ಬ್ರೇಕಿಂಗ್ ನ್ಯೂಸ್
08-09-23 09:45 pm HK News Desk ದೇಶ - ವಿದೇಶ
ಗಾಜಿಯಾಬಾದ್, ಸೆ.8: ನಾಯಿ ಕಚ್ಚಿದ ವಿಷಯವನ್ನು ಮನೆಯವರಿಗೆ ತಿಳಿಸದೇ ಒಂದೂವರೆ ತಿಂಗಳ ನಂತರ ರೇಬಿಸ್ ರೋಗಕ್ಕೆ ತುತ್ತಾಗಿ 14 ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಬಳಿಯ ಬುಲಂದ್ ಶಹರ್ ನಗರದ ನಿವಾಸಿ ಶಹವಾಜ್ ಮೃತಪಟ್ಟ ಬಾಲಕ. ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದ ಶಹವಾಜ್ ಒಂದೂವರೆ ತಿಂಗಳ ಹಿಂದೆ ಸ್ನೇಹಿತರೊಂದಿಗೆ ಮನೆಯ ಬಳಿ ಆಟವಾಡುತ್ತಿದ್ದಾಗ ನೆರೆ ಮನೆಯ ನಾಯಿ ದಾಳಿ ಮಾಡಿ ಗಾಯಗೊಳಿಸಿತ್ತು. ಗಾಯವಾಗಿದ್ದರೂ ಹುಡುಗ ಮನೆಗೆ ಬಂದು ಪೋಷಕರಿಗೆ ತಿಳಿಸಿರಲಿಲ್ಲ. ನಾಯಿ ಕಚ್ಚಿರುವ ವಿಷಯ ತಿಳಿಸಿದರೆ ಪೋಷಕರು ಬೈತಾರೆ ಎನ್ನುವ ಭಯದಲ್ಲಿ ಹೇಳಿರಲಿಲ್ಲ.
ಒಂದು ತಿಂಗಳ ನಂತರ ಶಹವಾಜ್ ಅಸ್ವಸ್ಥಗೊಂಡಿದ್ದು, ಅಸಹಜವಾಗಿ ವರ್ತಿಸತೊಡಗಿದ್ದ. ಊಟವನ್ನೂ ಬಿಟ್ಟಿದ್ದ. ಆತನನ್ನು ವೈದ್ಯರಲ್ಲಿ ಕರೆದುಕೊಂಡು ಹೋದಾಗ ರೇಬಿಸ್ ರೋಗ ಅಂಟಿರುವುದು ಬಯಲಾಗಿದೆ. ಅಲ್ಲದೆ, ನಾಯಿ ತನಗೆ ಕಡಿದಿದ್ದನ್ನೂ ಪೋಷಕರಲ್ಲಿ ತಿಳಿಸಿದ್ದಾನೆ. ಕೂಡಲೇ ಆತನನ್ನು ಗಾಜಿಯಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ದಿಲ್ಲಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು ಚಿಕಿತ್ಸೆ ಸಾಧ್ಯವಾಗಲಿಲ್ಲ. ಆಯುರ್ವೇದ ಚಿಕಿತ್ಸೆ ಮಾಡಿಯೂ ಚೇತರಿಕೆ ಕಾಣಲಿಲ್ಲ. ಕೊನೆಗೆ, ರೋಗ ಉಲ್ಬಣಿಸಿ ಆಸ್ಪತ್ರೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ನಲ್ಲಿಯೇ ಅಸುನೀಗಿದ್ದಾನೆ. ಪೋಷಕರು ಈ ಬಗ್ಗೆ ಬುಲಂದ್ ಶಹರ್ನ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದು ನೆರೆಮನೆಯ ನಾಯಿ ಮಾಲೀಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
A 14-year-old boy who was bitten by a dog over a month ago and hid the incident from his parents died of rabies in Uttar Pradesh's Ghaziabad. Shahvaz, a student of class 8, died on Monday evening when he was being brought back to Ghaziabad from Bulandshahr, where he was taken for treatment after his condition deteriorated, news agency PTI reported quoting the police.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm