ಬ್ರೇಕಿಂಗ್ ನ್ಯೂಸ್
04-10-23 11:55 am HK News Desk ದೇಶ - ವಿದೇಶ
ಸಿಕ್ಕಿಂ, ಅ.4: ಉತ್ತರ ಸಿಕ್ಕಿಂ ಪ್ರಾಂತ್ಯದಲ್ಲಿ ಭಾರೀ ಮಳೆಯಾಗಿದ್ದು ನಿನ್ನೆ ನಡುರಾತ್ರಿ 1.30ರ ಸುಮಾರಿಗೆ ವಿಕೋಪ ಸೃಷ್ಟಿಯಾಗಿದೆ. ತೀಸ್ತಾ ನದಿಯಲ್ಲಿ ಭಾರೀ ಪ್ರವಾಹ ಉಂಟಾಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದ 23 ಮಂದಿ ಯೋಧರು ಕೊಚ್ಚಿಕೊಂಡು ಹೋಗಿದ್ದಾರೆ.
ಸೇನಾ ಸಿಬ್ಬಂದಿ ಪ್ರವಾಹ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಏಕಾಏಕಿ ಪ್ರವಾಹ ಬಂದಿದ್ದರಿಂದ ವಾಹನಗಳ ಸಹಿತ ಸೇನಾ ಸಿಬ್ಬಂದಿ ಕೊಂಚಿಕೊಂಡು ಹೋಗಿದ್ದಾರೆ. ಸೇನಾ ವಾಹನ ಸೇರಿ 41 ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
ಲೋನಾಕ್ ಸರೋವರ ಇರುವ ಭಾಗದಲ್ಲಿ ಮೇಘಸ್ಫೋಟ ಉಂಟಾಗಿತ್ತು. ಜಲಾಶಯದಲ್ಲಿ ಭಾರೀ ನೀರು ತುಂಬಿಕೊಂಡಿದ್ದರಿಂದ ನೀರನ್ನು ಹೊರಬಿಡಲಾಗಿತ್ತು. ಈ ವೇಳೆ, ತೀಸ್ತಾ ನದಿಯಲ್ಲಿ ಅನಿರೀಕ್ಷಿತ ಪ್ರವಾಹ ಉಂಟಾಗಿದ್ದು ರಕ್ಷಣಾ ಸಿಬಂದಿಯೇ ಕೊಚ್ಚಿಕೊಂಡು ಹೋಗಿದ್ದಾರೆ. ಇದೇ ವೇಳೆ, ದುರಂತದಲ್ಲಿ ಸಿಲುಕಿದ್ದ 90 ಮಂದಿ ಸ್ಥಳೀಯರನ್ನು ರಕ್ಷಣೆ ಮಾಡಲಾಗಿದೆ.
ರಾಜಧಾನಿ ಗ್ಯಾಂಗ್ಟಕ್ ಬಳಿಯ ಸಿಂಗ್ಟಮ್ ನಲ್ಲಿ ನದಿಯ ಅಡ್ಡಲಾಗಿದ್ದ ಸ್ಟೀಲ್ ಸೇತುವೆ ಸಂಪೂರ್ಣ ಕೊಚ್ಚಿ ಹೋಗಿದೆ. ದುರಂತ ನಡೆದಿರುವ ಸಿಂಗ್ಟಮ್ ಪ್ರದೇಶಕ್ಕೆ ಸಿಎಂ ಪಿಎಸ್ ತಮಾಂಗ್ ಭೇಟಿ ನೀಡಿದ್ದು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ರಾಜಧಾನಿಯಿಂದ 90 ಕಿಮೀ ದೂರದ ಚುಂಗ್ಥಾಂಗ್ನಲ್ಲೂ ಸಾಕಷ್ಟು ಅನಾಹುತ ಸಂಭವಿಸಿದ್ದು, ಸೇನಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಮಳೆಯಿಂದಾಗಿ ಪಶ್ಚಿಮ ಬಂಗಾಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10 ಭಾಗಶಃ ಕೊಚ್ಚಿ ಹೋಗಿದೆ. ಇದರಿಂದ ಈ ಭಾಗದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಿಕ್ಕಿನಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಮುನ್ಸೂಚನೆ ನೀಡಲಾಗಿದೆ.
Connectivity to Sikkim, including capital Gangtok, has been affected on Wednesday after an overflowing Teesta river washed away parts of NH-10 that connects the state to the rest of the country. The river water rose to an alarming level after a cloudburst triggered a flash flood in the northeastern state.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
08-10-25 08:57 pm
HK News Desk
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
08-10-25 10:09 pm
Mangalore Correspondent
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am