ಬ್ರೇಕಿಂಗ್ ನ್ಯೂಸ್
01-11-23 06:31 pm HK News Desk ದೇಶ - ವಿದೇಶ
ತಿರುವನಂತಪುರಂ, ನ.1: ನಟಿ ರೆಂಜೂಷಾ ಮೆನನ್ ಅವರ ಆಘಾತಕಾರಿ ಸಾವಿನ ಸುದ್ದಿ ಬೆನ್ನಲ್ಲೇ, ಮಲಯಾಳಂ ಚಿತ್ರರಂಗದ ಮತ್ತೊಬ್ಬ ಕಿರುತೆರೆ ನಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. 8 ತಿಂಗಳ ಗರ್ಭಿಣಿಯಾಗಿದ್ದ ಡಾ.ಪ್ರಿಯಾ ಅ.31ರಂದು ಮೃತಪಟ್ಟಿದ್ದಾರೆ.
34 ವರ್ಷದ ಡಾ.ಪ್ರಿಯಾ, 8 ತಿಂಗಳ ತುಂಬು ಗರ್ಭಿಣಿಯಾಗಿದ್ದು ಎಂದಿನಂತೆ ಹೆಲ್ತ್ ಚೆಕಪ್ಗೆ ಖಾಸಗಿ ಆಸ್ಪತ್ರೆಗೆ ಹೋಗಿದ್ದಾಗ ಹೃದಯಾಘಾತವಾಗಿದೆ. ನವಜಾತ ಶಿಶುವನ್ನು ಉಳಿಸಲಾಗಿದ್ದು ಸದ್ಯಕ್ಕೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಿಯಾ ಅವರ ಒಡನಾಡಿ ನಟ ಕಿಶೋರ್ ಸತ್ಯ ಅವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ನಟಿಯ ಸಾವಿನ ಸುದ್ದಿಯನ್ನು ತಿಳಿಸಿದ್ದಾರೆ. ಮಲಯಾಳಂ ಕಿರುತೆರೆ ವಲಯದಲ್ಲಿ ಮತ್ತೊಂದು ಅನಿರೀಕ್ಷಿತ ಸಾವು. ಡಾ.ಪ್ರಿಯಾ ನಿನ್ನೆ ಹೃದಯಾಘಾತದಿಂದ ನಿಧನರಾದರು. ಆಕೆ 8 ತಿಂಗಳ ಗರ್ಭಿಣಿಯಾಗಿದ್ದಳು. ಮಗು ಐಸಿಯುನಲ್ಲಿದೆ. ಬೇರೆ ಯಾವುದೇ ಆರೋಗ್ಯ ಸಮಸ್ಯೆಗಳಿರಲಿಲ್ಲ ಎಂದು ಬರೆದಿದ್ದಾರೆ.
ಡಾ. ಪ್ರಿಯಾ ಮಲಯಾಳಂ ಕಿರುತೆರೆಯಲ್ಲಿ ಚಿರಪರಿಚಿತ ನಟಿಯಾಗಿದ್ದರು. ‘ಕರುತಮುತ್ತು’ ಎನ್ನುವ ಸೀರಿಯಲ್ ನಲ್ಲಿ ಜನಪ್ರಿಯರಾಗಿದ್ದರು. ಮದುವೆಯ ನಂತರ ನಟನೆಯಿಂದ ವಿರಾಮ ಪಡೆದಿದ್ದರು. ವೃತ್ತಿಯಲ್ಲಿ ಪ್ರಸೂತಿ ವೈದ್ಯೆಯೂ ಆಗಿದ್ದರು. ಸದ್ಯ ಎಂಡಿ ವ್ಯಾಸಂಗ ಮಾಡುತ್ತಿದ್ದು ತಿರುವನಂತಪುರಂನ ಪಿಆರ್ಎಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಒಬ್ಬಳೇ ಮಗಳಾಗಿರುವ ಪ್ರಿಯಾ ಸಾವಿನಿಂದ ಆಕೆಯ ತಾಯಿ ಆಘಾತಕ್ಕೆ ಒಳಗಾಗಿದ್ದಾರೆ.
ಅ.30ರಂದು ಜನಪ್ರಿಯ ನಟಿಯಾಗಿದ್ದ ರೆಂಜುಷಾ ಮೆನನ್ ನಿಗೂಢ ರೀತಿಯಲ್ಲಿ ಸಾವು ಕಂಡಿದ್ದರು. ತಿರುವನಂತಪುರದ ಫ್ಲಾಟ್ ಒಂದರಲ್ಲಿ ನಟಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸೀರಿಯಲ್, ಸಿನಿಮಾ ನಟಿಯಾಗಿದ್ದ ರೆಂಜುಷಾ ನಿರ್ಮಾಪಕಿಯಾಗಿಯೂ ಹೆಸರು ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಒಂದಷ್ಟು ಆರ್ಥಿಕ ನಷ್ಟ ಅನುಭವಿಸಿದ್ದರು ಎಂದು ಸಹವರ್ತಿಗಳು ತಿಳಿಸಿದ್ದರು. ಆದರೆ ಇವರ ಪತಿ ಮನೋಜ್ ಕೂಡ ಸಿನಿಮಾ ನಟ. ಕೊಚ್ಚಿ ಮೂಲದ ರೆಂಜುಷಾ ಭರತನಾಟ್ಯ ಕಲಾವಿದೆಯಾಗಿ ಸಾಕಷ್ಟು ಹೆಸರು ಮಾಡಿದ್ದರು. ಸಣ್ಣ ಆರ್ಥಿಕ ಹೊಡೆತಕ್ಕೆ ಸಾವಿಗೆ ಶರಣಾಗಿದ್ದು ಅಭಿಮಾನಿಗಳಲ್ಲಿ ದಿಗ್ಭ್ರಮೆ ಮೂಡಿಸಿದೆ.
Malayalam serial actor Dr Priya, who was eight months pregnant, died a day ago at a private hospital here following a cardiac arrest, one of her colleagues said on Wednesday. The baby of Dr Priya was saved by doctors of the hospital and is presently on ventilator support in the ICU as it was premature, a hospital source said.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
29-06-26 12:41 pm
HK News Staffer
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm