ಬ್ರೇಕಿಂಗ್ ನ್ಯೂಸ್
13-11-23 08:19 pm HK News Desk ದೇಶ - ವಿದೇಶ
ತೆಲಂಗಾಣ, ನ.13: ದೀಪಾವಳಿ ಹಬ್ಬದಿನದಂದೇ ಹೈದರಾಬಾದ್ನಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಬಜಾರ್ಘಾಟ್ನ ಕಟ್ಟಡದ ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು ನಾಲ್ಕು ಮಹಡಿಗಳಿಗೆ ವ್ಯಾಪಿಸಿದೆ. ಈ ಅವಘಡದಲ್ಲಿ ದಟ್ಟ ಹೊಗೆಯಿಂದಾಗಿ ಇದುವರೆಗೆ 9 ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ನಾಲ್ಕು ದಿನದ ಮಗು ಹಾಗೂ ಇಬ್ಬರು ಮಹಿಳೆಯರು ಸೇರಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ನಾಲ್ಕು ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಗ್ಯಾರೇಜ್ನಲ್ಲಿ ಹೊತ್ತಿಕೊಂಡ ಬೆಂಕಿ:ಕಟ್ಟಡದ ನೆಲಮಹಡಿಯಲ್ಲಿ ಗ್ಯಾರೇಜ್ ಇದ್ದ ಕಾರಣ ಕಾರನ್ನು ದುರಸ್ತಿ ಮಾಡುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಇದೇ ವೇಳೆ ಅಲ್ಲಿ ಡೀಸೆಲ್ ಹಾಗೂ ಕೆಮಿಕಲ್ ಡ್ರಮ್ ಗಳಿದ್ದು, ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿಯ ಕೆನ್ನಾಲಿಗೆ ಕಟ್ಟಡದ ಸುತ್ತಲೂ ವ್ಯಾಪಿಸಿದೆ. ಇದರಿಂದ ಅಕ್ಕಪಕ್ಕದ ಅಪಾರ್ಟ್ಮೆಂಟ್ಗಳಲ್ಲಿ ವಾಸವಿದ್ದವರು ಭಯಭೀತರಾಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಗ್ಯಾರೇಜ್ನಲ್ಲಿದ್ದ ಉಳಿದ ರಾಸಾಯನಿಕ ಕ್ಯಾನ್ಗಳನ್ನು ಹೊರ ತಂದಿದ್ದಾರೆ. ಅಪಘಾತದಿಂದಾಗಿ ಗ್ಯಾರೇಜ್ನಲ್ಲಿದ್ದ ಹಲವು ವಾಹನಗಳು ಸುಟ್ಟು ಕರಕಲಾಗಿವೆ.


ಶೋಕ ಸಾಗರದಲ್ಲಿ ಮೃತರ ಕುಟುಂಬ:
ಬಜಾರ್ಘಾಟ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತರ ಕುಟುಂಬಸ್ಥರು ತೀವ್ರ ದುಃಖದಲ್ಲಿ ಮುಳುಗಿದ್ದಾರೆ. ಮೃತರಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಗುರುತಿಸಲಾಗಿದೆ. ಘಟನೆಯಲ್ಲಿ 4 ದಿನದ ಮಗುವೂ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least nine people died in a massive fire at a residential building in Hyderabad's Nampally on Monday. Three others were injured in the incident and were shifted to hospitals.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm