕೆ ಎಳೆತಂದಿದೆ.
Former IAS officer, S. Sasikanth Senthil, who quit the civil services last year in 2019, citing a “totalitarian attack on the country” will join the Congress on Monday.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm