ಬ್ರೇಕಿಂಗ್ ನ್ಯೂಸ್
16-09-23 03:26 pm HK Desk news ದೇಶ - ವಿದೇಶ
ಚೆನ್ನೈ, ಸೆ.16: ಉಗ್ರ ತರಬೇತಿ ಹಾಗೂ ನೇಮಕಾತಿ ಮಾಡಿಕೊಳ್ಳುತ್ತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಎನ್ಐಎ ಅಧಿಕಾರಿಗಳು ತಮಿಳುನಾಡು ಮತ್ತು ತೆಲಂಗಾಣ ಸೇರಿದಂತೆ ಸುಮಾರು 30 ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾ ನಡೆಸಿದೆ.
ಅಧಿಕಾರಿಗಳ ತಂಡ ತಮಿಳುನಾಡಿನ ಕೊಯಮತ್ತೂರು ಮತ್ತು ಚೆನ್ನೈನಲ್ಲೂ ದಾಳಿ ನಡೆದಿದೆ ಎಂದು ಮಾಹಿತಿ ಲಭ್ಯವಾಗಿದ್ದು. ದಕ್ಷಿಣ ಭಾರತದಲ್ಲಿ ಉಗ್ರ ತರಬೇತಿ ಕೇಂದ್ರಗಳನ್ನು ನಿರ್ನಾಮ ಮಾಡುವ ಉದ್ದೇಶದಿಂದ ತಪಾಸಣೆ ನಡೆಸಲಾಗಿದೆ ಎಂದು ಎನ್ಐಎ ತಿಳಿಸಿದೆ.
ಕೊಯಮತ್ತೂರಿನ 21 ಸ್ಥಳಗಳು, ಚೆನ್ನೈನ ಮೂರು ಸ್ಥಳಗಳು, ಹೈದರಾಬಾದ್ನ ಐದು ಸ್ಥಳಗಳು ಮತ್ತು ತೆಂಕಶಿಯ ಒಂದು ಸ್ಥಳಗಳಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದೆ ಎನ್ನಲಾಗಿದೆ.
ಕೊಯಮತ್ತೂರಿನಲ್ಲಿ, ಕೋವೈ ಅರೇಬಿಕ್ ಕಾಲೇಜಿಗೆ ಸಂಬಂಧಿಸಿದ ಸ್ಥಳಗಳಲ್ಲಿ ವಿದ್ಯಾರ್ಥಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿದೆ ಎಂಬ ಮಾಹಿತಿಯ ಮೇಲೆ ಅರೇಬಿಕ್ ಕಾಲೇಜಿನ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಷ್ಟು ಮಾತ್ರವಲ್ಲದೆ ಕೊಯಮತ್ತೂರು ಕಾರ್ಪೊರೇಷನ್ ನ 82ನೇ ವಾರ್ಡ್ ಕೌನ್ಸಿಲರ್ ಡಿ.ಎಂ.ಕೆ. ಸದಸ್ಯರ ಮನೆಯಲ್ಲೂ ತಪಾಸಣೆ ನಡೆಸಲಾಯಿತು. ಕೊಯಮತ್ತೂರಿನ ಪೆರುಮಾಳ್ ಕೋವಿಲ್ ಸ್ಟ್ರೀಟ್ ನ ಎಂ. ಮುಬಾಶಿರಾ ಅವರ ಮನೆ ಮೇಲೆ ದಾಳಿ ನಡೆಸಿ ಅವರ ಪತಿಯನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಕೊಯಮತ್ತೂರಿನ ಉಕ್ಕಡಮ್ನಲ್ಲಿರುವ ಈಶ್ವರನ್ ಕೋವಿಲ್ ಸ್ಟ್ರೀಟ್ನಲ್ಲಿರುವ ಕೊಟ್ಟೈ ಸಂಗಮೇಶ್ವರರ್ ದೇವಸ್ಥಾನದ ಮುಂಭಾಗದಲ್ಲಿ 2022 ರ ಅಕ್ಟೋಬರ್ 23 ರಂದು ಸ್ಫೋಟ ಸಂಭವಿಸಿತ್ತು. ಈ ಸಂದರ್ಭ ಸುಧಾರಿತ ಸ್ಫೋಟಕ ಸಾಧನದೊಂದಿಗೆ ಕಾರನ್ನು ಓಡಿಸಿದ ಐಸಿಸ್ ಅನುಯಾಯಿ ಜಮೇಶಾ ಮುಬೀನ್ ಸಾವನ್ನಪ್ಪಿದ್ದ. ತನಿಖೆ ನಡೆಸುತ್ತಿದ್ದ ಸಂದರ್ಭ ಅವನು ಕೊಯಮತ್ತೂರಿನ ಕುನಿಯಮುತ್ತೂರಿನಲ್ಲಿ ಕೋವೈ ಅರೇಬಿಕ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕೆಲ ವರ್ಷಗಳ ಹಿಂದೆ ಕಾಲೇಜಿನಲ್ಲಿ ಮುಬೀನ್ ಜೊತೆ 25ಕ್ಕೂ ಹೆಚ್ಚು ಮಂದಿ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಇದರ ನಡುವೆ, ಚೆನ್ನೈನ ಎನ್ಐಎ ಅಧಿಕಾರಿಗಳು ಕೊಯಮತ್ತೂರಿನ ಅರೇಬಿಕ್ ಕಾಲೇಜಿನಲ್ಲಿ ಕಳೆದ ತಿಂಗಳು ಶೋಧ ಕಾರ್ಯ ನಡೆಸಿದ್ದರು ಎಂದು ತಿಳಿದುಬಂದಿದೆ. ತಮಿಳುನಾಡು ಇಸಿಸ್ ಉಗ್ರ ಸಂಘಟನೆ ಮತ್ತು ಅದರ ನೇಮಕಾತಿ ಮತ್ತು ಆಮೂಲಾಗ್ರೀಕರಣ ಒಳಗೊಂಡಂತೆ ಸಂಸ್ಥೆಯು ದಾಖಲೆಗಳನ್ನು ಸಂಗ್ರಹ ಮಾಡಿದ್ದು, ಹೊಸ ಎಫ್ಐಆರ್ ಅನ್ನು ದಾಖಲು ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
National Investigation Agency (NIA) conducts raids at 30 locations in both Tamil Nadu and Telangana in ISIS Radicalization and Recruitment case. The raids are underway in 21 locations in Coimbatore, 3 locations in Chennai, 5 locations in Hyderabad/Cyberabad, and 1 location in Tenkasi.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm