ಬ್ರೇಕಿಂಗ್ ನ್ಯೂಸ್
08-11-20 04:47 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 8: ಅತ್ತ ಐಎಎಸ್ ಅಧಿಕಾರಿಯಾಗಿ ಹೆಸರು ಮಾಡಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಂಚಲನ ಮೂಡಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲು ಸಜ್ಜಾಗಿದ್ದಾರೆ.
ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಬಳಿಕ ಬಿಜೆಪಿ ಮತ್ತು ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಅಭಿಯಾನ ಆರಂಭಿಸಿದ್ದರು. ಸಿಎಎ ವಿರೋಧಿ ಹೋರಾಟದಲ್ಲೂ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಸೆಂಥಿಲ್ ಅವರನ್ನು ಪ್ರಶ್ನೆ ಮಾಡಿದಾಗ, ರಾಜಕೀಯಕ್ಕೆ ಸೇರುವುದನ್ನು ಖಚಿತಪಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು 2009ರ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ 'ಡೆಕ್ಕನ್ ಹೆರಾಲ್ಡ್' ಪತ್ರಿಕೆಗೆ ತಿಳಿಸಿದ್ದಾರೆ.
41ರ ಹರೆಯದ ಮಾಜಿ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ(ಟಿಎನ್ಸಿಸಿ) ಸೇರಲಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್, ಸೆಂಥಿಲ್ರನ್ನು ಪಕ್ಷಕ್ಕೆ ಕರೆತರಲು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೂ ನೆಲೆ ಇಲ್ಲ. ಡಿಎಂಕೆ, ಎಐಡೆಎಂಕೆ ಸೇರಿ ಪ್ರಾದೇಶಿಕ ಪಕ್ಷಗಳದ್ದೇ ಅಧಿಪತ್ಯ. ಹೀಗಿರುವಾಗ ಬಿಜೆಪಿ ಅಣ್ಣಾಮಲೈ ಮೂಲಕ ನೆಲೆ ಕಂಡುಕೊಳ್ಳಲು ಪ್ರಯತ್ನದಲ್ಲಿದೆ. ಇದೇ ವೇಳೆ, ಅಣ್ಣಾಮಲೈಗೆ ಎದುರಾಗಿ ಸೆಂಥಿಲ್ ಅವರನ್ನು ಕಾಂಗ್ರೆಸ್ ರಾಜಕೀಯಕ್ಕೆ ಎಳೆತಂದಿದೆ.
Former IAS officer, S. Sasikanth Senthil, who quit the civil services last year in 2019, citing a “totalitarian attack on the country” will join the Congress on Monday.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm