ಬ್ರೇಕಿಂಗ್ ನ್ಯೂಸ್
07-09-23 07:14 pm HK News Desk ದೇಶ - ವಿದೇಶ
ಚೆನ್ನೈ, ಸೆ 07: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಕುರಿತು ನಡೆಯುತ್ತಿರುವ ವಿವಾದಗಳ ನಡುವೆ, ಇದೀಗ ಡಿಎಂಕೆ ಸಂಸದ ಎ ರಾಜಾ ಸನಾತನ ಧರ್ಮವನ್ನು ಎಚ್ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ರೋಗಗಳಿಗೆ ಹೋಲಿಸಿ ನೀಡಿರುವ ಹೇಳಿಕೆ ಭಾರೀ ವಿರೋಧಕ್ಕೆ ಗುರಿಯಾಗಿದೆ.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಎ.ರಾಜಾ, ಸನಾತನ ಧರ್ಮವನ್ನು ಮಲೇರಿಯಾ, ಡೆಂಗ್ಯೂ ಅಂತ ಹೇಳಿ ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಮೃದುವಾಗಿ ಹೇಳಿದ್ದರು. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಸನಾತನ ಧರ್ಮವನ್ನು ಎಚ್ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಅವಸ್ಥೆಗಳಿಂದ ತುಂಬಿದ ಕಾಯಿಲೆಯಾಗಿ ನೋಡಬೇಕಾಗಿದೆ ಎಂದು ಹೇಳಿದ್ದಾರೆ.
ಅಷ್ಟೆ ಅಲ್ಲದೆ ಯಾರನ್ನಾದರೂ ಕರೆತನ್ನಿ, ನಾನು ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧ ಎಂದು ಎ ರಾಜ ಸವಾಲ್ ಹಾಕಿದ್ದಾರೆ. ಇನ್ನು 10 ಲಕ್ಷ ಅಥವಾ 1 ಕೋಟಿಯಾದರೂ ಪರವಾಗಿಲ್ಲ, ಯಾವುದೇ ಆಯುಧ ಹಿಡಿದು ಬಂದರೂ ನಾನು ಪೆರಿಯಾರ್ ಮತ್ತು ಅಂಬೇಡ್ಕರ್ ಪುಸ್ತಕಗಳೊಂದಿಗೆ ದೈರ್ಯವಾಗಿ ಚರ್ಚೆಗೆ ಬರುತ್ತೇನೆ ಎಂದು ತಿಳಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದರು. ಉದಯನಿಧಿ ಹೇಳಿಕೆಗೆ ರಾಷ್ಟ್ರವ್ಯಾಪಿ ವಿರೋಧ ವ್ಯಕ್ತವಾಗಿತ್ತು. ಇದೀಗ ಅವರದ್ದೆ ಪಕ್ಷದ ನಾಯಕನ ಹೇಳಿಕೆ ಸಂಚಲನ ಸೃಷ್ಟಿಸುತ್ತಿದೆ.
ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ, ಸನಾತನ ಧರ್ಮವನ್ನು ಅನುಸರಿಸುವ ಶೇ 80 ಭಾರತದ ಜನಸಂಖ್ಯೆಯನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
'ಉದಯನಿಧಿ ಸ್ಟಾಲಿನ್ ನಂತರ, ಈಗ ಡಿಎಂಕೆಯ ಎ ರಾಜಾ ಅವರು ಸನಾತನ ಧರ್ಮವನ್ನು ಅವಹೇಳನ ಮಾಡಿದ್ದಾರೆ. ಇದು ಸನಾತನ ಧರ್ಮವನ್ನು ಅನುಸರಿಸುವ ಶೇ 80 ಭಾರತದ ಜನಸಂಖ್ಯೆಯನ್ನು ಗುರಿಯಾಗಿಸಿಕೊಂಡು ಮಾಡಿದ ದ್ವೇಷದ ಭಾಷಣವಲ್ಲದೆ ಬೇರೇನೂ ಅಲ್ಲ' ಎಂದು ತಿಳಿಸಿದ್ದಾರೆ.
ಇದು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಿಜವಾದ ಲಕ್ಷಣವಾಗಿದೆ. ಹಿಂದೂಗಳನ್ನು ಕೀಳಾಗಿ ಕಾಣುವುದೊಂದೇ ಚುನಾವಣೆಗಳನ್ನು ಗೆಲ್ಲುವ ಏಕೈಕ ಮಾರ್ಗವೆಂದು ಅವರು ಭಾವಿಸಿದಂತಿದೆ. ಇದನ್ನು ಮುಂಬೈ ಸಭೆಯಲ್ಲಿ ನಿರ್ಧರಿಸಲಾಗಿದೆಯೇ ಎಂದು ಮಾಳವೀಯ ಪ್ರಶ್ನಿಸಿದ್ದಾರೆ.
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಕಳೆದ ವಾರ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿ ವಿವಾದವನ್ನು ಹುಟ್ಟು ಹಾಕಿದ್ದಾರೆ.
ಉದಯನಿಧಿ ಸ್ಟಾಲಿನ್ ಅವರನ್ನು ಬೆಂಬಲಿಸಿರುವ ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್, ಪ್ರಧಾನಿ ಮೋದಿ ನಕಲಿ ಸುದ್ದಿಗಳನ್ನು ನಂಬುವರೇ ಎಂದು ಪ್ರಶ್ನಿಸಿದ್ದಾರೆ.
Adding more fuel to the Sanatana Dharma row, DMK’s A Raja on Thursday called it to be a social disgrace. He commented, ‘Sanatana Dharma is a social disgrace like HIV and leprosy’ and further added, ‘there was no social stigma attached to malaria and dengue.’
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm