ಬ್ರೇಕಿಂಗ್ ನ್ಯೂಸ್
19-09-23 07:00 pm HK News Desk ದೇಶ - ವಿದೇಶ
ನವದೆಹಲಿ, ಸೆ.19: ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 33 ಶೇಕಡಾ ಮೀಸಲು ಒದಗಿಸುವ "ನಾರಿ ಶಕ್ತಿ ವಂದನ್ ಅಧಿನಿಯಮ್" ಎನ್ನುವ ಮಹಿಳಾ ಮೀಸಲು ಮಸೂದೆಯನ್ನು ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಂಡನೆ ಮಾಡಲಾಗಿದೆ. ನೂತನ ಸಂಸತ್ ಭವನದಲ್ಲಿ ಮಂಗಳವಾರ ಬೆಳಗ್ಗೆ ಹೊಸ ಮಸೂದೆಯನ್ನು ಮಂಡಿಸಲಾಗಿದ್ದು ಪ್ರಧಾನಿ ಮೋದಿ ಸೆಪ್ಟೆಂಬರ್ 19 ಐತಿಹಾಸಿಕ ದಿವಸ ಎಂದು ಬಣ್ಣಿಸಿದ್ದಾರೆ.
ಮೂರು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಿಳಾ ಮೀಸಲು ಮಸೂದೆಯನ್ನು ಮೋದಿ ಸರ್ಕಾರ ಹೊಸ ಸಂಸತ್ತಿನಲ್ಲಿ ನಡೆದ ಮೊದಲ ಅಧಿವೇಶನದಲ್ಲಿಯೇ ಮಂಡನೆ ಮಾಡಿದೆ. ಹೊಸ ಸಂಸತ್ ಭವನದಲ್ಲಿ ಅಧಿವೇಶನ ಮತ್ತು ಇದೇ ಸಂದರ್ಭದಲ್ಲಿ ಐತಿಹಾಸಿಕ ಮಸೂದೆ ಮಂಡನೆ ಮಾಡುತ್ತಿರುವುದು ಐತಿಹಾಸಿಕ ಕ್ಷಣ. ಈ ಮೂಲಕ ನಾವು ಮಹಿಳಾ ಸಶಕ್ತೀಕರಣಕ್ಕೆ ಹೆಬ್ಬಾಗಿಲು ತೆರೆಯುತ್ತಿದ್ದೇವೆ. ವಿರೋಧ ಪಕ್ಷಗಳು ಈ ಮಸೂದೆಯನ್ನು ಬೆಂಬಲಿಸಿ ಅವಿರೋಧವಾಗಿ ಪಾಸ್ ಆಗುವಂತೆ ಮಾಡಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಹಿಳೆಯರ ಮೀಸಲು ಮಸೂದೆ ಪ್ರಜಾಪ್ರಭುತ್ವ ಬಲಪಡಿಸಲಿದೆ. ಹಲವು ದಶಕಗಳಿಂದ ಈ ಕುರಿತು ಚರ್ಚೆ ನಡೆಯುತ್ತ ಬಂದಿತ್ತು. ಈ ಕ್ಷಣದಲ್ಲಿ ನಾವು ಶಾಸನ ರಚನಕಾರರು ಮಸೂದೆ ಜಾರಿಗೆ ಕೈಜೋಡಿಸಬೇಕಾಗಿದೆ. ದೇಶದ ಅಭಿವೃದ್ಧಿ ಪ್ರಕ್ರಿಯೆಯಲ್ಲಿ ಹೆಚ್ಚೆಚ್ಚು ಮಹಿಳೆಯರು ತೊಡಗಿಸಬೇಕಾಗಿದೆ ಎಂದು ಮೋದಿ ಹೇಳಿದ್ದಾರೆ. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಸಂಸತ್ತಿನಲ್ಲಿ ಹೊಸ ಮಸೂದೆಯನ್ನು ಮಂಡನೆ ಮಾಡಿದ್ದಾರೆ.
ದೇಶದಲ್ಲಿ ಒಟ್ಟು 950 ಮಿಲಿಯ ಅಧಿಕೃತ ಮತದಾರರಿದ್ದು ಈ ಪೈಕಿ ಅರ್ಧದಷ್ಟು ಮಹಿಳೆಯರಿದ್ದಾರೆ. ಆದರೆ ಸಂಸತ್ತಿನಲ್ಲಿ ಇವರ ಸಂಖ್ಯೆ ಇರುವುದು ಕೇವಲ ಹದಿನೈದು ಶೇಕಡಾ. ರಾಜ್ಯ ವಿಧಾನಸಭೆಗಳಲ್ಲಿ ಹತ್ತು ಶೇಕಡಾದಷ್ಟು ಮಹಿಳಾ ಪ್ರಾತಿನಿಧ್ಯ ಇದೆ. ಈ ಮಸೂದೆ ಜಾರಿಗೆ ಬಂದಲ್ಲಿ ಮಹಿಳಾ ಸದಸ್ಯರ ಸಂಖ್ಯೆ ಈಗ ಇರುವ 82ರ ಬದಲು 181 ಆಗಲಿದೆ ಎಂದು ಸಚಿವ ಅರ್ಜುನ್ ರಾಮ್ ಮೇಘವಾಲ್ ಅಭಿಪ್ರಾಯ ಪಟ್ಟಿದ್ದಾರೆ.
2010ರಲ್ಲಿ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದ್ದ ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಸಿಗದೆ ಬಿದ್ದು ಹೋಗಿತ್ತು. ಇಂದು ಮಸೂದೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ರಾಜೀವ ಗಾಂಧಿ, ನರಸಿಂಹ ರಾವ್ ಕಾಲದಲ್ಲಿಯೇ ಮಹಿಳಾ ಮೀಸಲು ಮಸೂದೆ ಜಾರಿಗೆ ಪ್ರಯತ್ನ ನಡೆದಿತ್ತು. ಮನಮೋಹನ್ ಸಿಂಗ್ ಸರ್ಕಾರದಲ್ಲಿ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ ಮಾಡಲಾಗಿತ್ತು ಎಂದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಅಮಿತ್ ಷಾ, ಆ ಮಸೂದೆ ಆಗಿನ ಕಾಲದಲ್ಲೇ ಲ್ಯಾಪ್ಸ್ ಆಗಿತ್ತು ಎಂದು ಕುಟುಕಿದರು.
The Women's Reservation Bill that seeks to provide 33 per cent quota for women in Lok Sabha and state assemblies was introduced in the Lok Sabha today in the ongoing special session of Parliament. Calling September 19 a "historic day", Prime Minister Narendra Modi urged the Opposition to unanimously pass the Bill - 'Nari Shakti Vandan Adhiniyam' - that has been hanging for nearly three decades.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
19-08-25 06:59 pm
HK News Desk
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm