ಬ್ರೇಕಿಂಗ್ ನ್ಯೂಸ್
02-09-23 06:48 pm HK News Desk ದೇಶ - ವಿದೇಶ
ನವದೆಹಲಿ, ಸೆ.1: ಜೆಟ್ ಏರ್ವೇಸ್ ಸ್ಥಾಪಕ ನರೇಶ್ ಗೋಯಲ್ ಅವರನ್ನು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೆಪ್ಟೆಂಬರ್ 1ರಂದು ಶುಕ್ರವಾರ ತಡರಾತ್ರಿ ಬಂಧಿಸಿದ್ದಾರೆ. ಬ್ಯಾಂಕ್ನಿಂದ ಸಾಲ ಪಡೆದು, ಸಾಲದ ಹಣವನ್ನು ತನ್ನದೇ ಆದ ಇತರೆ ಕಂಪನಿಗಳಿಗೆ ವರ್ಗಾವಣೆ ಮಾಡಿರುವ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ.
ಕೆಲವು ಗಂಟೆಗಳ ಕಾಲ ಇ.ಡಿ ಕಚೇರಿಯಲ್ಲಿ ಗೋಯಲ್ ಅವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಮನಿ ಲಾಂಡರಿಂಗ್ ತಡೆ ಕಾಯಿದೆ (ಪಿಎಂಎಲ್ಎ) ಅಡಿಯಲ್ಲಿ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
74 ವರ್ಷದ ನರೇಶ್ ಗೋಯಲ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯವು ಮುಂಬೈನ ವಿಶೇಷ ಪಿಎಂಎಲ್ಎ ಕೋರ್ಟ್ಗೆ ಅವರನ್ನು ಹಾಜರು ಪಡಿಸಿ ಕಸ್ಟಡಿಗೆ ಕೇಳಿತ್ತು. ಜಾರಿ ನಿರ್ದೇಶನಾಲಯದ ಬೇಡಿಕೆಯನ್ನು ಮನ್ನಿಸಿದ ನ್ಯಾಯಾಲಯವು ಅವರನ್ನು ಇ.ಡಿ ಕಸ್ಟಡಿಗೆ ನೀಡಿದೆ.
ಇ.ಡಿ ತನಿಖೆಯ ಪ್ರಕಾರ, ಜೆಟ್ ಏರ್ವೇಸ್ ಕೆನರಾ ಬ್ಯಾಂಕ್ನಿಂದ 539 ಕೋಟಿ ರೂ. ಸಾಲ ಪಡೆದು, ಹಣವನ್ನು ಹಿಂದಿರುಗಿಸಿಲ್ಲ. ಈ ಮೂಲಕ ಬ್ಯಾಂಕ್ಗೆ ನಷ್ಟ ಉಂಟು ಮಾಡಿದೆ.
ಈ ಸಂಬಂಧ ಕಳೆದ ನವೆಂಬರ್ನಲ್ಲಿ ಕೆನರಾ ಬ್ಯಾಂಕ್ ನರೇಶ್ ಗೋಯಲ್ ಮತ್ತು ಅವರ ಪತ್ನಿ ಅನಿತಾ ವಿರುದ್ಧ ವಂಚನೆ, ಕ್ರಿಮಿನಲ್ ಸಂಚು, ನಂಬಿಕೆ ದ್ರೋಹ ಮತ್ತು ಕ್ರಿಮಿನಲ್ ದುರ್ನಡತೆ ಆರೋಪ ಹೊರಿಸಿ ಕೇಸ್ ದಾಖಲಿಸಿತ್ತು. ಈ ಸಂಬಂಧ ಮೇ ತಿಂಗಳಿನಲ್ಲಿ ಸಿಬಿಐ ವಂಚನೆ ಕೇಸ್ ದಾಖಲಿಸಿತ್ತು. ನಂತರ ಇ.ಡಿ ಮನಿ ಲಾಂಡರಿಂಗ್ ಕೇಸ್ ದಾಖಲಿಸಿಕೊಂಡಿತ್ತು.
ಜೆಟ್ ಏರ್ವೇಸ್ ವಿರುದ್ಧ ಬ್ಯಾಂಕ್ ದಾಖಲಿಸಿರುವ ಎಫ್ಐಆರ್ನಲ್ಲಿ, ಕಂಪನಿಗೆ ಕ್ರೆಡಿಟ್ ಲಿಮಿಟ್ ಅಡಿಯಲ್ಲಿ 848.86 ಕೋಟಿ ರೂ. ಹಣವನ್ನು ಸಾಲವಾಗಿ ನೀಡಲಾಗಿತ್ತು. ಇದರಲ್ಲಿ 538.62 ಕೋಟಿ ರೂ. ಹಣವನ್ನು ಹಿಂದಿರುಗಿಸದೆ ಮೋಸ ಎಸಗಲಾಗಿದೆ ಎಂದು ಹೇಳಲಾಗಿದೆ. ಜುಲೈ 29, 2021ರಂದು ಸಿಬಿಐ ಇದನ್ನು ವಂಚನೆ ಎಂದು ಪರಿಗಣಿಸಿತ್ತು.
ಜೆಟ್ ಏರ್ವೇಸ್ ಲಿಮಿಟೆಡ್ (ಜೆಐಎಲ್)ನ ಫೊರೆನ್ಸಿಕ್ ಆಡಿಟ್ ಪ್ರಕಾರ ಕಂಪನಿಯು ತನ್ನ ಇತರೆ ಕಂಪನಿಗಳಿಗೆ ಅಕ್ರಮವಾಗಿ 1410.41 ಕೋಟಿ ರೂ. ಕಮಿಷನ್ ವೆಚ್ಚ ಹಾಗೂ ಇತರ ಖರ್ಚುಗಳ ರೂಪದಲ್ಲಿ ಪಾವತಿ ಮಾಡಿದೆ.
ಫೊರೆನ್ಸಿಕ್ ಆಡಿಟ್ ಪ್ರಕಾರ ಜೆಟ್ ಏರ್ವೇಸ್ ತನ್ನ ಸಹ ಕಂಪನಿ ಜೆಟ್ ಲೈಟ್ (ಇಂಡಿಯಾ) ಲಿಮಿಟೆಡ್ (ಜೆಎಲ್ಎಲ್)ಗೆ ಮುಂಗಡ ಮೊತ್ತವಾಗಿ ಹಣವನ್ನು ವರ್ಗಾವಣೆ ಮಾಡಿದೆ. ಜೆಐಎಲ್ ತನ್ನ ಅಂಗಸಂಸ್ಥೆಯಾದ ಜೆಎಲ್ಎಲ್ಗೆ ಸಾಲ, ಮುಂಗಡ ಮತ್ತು ಹೂಡಿಕೆಗಳ ರೂಪದಲ್ಲಿ ಅಕ್ರಮವಾಗಿ 1410.41 ಕೋಟಿ ರೂ.ಗಳನ್ನು ರವಾನಿಸಿದೆ ಎಂದು ಹೇಳಲಾಗಿದೆ.
The Enforcement Directorate on September 1 arrested Jet Airways (India) Limited’s founder chairman Naresh Jagdishrai Goyal, in connection with an alleged loan fraud involving about ₹538.62 crore of the Canara Bank.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm