ಬ್ರೇಕಿಂಗ್ ನ್ಯೂಸ್
11-11-20 05:21 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 11: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಅವರಿಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
2018ರಲ್ಲಿ ನಡೆದಿದ್ದ ಒಳಾಂಗಣ ವಿನ್ಯಾಸಕಾರ ಅನ್ವಯ್ ನಾಯ್ಕ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಅರ್ನಬ್ ಅವರನ್ನು ಎಂಟು ದಿನಗಳ ಹಿಂದೆ ಬಂಧಿಸಲಾಗಿತ್ತು. ಅವರಿಗೆ ಜಾಮೀನು ನೀಡಲು ನಿರಾಕರಿಸಿದ್ದ ಬಾಂಬೆ ಹೈಕೋರ್ಟ್, ಪ್ರಕರಣದ ತನಿಖೆ ನಡೆಯುತ್ತಿರುವ ಸೆಷನ್ಸ್ ಕೋರ್ಟ್ನಲ್ಲಿಯೇ ಜಾಮೀನಿಗೆ ಅರ್ಜಿ ಸಲ್ಲಿಸುವಂತೆ ಹೇಳಿತ್ತು. ಆದರೆ ಅರ್ನಬ್ ಅವರ ವಕೀಲ ಹರೀಶ್ ಸಾಳ್ವೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಬುಧವಾರ ಅರ್ನಬ್ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಅರ್ನಬ್ ಅವರಿಗೆ ಜಾಮೀನು ಮಂಜೂರು ಮಾಡಿದೆ. ಇದೇ ಸಂದರ್ಭದಲ್ಲಿ ಸುಪ್ರೀಂಕೋರ್ಟ್, ಮಹಾರಾಷ್ಟ್ರ ಸರ್ಕಾರ ಮತ್ತು ಪೊಲೀಸರ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿತು.


50,000 ರೂ ವೈಯಕ್ತಿಕ ಬಾಂಡ್ ಆಧಾರದಲ್ಲಿ ಅರ್ನಬ್ ಅವರಿಗೆ ಜಾಮೀನು ನೀಡಲಾಗಿದೆ. ಅವರೊಂದಿಗೆ ಇತರೆ ಇಬ್ಬರು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಲಾಗಿದೆ. ಅರ್ನಬ್ ಮತ್ತು ಇತರರು ಪ್ರಕರಣದ ತನಿಖೆಗೆ ಸಹಕರಿಸಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.
ನವೆಂಬರ್ 4ರಂದು ಅರ್ನಬ್ ಹಾಗೂ ಇನ್ನಿಬ್ಬರು ಆರೋಪಿಗಳಾದ ಫೆರೋಜ್ ಶೇಕ್ ಮತ್ತು ನಿತೀಶ್ ಸರ್ದಾ ಅವರನ್ನು ಬಂಧಿಸಲಾಗಿತ್ತು. ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡದೆ ಇರುವುದು ಸರಿಯಲ್ಲ ಎಂದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನು ಒಳಗೊಂಡ ನ್ಯಾಯಪೀಠ ಅಭಿಪ್ರಾಯಪಟ್ಟಿತು. ತನ್ನ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ಪೊಲೀಸ್ ಆಯುಕ್ತರಿಗೆ ನ್ಯಾಯಪೀಠ ಸೂಚನೆ ನೀಡಿತು.
Republic TV's Arnab Goswami has been granted bail by the Supreme Court in a 2018 abetment to suicide case. He and two others were arrested last week in connection with the suicide of architect Anvay Naik and his mother.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm