ಬ್ರೇಕಿಂಗ್ ನ್ಯೂಸ್
13-10-23 10:26 am HK News Desk ದೇಶ - ವಿದೇಶ
ನವದೆಹಲಿ, ಅ.13: ಇಸ್ರೇಲ್ ನಲ್ಲಿ ಯುದ್ಧದ ಕಾರಣ ಆತಂಕ ಎದುರಿಸುತ್ತಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಭಾರತ ಸರ್ಕಾರ ಆಪರೇಷನ್ ಅಜಯ್ ಕಾರ್ಯಾಚರಣೆ ಆರಂಭಿಸಿದೆ. 222 ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲಿನಿಂದ ಇಂದು ಬೆಳಗ್ಗೆ ದೆಹಲಿಗೆ ಆಗಮಿಸಿದ್ದು ಪ್ರಯಾಣಿಕರನ್ನು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಸ್ವಾಗತಿಸಿದ್ದಾರೆ.
ಆಪರೇಷನ್ ಅಜಯ್ ಹೆಸರಿನಲ್ಲಿ ಇಸ್ರೇಲ್ನಿಂದ ಹಿಂತಿರುಗಲು ಬಯಸುವ ಭಾರತೀಯ ನಾಗರಿಕರಿಗೆ ಅನುಕೂಲವಾಗುವಂತೆ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಗುರುವಾರ ಸಂಜೆ ಟೆಲ್ ಅವೀವ್ ನಗರದ ವಿಮಾನ ನಿಲ್ದಾಣದಿಂದ ಹೊರಟಿದ್ದ ವಿಮಾನದಲ್ಲಿ 211 ವಯಸ್ಕರು ಮತ್ತು ಒಂದು ಶಿಶು ಭಾರತಕ್ಕೆ ಆಗಮಿಸಿದ್ದಾರೆ.


ಈ ಪೈಕಿ ಐವರು ಕನ್ನಡಿಗರು ಸಹ ಇದ್ದು, ಅವರನ್ನ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ಜಯಚಂದ್ರ ತಿಳಿಸಿದ್ದಾರೆ.
ಇಸ್ರೇಲ್ ಮೇಲೆ ಕಳೆದ ಶನಿವಾರ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಎರಡು ಸಾವಿರಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಇಸ್ರೇಲಿ ಕಡೆಯಿಂದ ಪ್ರತೀಕಾರ ಕಾರ್ಯಾಚರಣೆ ನಡೆದಿದ್ದು 2,500ಕ್ಕೂ ಹೆಚ್ಚು ಜನರನ್ನು ಬಲಿಯಾಗಿದ್ದಾರೆ. ಹಮಾಸ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಇಸ್ರೇಲ್ ಗಾಜಾದಲ್ಲಿ ಭಾರಿ ಪ್ರತಿದಾಳಿ ನಡೆಸಿದೆ. ಈ ನಡುವೆ, ಆತಂಕಕ್ಕೆ ಈಡಾದ ಭಾರತೀಯರನ್ನು ಕರೆತರಲು ಭಾರತ ಸರ್ಕಾರ ವಿಶೇಷ ವಿಮಾನ ವ್ಯವಸ್ಥೆ ಮಾಡಿದೆ.
The first batch of around 200 Indians, including students, returned to the country from Israel onboard a chartered flight in the early hours of Friday. India has launched Operation Ajay to facilitate the return of those who wish to come back home as a series of brazen attacks on Israeli towns by Hamas militants over the weekend triggered fresh tension in the region.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm