ಬ್ರೇಕಿಂಗ್ ನ್ಯೂಸ್
23-11-23 08:40 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ನ.23: ಸಾಕು ಪ್ರಾಣಿಗಳ ಕ್ಲಿನಿಕ್ನಲ್ಲಿ ಸಾಕು ನಾಯಿಯೊಂದು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. ಶ್ವಾನದ ಮಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೆಟ್ ಕ್ಲಿನಿಕ್ನ ವೈದ್ಯರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.
ಇಲ್ಲಿನ ಪಾಶಾನ್ ಉಪನಗರದಲ್ಲಿರುವ ಪೆಟ್ ಕ್ಲಿನಿಕ್ಗೆ ನವೆಂಬರ್ 17ರಂದು ಸಂಜೆ 35 ವರ್ಷದ ಮಹಿಳೆಯೊಬ್ಬರು ತಮ್ಮ 'ಹನಿ' ಎಂಬ ಲ್ಯಾಬ್ರಡಾರ್ ಶ್ವಾನವನ್ನು ಕರೆತಂದಿದ್ದರು. ವಾರ್ಷಿಕ ವ್ಯಾಕ್ಸಿನೇಷನ್ ಹಾಗೂ ಉಗುರು ಟ್ರಿಮ್ಮಿಂಗ್ಗೆಂದು ಶ್ವಾನವನ್ನು ಪೆಟ್ ಕ್ಲಿನಿಕ್ನ ವೈದ್ಯರಿಗೆ ಮಾಲಕಿ ಒಪ್ಪಿಸಿದ್ದರು. ಡಾ. ಶುಭಂ ರಜಪೂತ್ ಹಾಗೂ ಇತರ ಇಬ್ಬರು ಸೇರಿಕೊಂಡು ಶ್ವಾನವನ್ನು ಮರಕ್ಕೆ ಕಟ್ಟಲು ಪ್ರಯತ್ನಿಸುತ್ತಿದ್ದರು. ಆದರೆ, ಡಾ. ರಜಪೂತ್ ಕಟ್ಟಿದ್ದ ಬೆಲ್ಟ್ ಶ್ವಾನದ ಕುತ್ತಿಗೆಗೆ ಬಿಗಿದುಕೊಂಡಿದೆ. ಪರಿಣಾಮ ಶ್ವಾನ ಕುಸಿದು ಕೆಳಗೆ ಬಿದ್ದಿದೆ.
ನಂತರ ಚಿಕಿತ್ಸೆಗಾಗಿ ವೈದ್ಯರ ಕೊಠಡಿಗೆ ಶ್ವಾನವನ್ನು ಎತ್ತಿಕೊಂಡು ಹೋಗಲಾಗಿದೆ. ಆಗ 15 ನಿಮಿಷಗಳ ಬಳಿಕ ಮತ್ತೊಬ್ಬ ವೈದ್ಯ ಶ್ವಾನ ಮೃತಪಟ್ಟಿದೆ ಎಂದು ಮಾಲಕಿಗೆ ತಿಳಿಸಿದ್ದಾರೆ. ಆದರೆ, ಶ್ವಾನದ ಸಾವಿನ ಕಾರಣದ ಕುರಿತು ಸರಿಯಾದ ಮಾಹಿತಿಯನ್ನು ಈ ವೈದ್ಯರು ನೀಡಿಲ್ಲ. ಹೀಗಾಗಿ ಈ ಘಟನೆಯ ನಂತರ ಮಾಲಕಿ ಚತುರ್ಶೃಂಗಿ ಪೊಲೀಸ್ ಠಾಣೆಗೆ ಬಂದು ಡಾ.ಸಜೀನ್ ರಾಜಾಧ್ಯಕ್ಷ (60), ಡಾ.ಶುಭಂ ರಜಪೂತ್ (35) ಮತ್ತು ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಒಟ್ಟು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದೂರುದಾರ ಮಾಲಕಿಯು ಲ್ಯಾಬ್ರಡಾರ್ ಶ್ವಾನ 'ಹನಿ'ಯನ್ನು ಕಳೆದ 8 ವರ್ಷಗಳಿಂದ ಸಾಕುತ್ತಿದ್ದರು. ಅದನ್ನು 40 ದಿನಗಳ ಮರಿಯಾಗಿದ್ದಾಗಲೇ ಮನೆಗೆ ತರಲಾಗಿತ್ತು. ಕ್ಲಿನಿಕ್ನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಶ್ವಾನ ಮೃತಪಟ್ಟಿದೆ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
In a startling turn of events at Pune’s Chaturshrungi Police Station, a routine dog vaccination took a tragic turn, leading to a legal dispute and raising questions about the handling of the situation by two local veterinary doctors.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm