ಬ್ರೇಕಿಂಗ್ ನ್ಯೂಸ್
03-10-23 06:57 pm HK News Desk ದೇಶ - ವಿದೇಶ
ಕೊಚ್ಚಿ, ಅ.3: ಕೇರಳದ ಸಿರೋ- ಮಲಬಾರ್ ಚರ್ಚ್ ಸಂಸ್ಥೆಯ ಇಡುಕ್ಕಿ ಡಯಾಸಿಸ್ಗೆ ಸೇರಿದ ಕ್ಯಾಥೋಲಿಕ್ ಪಾದ್ರಿಯೊಬ್ಬರು ಬಿಜೆಪಿ ಸೇರಿದ್ದು, ಅದಾಗಿ ಕೆಲವೇ ಗಂಟೆಗಳಲ್ಲಿ ಅವರನ್ನು ಚರ್ಚ್ನ ಪ್ರತಿನಿಧಿ (ವಿಕಾರ್) ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.
ಕ್ಯಾಥೋಲಿಕ್ ಚರ್ಚ್ನ ಪಾದ್ರಿ ಫಾದರ್ ಕುರಿಯಾಕೋಸ್ ಮಟ್ಟಂ ಅವರು ಸೋಮವಾರ ಇಡುಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್ ಅಜಿ ಅವರಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದಿದ್ದರು. ಇದಾಗಿ ಕೆಲವೇ ಗಂಟೆಗಳಲ್ಲಿ ಇಡುಕ್ಕಿ ವಲಯ ಚರ್ಚ್ ಡಯಾಸಿಸ್ ಅವರ ವಿರುದ್ಧ ಕ್ರಮ ಕೈಗೊಂಡಿದೆ.
ಮಂಕುವಾ ಸೇಂಟ್ ಥಾಮಸ್ ಚರ್ಚ್ನ ಪ್ಯಾರಿಶ್ ಹುದ್ದೆಯಿಂದ ಫಾದರ್ ಮಟ್ಟಂ ಅವರನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಚರ್ಚ್ ತಿಳಿಸಿದೆ. ಚರ್ಚ್ ಪಾದ್ರಿ ಯಾವುದೇ ರಾಜಕೀಯ ಪಕ್ಷ ಸೇರಿಕೊಳ್ಳುವಂತಿಲ್ಲ ಅಥವಾ ಸಕ್ರಿಯವಾಗಿ ಭಾಗವಹಿಸುವಂತೆ ಇಲ್ಲ ಎಂದು ಕೆನಾನ್ ಕಾನೂನು ಹೇಳುತ್ತದೆ. ಅದರಂತೆ, ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಚರ್ಚ್ ವಕ್ತಾರರೊಬ್ಬರು ತಿಳಿಸಿದ್ದಾರೆ. 74 ವರ್ಷದ ಪಾದ್ರಿ ಮಟ್ಟಂ ಅವರು ಕೆಲವೇ ತಿಂಗಳಲ್ಲಿ ಪಾದ್ರಿ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.
ಮಣಿಪುರ ಹಿಂಸಾಚಾರ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಕ್ಯಾಥೋಲಿಕ್ ಚರ್ಚ್ ವಾಗ್ದಾಳಿ ನಡೆಸುತ್ತಿರುವ ನಡುವೆಯೇ ಪಾದ್ರಿ ಕೇಸರಿ ಪಾಳೆಯ ಸೇರ್ಪಡೆಯಾಗಿದ್ದು ಪ್ರಮುಖರನ್ನು ಇರಿಸು ಮುರಿಸು ಮಾಡಿತ್ತು. ಪಾದ್ರಿ ಜೊತೆಗಿನ ಚಿತ್ರಗಳನ್ನು ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕ ಅಜಿ, ದೇಶದಲ್ಲಿನ ಪ್ರಸಕ್ತ ಪರಿಸ್ಥಿತಿಯನ್ನು ಗಮನಿಸಿದ ನಂತರ ಫಾದರ್ ಮಟ್ಟಂ ಅವರು ಬಿಜೆಪಿ ಸೇರಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
A Catholic priest under the Idukki diocese of the Syro-Malabar church was relieved of his duties as vicar on Monday, hours after he joined the BJP. Fr Kuriakose Mattam received the primary membership of the BJP from the party's Idukki district president K S Aji on Monday. Within hours, the Idukki diocese initiated action against him.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm