ಬ್ರೇಕಿಂಗ್ ನ್ಯೂಸ್
08-09-23 09:45 pm HK News Desk ದೇಶ - ವಿದೇಶ
ಗಾಜಿಯಾಬಾದ್, ಸೆ.8: ನಾಯಿ ಕಚ್ಚಿದ ವಿಷಯವನ್ನು ಮನೆಯವರಿಗೆ ತಿಳಿಸದೇ ಒಂದೂವರೆ ತಿಂಗಳ ನಂತರ ರೇಬಿಸ್ ರೋಗಕ್ಕೆ ತುತ್ತಾಗಿ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಬಳಿಯ ಬುಲಂದ್ ಶಹರ್ ನಗರದ ನಿವಾಸಿ ಶಹವಾಜ್ ಮೃತಪಟ್ಟ ಬಾಲಕ. ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ ಶಹವಾಜ್ ಒಂದೂವರೆ ತಿಂಗಳ ಹಿಂದೆ ಸ್ನೇಹಿತರೊಂದಿಗೆ ಮನೆಯ ಬಳಿ ಆಟವಾಡುತ್ತಿದ್ದಾಗ ನೆರೆ ಮನೆಯ ನಾಯಿ ದಾಳಿ ಮಾಡಿ ಗಾಯಗೊಳಿಸಿತ್ತು. ಗಾಯವಾಗಿದ್ದರೂ ಹುಡುಗ ಮನೆಗೆ ಬಂದು ಪೋಷಕರಿಗೆ ತಿಳಿಸಿರಲಿಲ್ಲ. ನಾಯಿ ಕಚ್ಚಿರುವ ವಿಷಯ ತಿಳಿಸಿದರೆ ಪೋಷಕರು ಬೈತಾರೆ ಎನ್ನುವ ಭಯದಲ್ಲಿ ಹೇಳಿರಲಿಲ್ಲ.
ಒಂದು ತಿಂಗಳ ನಂತರ ಶಹವಾಜ್ ಅಸ್ವಸ್ಥಗೊಂಡಿದ್ದು, ಅಸಹಜವಾಗಿ ವರ್ತಿಸತೊಡಗಿದ್ದ. ಊಟವನ್ನೂ ಬಿಟ್ಟಿದ್ದ. ಆತನನ್ನು ವೈದ್ಯರಲ್ಲಿ ಕರೆದುಕೊಂಡು ಹೋದಾಗ ರೇಬಿಸ್ ರೋಗ ಅಂಟಿರುವುದು ಬಯಲಾಗಿದೆ. ಅಲ್ಲದೆ, ನಾಯಿ ತನಗೆ ಕಡಿದಿದ್ದನ್ನೂ ಪೋಷಕರಲ್ಲಿ ತಿಳಿಸಿದ್ದಾನೆ. ಕೂಡಲೇ ಆತನನ್ನು ಗಾಜಿಯಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ದಿಲ್ಲಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಸಾಧ್ಯವಾಗಲಿಲ್ಲ. ಆಯುರ್ವೇದ ಚಿಕಿತ್ಸೆ ಮಾಡಿಯೂ ಚೇತರಿಕೆ ಕಾಣಲಿಲ್ಲ. ಕೊನೆಗೆ, ರೋಗ ಉಲ್ಬಣಿಸಿ ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ನಲ್ಲಿಯೇ ಅಸುನೀಗಿದ್ದಾನೆ. ಪೋಷಕರು ಈ ಬಗ್ಗೆ ಬುಲಂದ್ ಶಹರ್ನ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದು ನೆರೆಮನೆಯ ನಾಯಿ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
A 14-year-old boy who was bitten by a dog over a month ago and hid the incident from his parents died of rabies in Uttar Pradesh's Ghaziabad. Shahvaz, a student of class 8, died on Monday evening when he was being brought back to Ghaziabad from Bulandshahr, where he was taken for treatment after his condition deteriorated, news agency PTI reported quoting the police.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm