ಬ್ರೇಕಿಂಗ್ ನ್ಯೂಸ್
02-09-23 06:48 pm HK News Desk ದೇಶ - ವಿದೇಶ
ನವದೆಹಲಿ, ಸೆ.1: ಜೆಟ್ ಏರ್ವೇಸ್ ಸ್ಥಾಪಕ ನರೇಶ್ ಗೋಯಲ್ ಅವರನ್ನು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಪ್ಟೆಂಬರ್ 1ರಂದು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಬ್ಯಾಂಕ್ನಿಂದ ಸಾಲ ಪಡೆದು, ಸಾಲದ ಹಣವನ್ನು ತನ್ನದೇ ಆದ ಇತರೆ ಕಂಪನಿಗಳಿಗೆ ವರ್ಗಾವಣೆ ಮಾಡಿರುವ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ.
ಕೆಲವು ಗಂಟೆಗಳ ಕಾಲ ಇ.ಡಿ ಕಚೇರಿಯಲ್ಲಿ ಗೋಯಲ್ ಅವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಮನಿ ಲಾಂಡರಿಂಗ್ ತಡೆ ಕಾಯಿದೆ (ಪಿಎಂಎಲ್ಎ) ಅಡಿಯಲ್ಲಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
74 ವರ್ಷದ ನರೇಶ್ ಗೋಯಲ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯವು ಮುಂಬೈನ ವಿಶೇಷ ಪಿಎಂಎಲ್ಎ ಕೋರ್ಟ್ಗೆ ಅವರನ್ನು ಹಾಜರು ಪಡಿಸಿ ಕಸ್ಟಡಿಗೆ ಕೇಳಿತ್ತು. ಜಾರಿ ನಿರ್ದೇಶನಾಲಯದ ಬೇಡಿಕೆಯನ್ನು ಮನ್ನಿಸಿದ ನ್ಯಾಯಾಲಯವು ಅವರನ್ನು ಇ.ಡಿ ಕಸ್ಟಡಿಗೆ ನೀಡಿದೆ.
ಇ.ಡಿ ತನಿಖೆಯ ಪ್ರಕಾರ, ಜೆಟ್ ಏರ್ವೇಸ್ ಕೆನರಾ ಬ್ಯಾಂಕ್ನಿಂದ 539 ಕೋಟಿ ರೂ. ಸಾಲ ಪಡೆದು, ಹಣವನ್ನು ಹಿಂದಿರುಗಿಸಿಲ್ಲ. ಈ ಮೂಲಕ ಬ್ಯಾಂಕ್ಗೆ ನಷ್ಟ ಉಂಟು ಮಾಡಿದೆ.
ಈ ಸಂಬಂಧ ಕಳೆದ ನವೆಂಬರ್ನಲ್ಲಿ ಕೆನರಾ ಬ್ಯಾಂಕ್ ನರೇಶ್ ಗೋಯಲ್ ಮತ್ತು ಅವರ ಪತ್ನಿ ಅನಿತಾ ವಿರುದ್ಧ ವಂಚನೆ, ಕ್ರಿಮಿನಲ್ ಸಂಚು, ನಂಬಿಕೆ ದ್ರೋಹ ಮತ್ತು ಕ್ರಿಮಿನಲ್ ದುರ್ನಡತೆ ಆರೋಪ ಹೊರಿಸಿ ಕೇಸ್ ದಾಖಲಿಸಿತ್ತು. ಈ ಸಂಬಂಧ ಮೇ ತಿಂಗಳಿನಲ್ಲಿ ಸಿಬಿಐ ವಂಚನೆ ಕೇಸ್ ದಾಖಲಿಸಿತ್ತು. ನಂತರ ಇ.ಡಿ ಮನಿ ಲಾಂಡರಿಂಗ್ ಕೇಸ್ ದಾಖಲಿಸಿಕೊಂಡಿತ್ತು.
ಜೆಟ್ ಏರ್ವೇಸ್ ವಿರುದ್ಧ ಬ್ಯಾಂಕ್ ದಾಖಲಿಸಿರುವ ಎಫ್ಐಆರ್ನಲ್ಲಿ, ಕಂಪನಿಗೆ ಕ್ರೆಡಿಟ್ ಲಿಮಿಟ್ ಅಡಿಯಲ್ಲಿ 848.86 ಕೋಟಿ ರೂ. ಹಣವನ್ನು ಸಾಲವಾಗಿ ನೀಡಲಾಗಿತ್ತು. ಇದರಲ್ಲಿ 538.62 ಕೋಟಿ ರೂ. ಹಣವನ್ನು ಹಿಂದಿರುಗಿಸದೆ ಮೋಸ ಎಸಗಲಾಗಿದೆ ಎಂದು ಹೇಳಲಾಗಿದೆ. ಜುಲೈ 29, 2021ರಂದು ಸಿಬಿಐ ಇದನ್ನು ವಂಚನೆ ಎಂದು ಪರಿಗಣಿಸಿತ್ತು.
ಜೆಟ್ ಏರ್ವೇಸ್ ಲಿಮಿಟೆಡ್ (ಜೆಐಎಲ್)ನ ಫೊರೆನ್ಸಿಕ್ ಆಡಿಟ್ ಪ್ರಕಾರ ಕಂಪನಿಯು ತನ್ನ ಇತರೆ ಕಂಪನಿಗಳಿಗೆ ಅಕ್ರಮವಾಗಿ 1410.41 ಕೋಟಿ ರೂ. ಕಮಿಷನ್ ವೆಚ್ಚ ಹಾಗೂ ಇತರ ಖರ್ಚುಗಳ ರೂಪದಲ್ಲಿ ಪಾವತಿ ಮಾಡಿದೆ.
ಫೊರೆನ್ಸಿಕ್ ಆಡಿಟ್ ಪ್ರಕಾರ ಜೆಟ್ ಏರ್ವೇಸ್ ತನ್ನ ಸಹ ಕಂಪನಿ ಜೆಟ್ ಲೈಟ್ (ಇಂಡಿಯಾ) ಲಿಮಿಟೆಡ್ (ಜೆಎಲ್ಎಲ್)ಗೆ ಮುಂಗಡ ಮೊತ್ತವಾಗಿ ಹಣವನ್ನು ವರ್ಗಾವಣೆ ಮಾಡಿದೆ. ಜೆಐಎಲ್ ತನ್ನ ಅಂಗಸಂಸ್ಥೆಯಾದ ಜೆಎಲ್ಎಲ್ಗೆ ಸಾಲ, ಮುಂಗಡ ಮತ್ತು ಹೂಡಿಕೆಗಳ ರೂಪದಲ್ಲಿ ಅಕ್ರಮವಾಗಿ 1410.41 ಕೋಟಿ ರೂ.ಗಳನ್ನು ರವಾನಿಸಿದೆ ಎಂದು ಹೇಳಲಾಗಿದೆ.
The Enforcement Directorate on September 1 arrested Jet Airways (India) Limited’s founder chairman Naresh Jagdishrai Goyal, in connection with an alleged loan fraud involving about ₹538.62 crore of the Canara Bank.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm