ಬ್ರೇಕಿಂಗ್ ನ್ಯೂಸ್
08-11-20 04:47 pm Headline Karnataka News Network ದೇಶ - ವಿದೇಶ
ಚೆನ್ನೈ, ನವೆಂಬರ್ 8: ಅತ್ತ ಐಎಎಸ್ ಅಧಿಕಾರಿಯಾಗಿ ಹೆಸರು ಮಾಡಿದ್ದ ಅಣ್ಣಾಮಲೈ ತಮಿಳುನಾಡಿನಲ್ಲಿ ಬಿಜೆಪಿ ಸೇರ್ಪಡೆಯಾಗಿ ಸಂಚಲನ ಮೂಡಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿದ್ದ ಮಾಜಿ ಐಎಎಸ್ ಅಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಲು ಸಜ್ಜಾಗಿದ್ದಾರೆ.
ಸೆಂಥಿಲ್ ಕಳೆದ ವರ್ಷ ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಆಬಳಿಕ ಬಿಜೆಪಿ ಮತ್ತು ಕೇಂದ್ರ ಸರಕಾರದ ನಡೆಯನ್ನು ವಿರೋಧಿಸಿ ಅಭಿಯಾನ ಆರಂಭಿಸಿದ್ದರು. ಸಿಎಎ ವಿರೋಧಿ ಹೋರಾಟದಲ್ಲೂ ಕಾಣಿಸಿಕೊಂಡಿದ್ದರು.
ಈ ಬಗ್ಗೆ ಸೆಂಥಿಲ್ ಅವರನ್ನು ಪ್ರಶ್ನೆ ಮಾಡಿದಾಗ, ರಾಜಕೀಯಕ್ಕೆ ಸೇರುವುದನ್ನು ಖಚಿತಪಡಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಲಿದ್ದೇನೆ ಎಂದು 2009ರ ಬ್ಯಾಚಿನ ಐಎಎಸ್ ಅಧಿಕಾರಿ ಸೆಂಥಿಲ್ 'ಡೆಕ್ಕನ್ ಹೆರಾಲ್ಡ್' ಪತ್ರಿಕೆಗೆ ತಿಳಿಸಿದ್ದಾರೆ.
41ರ ಹರೆಯದ ಮಾಜಿ ಅಧಿಕಾರಿ ಸೋಮವಾರ ತಮಿಳುನಾಡು ಕಾಂಗ್ರೆಸ್ ಸಮಿತಿಗೆ(ಟಿಎನ್ಸಿಸಿ) ಸೇರಲಿದ್ದಾರೆ ಎನ್ನಲಾಗುತ್ತಿದೆ. ತಮಿಳುನಾಡಿನ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್, ಸೆಂಥಿಲ್ರನ್ನು ಪಕ್ಷಕ್ಕೆ ಕರೆತರಲು ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಹೇಳಲಾಗುತ್ತಿದೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷಕ್ಕೂ ನೆಲೆ ಇಲ್ಲ. ಡಿಎಂಕೆ, ಎಐಡೆಎಂಕೆ ಸೇರಿ ಪ್ರಾದೇಶಿಕ ಪಕ್ಷಗಳದ್ದೇ ಅಧಿಪತ್ಯ. ಹೀಗಿರುವಾಗ ಬಿಜೆಪಿ ಅಣ್ಣಾಮಲೈ ಮೂಲಕ ನೆಲೆ ಕಂಡುಕೊಳ್ಳಲು ಪ್ರಯತ್ನದಲ್ಲಿದೆ. ಇದೇ ವೇಳೆ, ಅಣ್ಣಾಮಲೈಗೆ ಎದುರಾಗಿ ಸೆಂಥಿಲ್ ಅವರನ್ನು ಕಾಂಗ್ರೆಸ್ ರಾಜಕೀಯಕ್ಕೆ ಎಳೆತಂದಿದೆ.
Former IAS officer, S. Sasikanth Senthil, who quit the civil services last year in 2019, citing a “totalitarian attack on the country” will join the Congress on Monday.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm