ಬ್ರೇಕಿಂಗ್ ನ್ಯೂಸ್
21-11-23 03:09 pm HK News Desk ದೇಶ - ವಿದೇಶ
ಚೆನ್ನೈ, ನ 21: ಇಂಡಿಗೋ ಏರ್ಲೈನ್ಸ್ ಎಟಿಆರ್ ಪ್ರಯಾಣಿಕ ವಿಮಾನಕ್ಕೆ ಪ್ರಯಾಣಿಕರ ಲಗೇಜ್ಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ವಿಮಾನಕ್ಕೆ ಸ್ವಲ್ಪ ಹಾನಿಯಾಗಿರುವ ಘಟನೆ ಚೆನ್ನೈನ ಡೊಮೆಸ್ಟಿಕ್ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.
ತಕ್ಷಣವೇ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ಸ್ ಸೆಕ್ಯುರಿಟಿ (ಬಿಸಿಎಎಸ್) ಫ್ಲೈಟ್ ಸುರಕ್ಷತಾ ಅಧಿಕಾರಿಗಳು ಹಾನಿಗೊಳಗಾದ ವಿಮಾನವನ್ನು ಪರಿಶೀಲನೆ ಮಾಡಿದ್ದು, ಆ ಕ್ಷಣಕ್ಕೆ ವಿಮಾನ ಹಾರಲು ಅನರ್ಹವಾಗಿದೆ ಎಂದು ವಿಮಾನ ಹಾರಾಟ ಅನುಮತಿ ನಿರಾಕರಿಸಿದ್ದಾರೆ. ಈ ಬಗ್ಗೆ ದೆಹಲಿಯ ನಾಗರಿಕ ವಿಮಾನ ಮಹಾನಿರ್ದೇಶನಾಲಯಗೂ (ಡಿಜಿಸಿಎ) ಮಾಹಿತಿ ನೀಡಲಾಗಿದ್ದು, ಘಟನೆ ಬಗ್ಗೆ ವಿವರವಾದ ತನಿಖೆಗೆ ಆದೇಶಿಸಿದೆ. ಮುಂದಿನ ಆದೇಶದವರೆಗೆ ಏರ್ಪೋರ್ಟ್ನಿಂದ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ.
ಘಟನೆ ಬಗ್ಗೆ ಇಂಡಿಗೋ ಏರ್ಲೈನ್ಸ್, ಪ್ರಯಾಣಿಕರ ಸಾಮಾನುಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ವಿಮಾನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದಾಗಿ ಚೆನ್ನೈನಿಂದ ತಿರುಚ್ಚಿಗೆ ಇಂಡಿಗೋ ವಿಮಾನದ 24 ಸೇವೆಗಳನ್ನು ರದ್ದುಗೊಳಿಸಲಾಗಿದೆ. ಹಾನಿಗೊಳಗಾದ ವಿಮಾನವನ್ನು ಈಗಾಗಲೇ ದುರಸ್ತಿ ಮಾಡಲಾಗಿದ್ದು, ನವೆಂಬರ್ 22 ರಿಂದ ವಿಮಾನ ಸೇವೆ ಪುನಾರಂಭವಾಗಲಿದೆ. ಪ್ರಯಾಣ ರದ್ದುಗೊಂಡಿರುವ ಪ್ರಯಾಣಿಕರಿಗೆ ಅವರ ಟಿಕೆಟ್ ದರವನ್ನು ಮರು ಪಾವತಿಸಲಾಗುವುದು ಎಂದು ಇಂಡಿಗೋ ಏರ್ಲೈನ್ಸ್ ಹೇಳಿದೆ.
ಅಪಘಾತದ ಕುರಿತು ವಿಮಾನ ನಿಲ್ದಾಣದ ಅಧಿಕಾರಿಗಳ ತನಿಖೆ ನಡೆಸುತ್ತಿದ್ದಾರೆ. ಬಿಸಿಎಎಸ್ ಹಾಗೂ ಡಿಜಿಸಿಎಯಿಂದ ವಿಮಾನದ ಸಂಪೂರ್ಣ ದುರಸ್ತಿ ಹಾಗೂ ವಿಮಾನ ಹಾರಾಟಕ್ಕೆ ಅನುಮತಿ ದೊರೆತ ನಂತರವೇ ವಿಮಾನ ಮತ್ತೆ ಕಾರ್ಯ ನಿರ್ವಹಿಸಲಿದೆ ಎಂದು ಹೇಳಲಾಗಿದೆ.
An Indigo Airlines ATR passenger flight was slightly damaged when a tractor carrying belongings collided with it at the Chennai Domestic Airport on Sunday night. None was, however, injured in the incident. The Bureau of Civil Aviation Security (BCAS) flight safety officials, while inspecting the damaged aircraft, have denied permission to resume operation, stating that the flight is unfit to fly again immediately.
19-08-25 11:13 am
Bangalore Correspondent
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
19-08-25 12:54 pm
Mangalore Correspondent
Ullal Police Raid, Sports Winners, Mangalore:...
19-08-25 12:41 pm
ಮನೆ ಕಳ್ಳತನ ಪ್ರಕರಣ ; 30 ಗ್ರಾಮ್ ಬಂಗಾರ ಸಹಿತ ಆರೋಪ...
17-08-25 10:07 pm
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm