ಬ್ರೇಕಿಂಗ್ ನ್ಯೂಸ್
23-10-23 06:49 pm HK News Desk ದೇಶ - ವಿದೇಶ
ಅಹಮದಾಬಾದ್, ಅ 23: ವಾಘ್ ಬಕ್ರಿ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅಕ್ಟೋಬರ್ 22ರಂದು ಅಹ್ಮದಾಬಾದ್ನಲ್ಲಿ ಮೃತಪಟ್ಟಿದ್ದಾರೆ.
ವಾಘ್ ಬಕ್ರೀ ಟೀ ಗ್ರೂಪ್ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಪರಾಗ್ ದೇಸಾಯಿ ಅವರು ಸಾವನ್ನಪ್ಪಿದ್ದಾರೆ. ತಮ್ಮ ಮನೆ ಬಳಿ ನಿಂತಿದ್ದಾಗ ಪರಾಗ್ ದೇಸಾಯಿ ಅವರು ಬೀದಿ ನಾಯಿಗಳ ದಾಳಿಗೆ ತುತ್ತಾಗಿದ್ದರು. ಬೀದಿ ನಾಯಿಗಳು ದಾಳಿ ಮಾಡಿದಾಗ ಪರಾಗ್ ದೇಸಾಯಿ ಅವರು ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯವಾಗಿತ್ತು. ಬಳಿಕ ಬ್ರೈನ್ ಹೆಮರೇಜ್ನಿಂದ 49 ವರ್ಷದ ಪರಾಗ್ ದೇಸಾಯಿ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಪರಾಗ್ ದೇಸಾಯಿ ಅವರು ಕಳೆದ ಅಕ್ಟೋಬರ್ 15ರಂದು ಮನೆ ಬಳಿ ನಿಂತಿದ್ದಾಗ ಬೀದಿ ನಾಯಿಗಳು ದಾಳಿ ಮಾಡಿದ್ದವು. ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಈ ದಾಳಿಯನ್ನು ಗಮನಿಸಿ ಸೆಕ್ಯೂರಿಟಿ ಗಾರ್ಡ್ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪರಾಗ್ ದೇಸಾಯಿ ಅವರನ್ನು ಸ್ಥಳೀಯ ಶೆಲ್ಬಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಬೀದಿ ನಾಯಿಯ ದಾಳಿಯಲ್ಲೂ ಹಲವು ಗಂಭೀರ ಗಾಯಗಳಾಗಿದ್ದು, ಬ್ರೇನ್ ಹೆಮರೇಜ್ಗೆ ತುತ್ತಾಗಿದ್ದರು. ಶೆಲ್ಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ದೇಸಾಯಿ ಅವರನ್ನು ಝೈಡಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಬ್ರೇನ್ ಹೆಮರೇಜ್ನಿಂದ ಉದ್ಯಮಿ ಪರಾಗ್ ದೇಸಾಯಿ ಅವರು ಗುಣಮುಖರಾಗದೆ ಸಾವನ್ನಪ್ಪಿದ್ದಾರೆ.
ಪರಾಗ್ ದೇಸಾಯಿ ಅವರು 2 ಸಾವಿರ ಕೋಟಿ ರೂಪಾಯಿ ವಹಿವಾಟಿನ ವಾಘ್ ಬಕ್ರೀ ಟೀ ಗ್ರೂಪ್ ಕಂಪನಿಯ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರು. ಗುಜರಾತ್ನಲ್ಲಿ ವಾಘ್ ಬಕ್ರೀ ಟೀ ಗ್ರೂಪ್ ಅನ್ನೋ ಬ್ರಾಂಡ್ ಹಾಗೂ ಕಂಪನಿಯನ್ನು ಕಟ್ಟಿ ಬೆಳೆಸಿದವರಲ್ಲಿ ಪರಾಗ್ ಅವರು ಪ್ರಮುಖರು. ಪರಾಗ್ ದೇಸಾಯಿ ಅವರ ಸಾವು ಎಲ್ಲರಿಗೂ ದಿಗ್ಭ್ರಮೆ ಮೂಡಿಸಿದೆ.
Ahmedabad-based Parag Desai (49) Executive Director of Wagh Bakri Tea Group, succumbed to head injuries he had sustained after he fell down while trying to escape an attack by street dogs during his morning walk near his residence in Ambali Road area in the heart of the city.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm