ಬ್ರೇಕಿಂಗ್ ನ್ಯೂಸ್
21-11-23 12:28 pm HK News Desk ದೇಶ - ವಿದೇಶ
ಅಹಮದಾಬಾದ್, ನ 21: ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡದ ಸೋಲು ಕೋಟ್ಯಂತರ ಅಭಿಮಾನಿಗಳ ಹೃದಯ ಚೂರಾಗುವಂತೆ ಮಾಡಿತ್ತು. ಆಟಗಾರರ ಹೃದಯವನ್ನು ಹಿಂಡಿತ್ತು. ತಮ್ಮ ನೋವನ್ನು ಹೇಳಿಕೊಳ್ಳಲಾಗದೆ, ಸಹಿಸಲೂ ಆಗದೆ ಆಟಗಾರರು ಡ್ರೆಸ್ಸಿಂಗ್ ಕೋಣೆಯೊಳಗೆ ತಳಮಳಿಸಿದ್ದರು.
ಸೋತ ಭಾರತ ತಂಡದ ಪರಿಸ್ಥಿತಿ ಹೇಗಿರಬಹುದು ಎಂಬ ಅರಿವಿದ್ದೇ ಪ್ರಧಾನಿ ನರೇಂದ್ರ ಮೋದಿ ಡ್ರೆಸ್ಸಿಂಗ್ ಕೊಠಡಿಯನ್ನು ಪ್ರವೇಶಿಸಿ ಉದ್ವೇಗಕ್ಕೊಳಗಾಗಿದ್ದ ವೇಗಿ ಮೊಹಮ್ಮದ್ ಶಮಿಯನ್ನು ಎದೆಗೊರಗಿಸಿಕೊಂಡು ಸಾಂತ್ವನ ಹೇಳಿದ್ದರು. ಅಲ್ಲದೆ ಎಲ್ಲ ಆಟಗಾರರನ್ನು ತಬ್ಬಿಕೊಂಡು ಧೈರ್ಯ ತುಂಬುವ ಕೆಲಸ ಮಾಡಿದ್ದರು. ಇದರ ಫೋಟೊಗಳು ಸೋಮವಾರ ವೈರಲ್ ಆಗಿತ್ತು. ಇದೀಗ ಮೋದಿ ಅವರು ಡ್ರಸ್ಸಿಂಗ್ ರೂಮ್ನಲ್ಲಿ ಆಟಗಾರರನ್ನು ಸಂತೈಸುವ ವಿಡಿಯೊವನ್ನು ಮೋದಿ ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ವಿಶೇಷ ಆಹ್ವಾನ ;
ಪ್ರಧಾನಿ ಮೋದಿ ಅವರು ಡ್ರೆಸ್ಸಿಂಗ್ ರೋಮ್ನಲ್ಲಿ ಎಲ್ಲ ಆಟಗಾರರಿಗೂ, ಕೋಚ್ ದ್ರಾವಿಡ್ ಅವರಿಗೂ ಸಮಾಧಾನ ಮಾಡುತ್ತಿರುವುದನ್ನು ಈ ವಿಡಿಯೊದಲ್ಲಿ ಕಾಣಬಹುದಾಗಿದೆ. ಗೃಹ ಸಚಿವ ಅಮಿತ್ ಶಾ ಕೂಡ ಜತೆಗಿದ್ದರು. ಎಲ್ಲ ಆಟಗಾರರನ್ನು ಕೂಡ ದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಬರುವಂತೆ ವಿಶೇಷ ಆಹ್ವಾನ ನೀಡಿದ್ದಾರೆ.
ಮೋದಿ ಅವರು ಧೈರ್ಯ ತುಂಬಿದ ಬಳಿಕ ಟ್ವೀಟ್ ಮಾಡಿದ್ದ ಶಮಿ, ‘ತಂಡದ ಬೆಂಬಲಕ್ಕೆ ನಿಂತಿರುವ ಎಲ್ಲ ಭಾರತೀಯರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಡ್ರೆಸ್ಸಿಂಗ್ ಕೊಠಡಿಗೆ ಆಗಮಿಸಿ ನಮಗೆ ಸಮಾಧಾನ ಹೇಳಿದ ಪ್ರಧಾನಿ ಮೋದಿ ಎಲ್ಲರ ಉತ್ಸಾಹವನ್ನು ಬಡಿದೆಬ್ಬಿಸಿದರು. ನಾವು ಮತ್ತೆ ತಿರುಗಿ ಬೀಳುತ್ತೇವೆ” ಎಂದು ಹೇಳಿದ್ದರು.
ರವೀಂದ್ರ ಜಡೇಜಾ ಕೂಡ ಕೃತಜ್ಞತೆ ಅರ್ಪಿಸಿ, ನಮ್ಮೆಲ್ಲರ ಹೃದಯಗಳು ಒಡೆದುಹೋಗಿವೆ. ಆದರೆ ಜನರ ಬೆಂಬಲ ಮತ್ತು ಪ್ರಧಾನಿ ಮೋದಿ ಡ್ರೆಸ್ಸಿಂಗ್ ರೂಮ್ಗೆ ಆಗಮಿಸಿ ನಮ್ಮಲ್ಲಿ ಆತ್ಮವಿಶ್ವಾಸ ತುಂಬಿದ್ದು ಸ್ಫೂರ್ತಿದಾಯಕವಾಗಿತ್ತು ಎಂದು ಹೇಳಿಕೊಂಡಿದ್ದರು.
A great leader will find you in pieces and and lead you to peace
— Mini (@perfectminz) November 21, 2023
That’s my @narendramodi ji
#WorldcupFinal #INDvAUS #NarendraModi #ViratKohli #MohammadShami https://t.co/BpiNt8rZ91
An emotional Mohammad Shami hugged Prime Minister Modi when he met him in the dressing room. The star bowler was the highest wicket-ticket in the tournament.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm