ಬ್ರೇಕಿಂಗ್ ನ್ಯೂಸ್
05-09-23 05:45 pm HK News Desk ದೇಶ - ವಿದೇಶ
ನವದೆಹಲಿ, ಸೆ.05: ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಹೆಸರನ್ನು ಇಂಡಿಯಾ ಬದಲು 'ರಿಪಬ್ಲಿಕ್ ಆಫ್ ಭಾರತʼ ಎಂದು ಮರು ನಾಮಕರಣ ಮಾಡಲು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಹೊಸ ವಿಧೇಯಕ ಜಾರಿಗೆ ತರಲು ಮುಂದಾಗಿದೆ. ಈ ರೀತಿಯ ಪ್ರಸ್ತಾಪ ಚರ್ಚೆಯ ಮುನ್ನೆಲೆಗೆ ಬರುತ್ತಲೇ ಪ್ರತಿಪಕ್ಷಗಳು ಟೀಕಾಸ್ತ್ರ ಪ್ರಯೋಗಿಸಿದೆ.
ಪ್ರತಿಪಕ್ಷಗಳ ಒಕ್ಕೂಟ ʼINDIA’ ಗೆ ಠಕ್ಕರ್ ಎನ್ನುವಂತೆ ಮೋದಿ ಸರ್ಕಾರ ಇಂಡಿಯಾ ಅಲ್ಲ, ನಮ್ಮ ದೇಶ ಭಾರತ ಎಂದು ಪ್ರತ್ಯಸ್ತ್ರ ಮೊಳಗಿಸುತ್ತಿದೆ. ಇತ್ತೀಚೆಗೆ ರಾಷ್ಟ್ರಪತಿ ಭವನದಿಂದ ಸೆಪ್ಟೆಂಬರ್ 9ರಂದು ನಡೆಯುವ ಜಿ20 ದೇಶಗಳ ನಾಯಕರ ಔತಣಕೂಟಕ್ಕೆ ಪ್ರತಿಪಕ್ಷಗಳಿಗೆ ಆಹ್ವಾನ ಹೋಗಿದ್ದು, ಅದರಲ್ಲಿ ʼPresident of India’ ಬದಲಿಗೆ ʼPresident of Bharatʼ ಎಂದು ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಕೇಂದ್ರದ ವಿರುದ್ಧ ಟೀಕೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಇಂಡಿಯಾವನ್ನು ಭಾರತ ಮಾಡಲು ಮುಂದಾಗಿದೆ ಎನ್ನುವ ಚರ್ಚೆ ಮುನ್ನೆಲೆಗೆ ಬಂದಿದೆ.
![]()
ಚರ್ಚೆಗೀಡಾಗಿರುವ ಸುದ್ದಿ ನಿಜವಾಗಿದೆ. ರಾಷ್ಟ್ರಪತಿ ಭವನವು ಸೆಪ್ಟೆಂಬರ್ 9ರಂದು ಸಾಮಾನ್ಯವಾಗಿರುತ್ತಿದ್ದ ʼPresident of India’ ಬದಲಿಗೆ ʼPresident of Bharatʼ ಎಂದು ಜಿ20 ಔತಣಕೂಟಕ್ಕೆ ಆಹ್ವಾನವನ್ನು ಕಳುಹಿಸಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಿಜೆಪಿ ನಾಯಕ ಹಿಮಂತ ಬಿಸ್ವಾಸ್ ಶರ್ಮಾ ಕೂಡ ಈ ಕುರಿತು ಟ್ವೀಟ್ ಮಾಡಿದ್ದಾರೆ. ʼʼRepublic of Bharath- ನಮ್ಮ ನಾಗರಿಕತೆ ಅಮೃತ ಕಾಲದ ಕಡೆಗೆ ಧೈರ್ಯದಿಂದ ಮುನ್ನಡೆಯುತ್ತಿರುವುದಕ್ಕೆ ಸಂತೋಷ ಮತ್ತು ಹೆಮ್ಮೆಯಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ʼಇಂಡಿಯಾʼವನ್ನು ಬದಲಿಸಿ ʼಭಾರತʼ ಎಂದು ಮಾಡಬೇಕು ಎಂಬುದು ಬಿಜೆಪಿಯ ಬಹುಕಾಲದ ಬೇಡಿಕೆ. ಈ ಹಿಂದೆ ಹಿಮಂತ ಬಿಸ್ವ ಶರ್ಮಾ, ಆರೆಸ್ಸೆಸ್ ಮುಖಂಡ ಮೋಹನ ಭಾಗವತ್ ಕೂಡ ಇದೇ ರೀತಿಯ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಸೆ.18ರಿಂದ 22ರ ವರೆಗೆ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿದ್ದು ಅದರಲ್ಲಿ ಕೆಲವು ಮಸೂದೆಗಳನ್ನು ಜಾರಿಗೊಳಿಸುವ ಇರಾದೆಯನ್ನು ಕೇಂದ್ರ ಸರ್ಕಾರ ಹೊಂದಿದೆ.
The Narendra Modi-led Central government, which has been emphasising liberating the people of the country from the “slavery mentality” and any elements related to such a psyche during the ongoing “Amrit Kaal”, is reportedly planning to remove the word “India” from the Constitution, sources in the know of things claimed, adding that a preparation pertaining to the proposal is underway.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm