ಬ್ರೇಕಿಂಗ್ ನ್ಯೂಸ್
04-10-23 11:55 am HK News Desk ದೇಶ - ವಿದೇಶ
ಸಿಕ್ಕಿಂ, ಅ.4: ಉತ್ತರ ಸಿಕ್ಕಿಂ ಪ್ರಾಂತ್ಯದಲ್ಲಿ ಭಾರೀ ಮಳೆಯಾಗಿದ್ದು ನಿನ್ನೆ ನಡುರಾತ್ರಿ 1.30ರ ಸುಮಾರಿಗೆ ವಿಕೋಪ ಸೃಷ್ಟಿಯಾಗಿದೆ. ತೀಸ್ತಾ ನದಿಯಲ್ಲಿ ಭಾರೀ ಪ್ರವಾಹ ಉಂಟಾಗಿದ್ದು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದ 23 ಮಂದಿ ಯೋಧರು ಕೊಚ್ಚಿಕೊಂಡು ಹೋಗಿದ್ದಾರೆ.
ಸೇನಾ ಸಿಬ್ಬಂದಿ ಪ್ರವಾಹ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಏಕಾಏಕಿ ಪ್ರವಾಹ ಬಂದಿದ್ದರಿಂದ ವಾಹನಗಳ ಸಹಿತ ಸೇನಾ ಸಿಬ್ಬಂದಿ ಕೊಂಚಿಕೊಂಡು ಹೋಗಿದ್ದಾರೆ. ಸೇನಾ ವಾಹನ ಸೇರಿ 41 ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.
![]()
1696391485359.jpg)
ಲೋನಾಕ್ ಸರೋವರ ಇರುವ ಭಾಗದಲ್ಲಿ ಮೇಘಸ್ಫೋಟ ಉಂಟಾಗಿತ್ತು. ಜಲಾಶಯದಲ್ಲಿ ಭಾರೀ ನೀರು ತುಂಬಿಕೊಂಡಿದ್ದರಿಂದ ನೀರನ್ನು ಹೊರಬಿಡಲಾಗಿತ್ತು. ಈ ವೇಳೆ, ತೀಸ್ತಾ ನದಿಯಲ್ಲಿ ಅನಿರೀಕ್ಷಿತ ಪ್ರವಾಹ ಉಂಟಾಗಿದ್ದು ರಕ್ಷಣಾ ಸಿಬಂದಿಯೇ ಕೊಚ್ಚಿಕೊಂಡು ಹೋಗಿದ್ದಾರೆ. ಇದೇ ವೇಳೆ, ದುರಂತದಲ್ಲಿ ಸಿಲುಕಿದ್ದ 90 ಮಂದಿ ಸ್ಥಳೀಯರನ್ನು ರಕ್ಷಣೆ ಮಾಡಲಾಗಿದೆ.



ರಾಜಧಾನಿ ಗ್ಯಾಂಗ್ಟಕ್ ಬಳಿಯ ಸಿಂಗ್ಟಮ್ ನಲ್ಲಿ ನದಿಯ ಅಡ್ಡಲಾಗಿದ್ದ ಸ್ಟೀಲ್ ಸೇತುವೆ ಸಂಪೂರ್ಣ ಕೊಚ್ಚಿ ಹೋಗಿದೆ. ದುರಂತ ನಡೆದಿರುವ ಸಿಂಗ್ಟಮ್ ಪ್ರದೇಶಕ್ಕೆ ಸಿಎಂ ಪಿಎಸ್ ತಮಾಂಗ್ ಭೇಟಿ ನೀಡಿದ್ದು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ರಾಜಧಾನಿಯಿಂದ 90 ಕಿಮೀ ದೂರದ ಚುಂಗ್ಥಾಂಗ್ನಲ್ಲೂ ಸಾಕಷ್ಟು ಅನಾಹುತ ಸಂಭವಿಸಿದ್ದು, ಸೇನಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಮಳೆಯಿಂದಾಗಿ ಪಶ್ಚಿಮ ಬಂಗಾಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 10 ಭಾಗಶಃ ಕೊಚ್ಚಿ ಹೋಗಿದೆ. ಇದರಿಂದ ಈ ಭಾಗದಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಸಿಕ್ಕಿನಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಮುನ್ಸೂಚನೆ ನೀಡಲಾಗಿದೆ.
Connectivity to Sikkim, including capital Gangtok, has been affected on Wednesday after an overflowing Teesta river washed away parts of NH-10 that connects the state to the rest of the country. The river water rose to an alarming level after a cloudburst triggered a flash flood in the northeastern state.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm