ಬ್ರೇಕಿಂಗ್ ನ್ಯೂಸ್
02-09-23 08:03 pm HK News Desk ದೇಶ - ವಿದೇಶ
ಕಾಸರಗೋಡು, ಸೆ.2: ನೆರೆ ರಾಜ್ಯ ಕೇರಳದಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟದ ಘಟನೆಗಳು ಮರುಕಳಿಸುತ್ತಿವೆ. ನಿನ್ನೆ ಶುಕ್ರವಾರ ರಾತ್ರಿ ಕಾಸರಗೋಡು ಜಿಲ್ಲೆಯ ಕುಂಬ್ಳೆ ಪಟ್ಟಣದ ರೈಲು ನಿಲ್ದಾಣದ ಬಳಿ ನೇತ್ರಾವತಿ ಎಕ್ಸ್ಪ್ರೆಸ್ ರೈಲಿಗೆ ಕಲ್ಲು ಎಸೆದಿರುವ ಘಟನೆ ವರದಿಯಾಗಿದೆ. ಇದರಿಂದ ರೈಲು ಬೋಗಿಯೊಂದರ ಗಾಜಿಗೆ ಹಾನಿಯಾಗಿದೆ.
ಕುಂಬ್ಳೆ ರೈಲ್ವೆ ನಿಲ್ದಾಣವನ್ನು ದಾಟಿದ ನಂತರ ಸೆಪ್ಟೆಂಬರ್ 1ರಂದು ರಾತ್ರಿ 8.30ರ ಸುಮಾರಿಗೆ ನೇತ್ರಾವತಿ ಎಕ್ಸ್ಪ್ರೆಸ್ ರೈಲಿನ ಮೇಲೆ ಈ ಕಲ್ಲಿನ ದಾಳಿ ನಡೆದಿದೆ. ದಾಳಿಕೋರರು ರೈಲನ್ನು ಗುರಿಯಾಗಿಸಿಕೊಂಡು ಎಸ್2 ಕೋಚ್ಗೆ ಕಲ್ಲು ತೂರಿದ್ದಾರೆ. ಪರಿಣಮ ಬಾಗಿಲಿನ ಗಾಜು ಒಡೆದಿವೆ. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಈ ಘಟನೆಯ ವಿಷಯ ತಿಳಿದ ತಕ್ಷಣವೇ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಮತ್ತು ಕುಂಬ್ಳೆ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ತನಿಖೆ ಆರಂಭಿಸಿದ್ದು, ಕಲ್ಲು ಎಸೆದ ಆರೋಪಿಗಳು ಪತ್ತೆಗೆ ಕ್ರಮ ವಹಿಸಿದ್ದಾರೆ.
ಮುನ್ನೆಚ್ಚರಿಕೆ ನಂತರವೂ ಕಲ್ಲೆಸೆತ:ಉತ್ತರ ಕೇರಳದಲ್ಲಿ ಕಳೆದ ಕೆಲವು ತಿಂಗಳುಗಳಿಂದಲೂ ರೈಲುಗಳಿಗೆ ಕಲ್ಲು ತೂರಾಟ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ದಾಳಿಗಳನ್ನು ತಡೆಯಲು ಪೊಲೀಸರು ಕಟ್ಟೆಚ್ಚರ ವಹಿಸುತ್ತಿರುವಾಗಲೇ ಮತ್ತೆ ಹೊಸ ಘಟನೆಗಳು ಮರುಕಳಿಸುತ್ತಿವೆ. ಇದರಿಂದ ಆರ್ಪಿಎಫ್ ಸಿಬ್ಬಂದಿ ಮತ್ತು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ರೈಲ್ವೆ ಅಧಿಕಾರಿಗಳು ಮತ್ತು ಪೊಲೀಸರು ಕೆಲವು ಕ್ರಮಗಳನ್ನು ಕೈಗೊಂಡಿದ್ದಾರೆ. ರೈಲುಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸುವ ಕೆಲಸವಾಗಿದೆ. ರೈಲ್ವೆ ಹಳಿ ಮೇಲೂ ಸಿಬ್ಬಂದಿ ನಿಯೋಜನೆಯೊಂದಿಗೆ ಸಿಸಿಟಿವಿ ಕ್ಯಾಮರಾಗಳನ್ನು ಕಣ್ಗಾವಲು ಇರಿಸಲಾಗಿದೆ. ಆದರೂ, ಕಲ್ಲು ತೂರಾಟದ ಘಟನೆಗಳು ವರದಿಯಾಗುತ್ತಿವೆ.
ಈ ಹಿಂದಿನ ಕಲ್ಲು ತೂರಾಟ ಘಟನೆಗಳು:
ರಾಜ್ಯದ ಹಲವೆಡೆವಂದೇ ಭಾರತ್ ಎಕ್ಸ್ಪ್ರೆಸ್ ಸೇರಿಹಲವು ರೈಲುಗಳ ಮೇಲೆ ಕಲ್ಲು ತೂರಾಟ ಘಟನೆಗಳು ನಡೆದಿದೆ. ಮಲಪ್ಪುರಂ ಜಿಲ್ಲೆಯ ತಾನೂರ್ ಬಳಿ ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ನಡೆಸಿದ ಆರೋಪಿಯೋರ್ವನನ್ನು ಬಂಧಿಸಲಾಗಿದ್ದು, ಈತ ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾನೆ. ಅಲ್ಲದೇ, ಕಳೆದ ತಿಂಗಳು ಸರಣಿ ಘಟನೆಗಳು ವರದಿಯಾಗಿದ್ದವು.
ಆಗಸ್ಟ್ 13ರಂದು ಚೆನ್ನೈ ಸೂಪರ್ಫಾಸ್ಟ್, ನೇತ್ರಾವತಿ ಎಕ್ಸ್ಪ್ರೆಸ್ ಮತ್ತು ಓಖಾ ಎಕ್ಸ್ಪ್ರೆಸ್ ಮೇಲೆಯೂ ಕಲ್ಲು ತೂರಾಟ ನಡೆಸಲಾಗಿತ್ತು. ಇದರ ನಂತರ ಆಗಸ್ಟ್ 14ರಂದು ಕನ್ನಪುರಂ ಮತ್ತು ಪಾಪಿನಿಸ್ಸೆರಿ ನಡುವೆ ದುರಂತೋ ಎಕ್ಸ್ಪ್ರೆಸ್ ಮೇಲೆ ಕಲ್ಲು ಎಸೆಯಲಾಗಿತ್ತು. ಆಗಸ್ಟ್ 15ರಂದು ಕೋಝಿಕ್ಕೋಡ್ ಮತ್ತು ಕಲ್ಲೈ ನಡುವೆ ಯಶವಂತಪುರ ಎಕ್ಸ್ಪ್ರೆಸ್ ಮೇಲೆ ಕಲ್ಲು ತೂರಾಟ ನಡೆದಿತ್ತು. ಕಣ್ಣೂರು ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗಳಿಗೆ ಸಂಬಂಧಿಸಿದಂತೆ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಮೂವರು ಆರೋಪಿಗಳನ್ನು ಬಂಧಿಸಿತ್ತು.
Kasaragod stone pelted on express train, glass broken.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm