ಬ್ರೇಕಿಂಗ್ ನ್ಯೂಸ್
18-11-23 11:04 pm HK News Desk ದೇಶ - ವಿದೇಶ
ಲಕ್ನೋ, ನ.18: ಹಲಾಲ್ ಮಾರ್ಕ್ ಬಳಸಿ ಯಾವುದೇ ಸಾಮಗ್ರಿಗಳನ್ನು ಮಾರಾಟ ಮಾಡುವುದನ್ನು ಉತ್ತರ ಪ್ರದೇಶ ಸರಕಾರ ನಿಷೇಧಿಸಿದೆ. ಹಲಾಲ್ ಮಾರ್ಕ್ ವಿಚಾರದಲ್ಲಿ ರಾಜ್ಯದ ಹಲವು ಕಡೆ ಎಫ್ಐಆರ್ ದಾಖಲಾದ ಬೆನ್ನಲ್ಲೇ ಆದಿತ್ಯನಾಥ್ ಸರ್ಕಾರ, ಇಡೀ ರಾಜ್ಯದಲ್ಲಿ ಹಲಾಲ್ ಮಾರ್ಕ್ ಬ್ಯಾನ್ ಮಾಡಿ ಆದೇಶ ಮಾಡಿದೆ.
ಹಲಾಲ್ ಮಾರ್ಕ್ ಮಾರಾಟ, ಸ್ಟೋರ್ ಮಾಡುವುದು, ವಿತರಣೆ ಮಾಡುವುದು, ಬಳಕೆ ಮಾಡುವುದನ್ನು ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಉತ್ತರ ಪ್ರದೇಶ ಅಧಿಕೃತ ಆದೇಶ ಮಾಡಿದೆ. ಹಲಾಲ್ ಸರ್ಟಿಫಿಕೇಟ್ ಮೂಲಕ ಜನರ ಧಾರ್ಮಿಕ ಭಾವನೆ ಕೆರಳಿಸಿ, ಕಂಪನಿಯ ಉತ್ಪನ್ನಗಳ ಮಾರಾಟ ಹೆಚ್ಚಿಸುತ್ತಿದ್ದಾರೆ ಎಂದು ನೀಡಿರುವ ದೂರು ಆಧರಿಸಿ ಲಕ್ನೋ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಹಜರತ್ ಗಂಜ್ ಪೊಲೀಸ್ ಠಾಣೆಯಲ್ಲಿ ಶೈಲೇಂದ್ರ ಕುಮಾರ್ ಶರ್ಮಾ ಎಂಬವರು ದೂರು ನೀಡಿದ್ದಾರೆ. ಇದರಂತೆ, ಹಲಾಲ್ ಸರ್ಟಿಫಿಕೇಟ್ ಪೂರೈಕೆ ಮಾಡುತ್ತಿದ್ದ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಚೆನ್ನೈ, ಜಮೀಯತ್ ಉಲೇಮಾ ಹಿಂದ್ ಹಲಾಲ್ ಟ್ರಸ್ಟ್ ನವದೆಹಲಿ, ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಮುಂಬೈ, ಜಮೀಯತ್ ಉಲೇಮಾ ಮುಂಬೈ ಎಂಬೀ ಸಂಸ್ಥೆಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ರೀತಿಯ ಹಲಾಲ್ ಸರ್ಟಿಫಿಕೇಟ್ ಮೂಲಕ ಒಂದು ಕೋಮಿನ ಜನರನ್ನು ಗ್ರಾಹಕರಾಗಿ ಆಕರ್ಷಿಸುತ್ತಾರೆ. ಆಮೂಲಕ ಹಲಾಲ್ ಸರ್ಟಿಫಿಕೇಟ್ ಇಲ್ಲದ ಕಂಪನಿಯ ಉತ್ಪನ್ನಗಳಿಗೆ ಮಾರಾಟ ಇಲ್ಲದಂತೆ ಮಾಡಲಾಗುತ್ತದೆ. ಈ ರೀತಿ ಮಾಡುವುದು ಕಾನೂನು ರೀತ್ಯ ಅಪರಾಧ ಎಂದು ದೂರು ನೀಡಲಾಗಿತ್ತು.
The Uttar Pradesh government has banned products sold with a halal certification, hours after an official spokesperson claimed that the tag was being used to spread “propaganda” and “exploit religious sentiment”.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm