ಬ್ರೇಕಿಂಗ್ ನ್ಯೂಸ್
08-09-23 09:45 pm HK News Desk ದೇಶ - ವಿದೇಶ
ಗಾಜಿಯಾಬಾದ್, ಸೆ.8: ನಾಯಿ ಕಚ್ಚಿದ ವಿಷಯವನ್ನು ಮನೆಯವರಿಗೆ ತಿಳಿಸದೇ ಒಂದೂವರೆ ತಿಂಗಳ ನಂತರ ರೇಬಿಸ್ ರೋಗಕ್ಕೆ ತುತ್ತಾಗಿ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಬಳಿಯ ಬುಲಂದ್ ಶಹರ್ ನಗರದ ನಿವಾಸಿ ಶಹವಾಜ್ ಮೃತಪಟ್ಟ ಬಾಲಕ. ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ ಶಹವಾಜ್ ಒಂದೂವರೆ ತಿಂಗಳ ಹಿಂದೆ ಸ್ನೇಹಿತರೊಂದಿಗೆ ಮನೆಯ ಬಳಿ ಆಟವಾಡುತ್ತಿದ್ದಾಗ ನೆರೆ ಮನೆಯ ನಾಯಿ ದಾಳಿ ಮಾಡಿ ಗಾಯಗೊಳಿಸಿತ್ತು. ಗಾಯವಾಗಿದ್ದರೂ ಹುಡುಗ ಮನೆಗೆ ಬಂದು ಪೋಷಕರಿಗೆ ತಿಳಿಸಿರಲಿಲ್ಲ. ನಾಯಿ ಕಚ್ಚಿರುವ ವಿಷಯ ತಿಳಿಸಿದರೆ ಪೋಷಕರು ಬೈತಾರೆ ಎನ್ನುವ ಭಯದಲ್ಲಿ ಹೇಳಿರಲಿಲ್ಲ.
ಒಂದು ತಿಂಗಳ ನಂತರ ಶಹವಾಜ್ ಅಸ್ವಸ್ಥಗೊಂಡಿದ್ದು, ಅಸಹಜವಾಗಿ ವರ್ತಿಸತೊಡಗಿದ್ದ. ಊಟವನ್ನೂ ಬಿಟ್ಟಿದ್ದ. ಆತನನ್ನು ವೈದ್ಯರಲ್ಲಿ ಕರೆದುಕೊಂಡು ಹೋದಾಗ ರೇಬಿಸ್ ರೋಗ ಅಂಟಿರುವುದು ಬಯಲಾಗಿದೆ. ಅಲ್ಲದೆ, ನಾಯಿ ತನಗೆ ಕಡಿದಿದ್ದನ್ನೂ ಪೋಷಕರಲ್ಲಿ ತಿಳಿಸಿದ್ದಾನೆ. ಕೂಡಲೇ ಆತನನ್ನು ಗಾಜಿಯಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ದಿಲ್ಲಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಸಾಧ್ಯವಾಗಲಿಲ್ಲ. ಆಯುರ್ವೇದ ಚಿಕಿತ್ಸೆ ಮಾಡಿಯೂ ಚೇತರಿಕೆ ಕಾಣಲಿಲ್ಲ. ಕೊನೆಗೆ, ರೋಗ ಉಲ್ಬಣಿಸಿ ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ನಲ್ಲಿಯೇ ಅಸುನೀಗಿದ್ದಾನೆ. ಪೋಷಕರು ಈ ಬಗ್ಗೆ ಬುಲಂದ್ ಶಹರ್ನ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದು ನೆರೆಮನೆಯ ನಾಯಿ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
A 14-year-old boy who was bitten by a dog over a month ago and hid the incident from his parents died of rabies in Uttar Pradesh's Ghaziabad. Shahvaz, a student of class 8, died on Monday evening when he was being brought back to Ghaziabad from Bulandshahr, where he was taken for treatment after his condition deteriorated, news agency PTI reported quoting the police.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am