ಬ್ರೇಕಿಂಗ್ ನ್ಯೂಸ್
11-11-23 01:13 pm HK News Desk ದೇಶ - ವಿದೇಶ
ಉತ್ತರಪ್ರದೇಶ, ನ.11: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. 2024ರ ಜನವರಿಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕಾಗಿ ಇಡೀ ಭಾರತವೇ ಕಾತರದಿಂದ ಕಾಯುತ್ತಿದೆ. ಮುಂದಿನ ವರ್ಷ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಮಂದಿರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್.ಎಸ್.ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ
ದೀಪೋತ್ಸವಕ್ಕೆ ಶೋಭಾಯಾತ್ರೆಗೆ ಚಾಲನೆ :ಇದಕ್ಕೂ ಮುನ್ನ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಜ್ಜಾಗಿದೆ. ದೀಪಾವಳಿ ಹಿನ್ನೆಲೆ ಅಯೋಧ್ಯೆಯಲ್ಲಿನ 51 ಘಾಟ್ಗಳಲ್ಲಿ 24 ಲಕ್ಷಕ್ಕೂ ಅಧಿಕ ದೀಪಗಳನ್ನು ಬೆಳಗಲು ಸಿದ್ಧತೆ ನಡೆಸಲಾಗಿದೆ. ದೀಪೋತ್ಸವ ಸಂಬಂಧ ರಾಮ ಜನ್ಮಭೂಮಿ ಪಥವನ್ನು ಹೂವುಗಳಿಂದ ಅಲಂಕಾರಗೊಳಿಸಲಾಗಿದೆ. ಇಲ್ಲಿನ ಬೀದಿಗಳು ರಂಗೋಲಿಗಳಿಂದ ಕಂಗೊಳಿಸುತ್ತಿವೆ. ಸುಮಾರು 24 ಲಕ್ಷಕ್ಕೂ ಅಧಿಕ ಮಣ್ಣಿನ ದೀಪಗಳಿಂದ ದೀಪೋತ್ಸವ ಆಚರಿಸಲಾಗುತ್ತಿದ್ದು, ಈ ಮೂಲಕ ಗಿನ್ನೆಸ್ ದಾಖಲೆ ಬರೆಯಲು ಮುಂದಾಗಿದೆ. ದೀಪೋತ್ಸವದ ಶೋಭಾಯಾತ್ರೆ ಆರಂಭಗೊಂಡಿದ್ದು, ಈ ವೇಳೆ ಮಹಿಳೆಯರು ಸಾಂಪ್ರದಾಯಿಕ ಉಡುಪು ತೊಟ್ಟು ನೃತ್ಯ ಮಾಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗಿಯಾಗಿವೆ.



ಮದುಮಗಳಂತೆ ಸಿಂಗಾರಗೊಂಡ ಆಯೋಧ್ಯೆ :
ದೀಪೋತ್ಸವ ಹಿನ್ನೆಲೆ ಅಯೋಧ್ಯಾನಗರಿ ಮಧುಮಗಳಂತೆ ಸಿಂಗಾರಗೊಂಡಿದೆ. ಸಾವಿರಾರು ಭಕ್ತರು ದೀಪೋತ್ಸವಕ್ಕೆ ಕಾತರದಿಂದ ಕಾಯುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದುವರೆದಿದ್ದು, ಸಾಕಷ್ಟು ಕೆಲಸ ಈಗಾಗಲೇ ಪೂರ್ಣಗೊಂಡಿದೆ. ರಾಮಮಂದಿರ ನಿರ್ಮಾಣ ಕಾರ್ಯದ ವಿಡಿಯೋವೊಂದನ್ನು ರಾಮಜನ್ಮಭೂಮಿ ಟ್ರಸ್ಟ್ ಇತ್ತೀಚೆಗೆ ಬಿಡುಗಡೆಗೊಳಿಸಿತ್ತು.
Uttar Pradesh's Ayodhya is all set to hold a grand Deepotsav on Saturday (11 November) on the eve of Diwali. Over 24 lakh diyas at 51 ghats will illuminate the city on Saturday evening.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm