ಬ್ರೇಕಿಂಗ್ ನ್ಯೂಸ್
13-11-20 04:15 pm Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 13: ಗೃಹ ಸಚಿವ ಅಮಿತ್ ಶಾ ಅವರ ಟ್ವಿಟ್ಟರ್ ಖಾತೆಯ ಪ್ರೊಫೈಲ್ ಫೋಟೊವನ್ನು ಗುರುವಾರ ರಾತ್ರಿ ಇದ್ದಕ್ಕಿದ್ದಂತೆ ತೆರವುಗೊಳಿಸಲಾಗಿತ್ತು. ಬಳಿಕ ಅದನ್ನು ಮತ್ತೆ ಪ್ರಕಟಿಸಲಾಗಿದೆ. ಕಾಪಿ ರೈಟ್ ಸಮಸ್ಯೆಯ ಕಾರಣದಿಂದ ಈ ಫೋಟೊವನ್ನು ತೆಗೆದುಹಾಕಿದ್ದಾಗಿ ಟ್ವಿಟ್ಟರ್ ಹೇಳಿತ್ತು.
ಆ ಫೋಟೊದ ಕಾಪಿರೈಟ್ ಹೊಂದಿರುವ ವ್ಯಕ್ತಿ ಅಮಿತ್ ಶಾ ಪ್ರೊಫೈಲ್ ಫೋಟೊದ ವಿರುದ್ಧ ರಿಪೋರ್ಟ್ ಮಾಡಿದ್ದರು. ಹೀಗಾಗಿ ಆ ಫೋಟೊವನ್ನು ಪ್ರೊಫೈಲ್ನಿಂದ ಟ್ವಿಟ್ಟರ್ ತೆರವುಗೊಳಿಸಿತ್ತು. ಆದರೆ ಕೆಲವು ಸಮಯದಲ್ಲಿಯೇ ಅದನ್ನು ಮರುಸ್ಥಾಪಿಸಲಾಯಿತು.
'ಆಕಸ್ಮಿಕ ಪ್ರಮಾದಗಳಿಂದಾಗಿ ನಮ್ಮ ಜಾಗತಿಕ ಕಾಪಿರೈಟ್ ನೀತಿಗಳಿಗೆ ಅನುಸಾರವಾಗಿ ನಾವು ಈ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಿದ್ದೆವು. ಆದರೆ ಕೂಡಲೇ ಈ ನಿರ್ಧಾರವನ್ನು ಹಿಂಪಡೆದುಕೊಳ್ಳಲಾಗಿದ್ದು, ಖಾತೆಯು ಈಗ ಸಂಪೂರ್ಣ ಕಾರ್ಯಾಚರಣೆಗೆ ಲಭ್ಯವಾಗಿದೆ' ಎಂದು ಟ್ವಿಟ್ಟರ್ ವಕ್ತಾರರು ತಿಳಿಸಿದ್ದಾರೆ.

ಟ್ವಿಟ್ಟರ್ ಕಾಪಿರೈಟ್ ನಿಯಮಗಳ ಪ್ರಕಾರ ಫೋಟೊಗ್ರಾಫರ್ ಒಂದು ಫೋಟೊದ ಮೇಲೆ ಹಕ್ಕುಸ್ವಾಮ್ಯ ಹೊಂದಿರಬಹುದು. ಆದರೆ ವಿಷಯದ ಮೇಲೆ ಅಲ್ಲ. ಅಮಿತ್ ಶಾ ಅವರ ಪ್ರೊಫೈಲ್ ಫೋಟೊವನ್ನು ತೆರವುಗೊಳಿಸುತ್ತಿದ್ದಂತೆಯೇ ಟ್ವಿಟ್ಟರ್ನಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಅಮಿತ್ ಶಾ 23 ಮಿಲಿಯನ್ಗೂ ಅಧಿಕ ಹಿಂಬಾಲಕರನ್ನು ಹೊಂದಿದ್ದು, ಅವರು 296 ಮಂದಿಯನ್ನು ಹಿಂಬಾಲಿಸುತ್ತಿದ್ದಾರೆ.
ಇನ್ನೊಂದೆಡೆ ಲೇಹ್ ಪ್ರದೇಶವನ್ನು ಒಮ್ಮೆ ಚೀನಾಕ್ಕೆ ಸೇರಿದ್ದು ಎಂದು ತೋರಿಸಿದ್ದ ಟ್ವಿಟ್ಟರ್, ಈಗ ಲಡಾಖ್ ಕೇಂದ್ರಾಡಳಿತ ಪ್ರದೇಶದ ಬದಲು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದೆ ಎಂದು ತೋರಿಸುತ್ತಿದೆ. ಇದರಿಂದ ಅಸಮಾಧಾನಗೊಂಡಿರುವ ಕೇಂದ್ರ ಸರ್ಕಾರ ಟ್ವಿಟ್ಟರ್ಗೆ ನೋಟಿಸ್ ಜಾರಿಮಾಡಿದೆ.
Micro-blogging site Twitter on Thursday night removed the Display Picture (DP) of Union Home Minister Amit Shah. It, however, reinstated the picture after some time.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm