ಬ್ರೇಕಿಂಗ್ ನ್ಯೂಸ್
07-09-23 07:22 pm HK News Desk ದೇಶ - ವಿದೇಶ
ನವದೆಹಲಿ, ಸೆ 07: ಗಣಿಯೊಳಗೆ ಸಿಲುಕಿದ 65 ಕಾರ್ಮಿಕರ ರಕ್ಷಣೆಯ ಕಥೆಯುಳ್ಳ ಅಕ್ಷಯ್ ಕುಮಾರ್ ನಟನೆಯ ‘ಮಿಷನ್ ರಾಣಿಗಂಜ್: ದಿ ಗ್ರೇಟ್ ಇಂಡಿಯಾ ರೆಸ್ಕ್ಯೂ’ ಚಿತ್ರದಲ್ಲಿದ್ದ ‘ಇಂಡಿಯಾ’ ಪದವನ್ನು ಈಗ ‘ಭಾರತ್’ ಎಂದು ಬದಲಿಸಿರುವ ಸಂಗತಿ ಈಗ ವ್ಯಾಪಕವಾಗಿ ಚರ್ಚೆಯಾಗುತ್ತಿದೆ.
ಜಿ20 ಶೃಂಗದಲ್ಲಿ ಪಾಲ್ಗೊಳ್ಳುವ ವಿಶ್ವದ ನಾಯಕರಿಗೆ ರಾಷ್ಟ್ರಪತಿ ನೀಡಿರುವ ಭೋಜನಕೂಟದ ಆಹ್ವಾನ ಪತ್ರಿಕೆಯಲ್ಲಿ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಮುದ್ರಿಸಿದ ನಂತರ ಇಂಡಿಯಾ ಹಾಗೂ ಭಾರತ್ ಎಂಬ ಹೆಸರಿನ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿದೆ. ಈ ಚರ್ಚೆಗೆ ಮಿಷನ್ ರಾಣಿಗಂಜ್ ಚಿತ್ರ ಈಗ ಹೊಸ ಸೇರ್ಪಡೆ.
ಹೆಸರು ಬದಲಾವಣೆ ಕುರಿತು ಅಕ್ಷಯ್ ಕುಮಾರ್ ಅವರು ತಮ್ಮ ಮೈಕ್ರೊ ಬ್ಲಾಗಿಂಗ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರ ಟ್ವೀಟ್ ಕುರಿತು ವ್ಯಾಪಕ ಪರ ಹಾಗೂ ವಿರೋಧ ಚರ್ಚೆಗಳು ನಡೆಯುತ್ತಿವೆ. ಅಕ್ಷಯ್ ಕುಮಾರ್ ಅವರು ತಮ್ಮ ಹಿಂದಿನ ಟ್ವೀಟ್ನಲ್ಲಿ ಚಿತ್ರದ ಹೆಸರಿನಲ್ಲಿದ್ದ ‘ಇಂಡಿಯಾ’ವನ್ನು ಬಳಸಿದ್ದರು. ಆದರೆ ಆ ಟ್ವೀಟ್ ಈಗ ಎಲ್ಲಿ ಹೋಯಿತು? ಎಂದು ಕೆಲವರು ಪ್ರಶ್ನಿಸಿದ್ದಾರೆ.
ಹಾಗಿದ್ದರೆ ನಿಮ್ಮ ಮುಂದಿನ ಚಿತ್ರವೂ ’ಭಾರತ್’ ಆಗಿರುತ್ತದೆಯೇ ಎಂದು ಮತ್ತೊಬ್ಬರು ಕೇಳಿದ್ದಾರೆ. ಕಳೆದ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಭಾರತದ ಪೌರತ್ವ ಪಡೆದಿರುವ ಅಕ್ಷಯ್ ಕುಮಾರ್ ಅವರ ಕೆನಡಾ ಪೌರತ್ವದ ಕುರಿತೂ ಎಕ್ಸ್ ವೇದಿಕೆಯಲ್ಲಿ ಚರ್ಚೆಗಳು ನಡೆದಿವೆ.
ಮಿಷನ್ ರಾಣಿಗಂಜ್ ಚಿತ್ರವು ಕಲ್ಲಿದ್ದಲ್ಲಿ ಗಣಿ ಕುರಿತಾಗಿದ್ದು, ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಎಂಬುವವರ ಜೀವನಾಧಾರಿತವಾಗಿದೆ. 1989ರಲ್ಲಿ ಕಲ್ಲಿದ್ದಲ್ಲು ಗಣಿಯಲ್ಲಿ ಉಂಟಾದ ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆಯಲ್ಲಿ ಅವರು ಮಹತ್ತರ ಪಾತ್ರ ವಹಿಸಿದ್ದರು. ಚಿತ್ರದಲ್ಲಿ ಪರಿಣೀತಿ ಛೋಪ್ರಾ, ಕುಮುದ್ ಮಿಶ್ರಾ, ಪವನ್ ಮಲ್ಹೋತ್ರಾ, ರವಿ ಕಿಶನ್, ವರುಣ್ ಬಡೋಲಾ, ದಿಬ್ಯೇಂದು ಭಟ್ಟಾಚಾರ್ಯ, ರಾಜೇಶ್ ಶರ್ಮಾ, ವಿಜೇಂದ್ರ ಸೆಕ್ಸೆನಾ ನಟಿಸಿದ್ದಾರೆ. ಟಿನು ಸುರೇಶ್ ದೇಸಾಯಿ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
Akshay Kumar is back with a new film, and it has an interesting ‘Bharat’ connection. The actor dropped the motion poster of Mission Raniganj on Wednesday, but the internet noticed a couple of altered references to ‘Bharat’ in his Instagram post.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 04:45 pm
HK News Staffer
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm