ಬ್ರೇಕಿಂಗ್ ನ್ಯೂಸ್
29-09-23 02:47 pm HK News Desk ದೇಶ - ವಿದೇಶ
ಕರಾಚಿ, ಸೆ.29: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 52 ಮಂದಿ ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟದಲ್ಲಿ ಬಲಿಯಾದವರ ಪೈಕಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಕೂಡ ಸೇರಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಗಾಯಗೊಂಡವರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.
ಬಲೋಚಿಸ್ತಾನದ ಮಸ್ತುಂಗ್ ಜಿಲ್ಲೆಯ ಮಸೀದಿಯೊಂದರ ಸಮೀಪ ಸ್ಫೋಟ ಸಂಭವಿಸಿದೆ. ಅಲ್ಫಾಹ್ ರಸ್ತೆಯ ಮದೀನಾ ಮಸೀದಿ ಸಮೀಪ ಈದ್ ಇ ಮಿಲಾದುನ್ ನಬಿ ಮೆರವಣಿಗೆಗಾಗಿ ನೂರಾರು ಜನರು ಸೇರಿದ್ದರು. ಇದು ಆತ್ಮಾಹುತಿ ದಾಳಿ ಎಂದು ನಗರ ಸ್ಟೇಷನ್ ಹೌಸ್ ಅಧಿಕಾರಿ ಜಾವೇದ್ ಲೆಹ್ರಿ ತಿಳಿಸಿದ್ದಾರೆ.

ಈ ಸ್ಫೋಟ ಬೃಹತ್ ಪ್ರಮಾಣದ್ದಾಗಿದೆ ಎಂದು ಮಸ್ತುಂಗ್ ಸಹಾಯಕ ಕಮಿಷನರ್ ಅಟ್ಟಾ ಉಲ್ ಮುನಿಮ್ ತಿಳಿಸಿದ್ದಾರೆ. ಜಿಲ್ಲಾ ಆಡಳಿತದ ಮಾಹಿತಿ ಪ್ರಕಾರ, ಮೃತರಲ್ಲಿ ಮಸ್ತುಂಗ್ ಡಿಎಸ್ಪಿ ನವಾಜ್ ಗಶ್ಕೋರಿ ಸೇರಿದ್ದಾರೆ.
ಇದು ಆತ್ಮಾಹುತಿ ದಾಳಿ ಇರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾಗಿ ಡಾನ್ ಪತ್ರಿಕೆ ತಿಳಿಸಿದೆ. ಮಸೀದಿಯ ಸುತ್ತಮುತ್ತಲೂ ಹತ್ತಾರು ಶವಗಳು ಛಿದ್ರಗೊಂಡು ಬಿದ್ದಿರುವುದು ಸ್ಫೋಟದ ಬಳಿಕದ ವಿಡಿಯೋ ಹಾಗೂ ಚಿತ್ರಗಳಲ್ಲಿ ಕಾಣಿಸಿದೆ. ದೇಹಗಳಿಂದ ಬೇರ್ಪಟ್ಟ ಕೈ ಕಾಲುಗಳು ಎಲ್ಲೆಂದರಲ್ಲಿ ಬಿದ್ದಿದ್ದು, ಘಟನೆಯ ಭೀಕರ ಸ್ವರೂಪಕ್ಕೆ ಸಾಕ್ಷಿಯಾಗಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 28 ಮೃತದೇಹಗಳನ್ನು ಶಹೀದ್ ನವಾಬ್ ಗೌಸ್ ಬಕ್ಷ್ ರೈಸಿನಿ ಸ್ಮಾರಕ ಆಸ್ಪತ್ರೆಗೆ ತರಲಾಗಿದೆ. ಇನ್ನು 22 ಶವಗಳನ್ನು ಮಸ್ತುಂಗ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಡಾ, ಸಯೀದ್ ಮಿರ್ವಾನಿ ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಇದೇ ಜಿಲ್ಲೆಯಲ್ಲಿ ನಡೆದ ಎರಡನೇ ಪ್ರಮುಖ ಸ್ಫೋಟ ಇದಾಗಿದೆ. ಈ ತಿಂಗಳ ಆರಂಭದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಜಮಿಯತ್ ಉಲೆಮಾ- ಇ- ಇಸ್ಲಾಮ್ ಫಾಜಿ (ಜೆಯುಐ- ಎಫ್) ನಾಯಕ ಹಫೀಜ್ ಹಮ್ದುಲ್ಲಾ ಸೇರಿದಂತೆ ಅನೇಕರು ಗಾಯಗೊಂಡಿದ್ದರು.
At least 34 people were killed and more than 100 wounded Friday by a “suicide blast” near a mosque in Pakistan’s Balochistan province, local media reported. The explosion happened in the Mustang district of the southwestern province as people gathered for a religious procession marking the birthday of Prophet Mohammed, Pakistan’s Dawn reported citing the assistant commissioner of Mastung district.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm