ಬ್ರೇಕಿಂಗ್ ನ್ಯೂಸ್
23-11-23 08:40 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ನ.23: ಸಾಕು ಪ್ರಾಣಿಗಳ ಕ್ಲಿನಿಕ್ನಲ್ಲಿ ಸಾಕು ನಾಯಿಯೊಂದು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಪುಣೆಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ನಾಲ್ವರ ವಿರುದ್ಧ ಪೊಲೀಸ್ ಕೇಸ್ ದಾಖಲಾಗಿದೆ. ಶ್ವಾನದ ಮಾಲಕಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೆಟ್ ಕ್ಲಿನಿಕ್ನ ವೈದ್ಯರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.
ಇಲ್ಲಿನ ಪಾಶಾನ್ ಉಪನಗರದಲ್ಲಿರುವ ಪೆಟ್ ಕ್ಲಿನಿಕ್ಗೆ ನವೆಂಬರ್ 17ರಂದು ಸಂಜೆ 35 ವರ್ಷದ ಮಹಿಳೆಯೊಬ್ಬರು ತಮ್ಮ 'ಹನಿ' ಎಂಬ ಲ್ಯಾಬ್ರಡಾರ್ ಶ್ವಾನವನ್ನು ಕರೆತಂದಿದ್ದರು. ವಾರ್ಷಿಕ ವ್ಯಾಕ್ಸಿನೇಷನ್ ಹಾಗೂ ಉಗುರು ಟ್ರಿಮ್ಮಿಂಗ್ಗೆಂದು ಶ್ವಾನವನ್ನು ಪೆಟ್ ಕ್ಲಿನಿಕ್ನ ವೈದ್ಯರಿಗೆ ಮಾಲಕಿ ಒಪ್ಪಿಸಿದ್ದರು. ಡಾ. ಶುಭಂ ರಜಪೂತ್ ಹಾಗೂ ಇತರ ಇಬ್ಬರು ಸೇರಿಕೊಂಡು ಶ್ವಾನವನ್ನು ಮರಕ್ಕೆ ಕಟ್ಟಲು ಪ್ರಯತ್ನಿಸುತ್ತಿದ್ದರು. ಆದರೆ, ಡಾ. ರಜಪೂತ್ ಕಟ್ಟಿದ್ದ ಬೆಲ್ಟ್ ಶ್ವಾನದ ಕುತ್ತಿಗೆಗೆ ಬಿಗಿದುಕೊಂಡಿದೆ. ಪರಿಣಾಮ ಶ್ವಾನ ಕುಸಿದು ಕೆಳಗೆ ಬಿದ್ದಿದೆ.
ನಂತರ ಚಿಕಿತ್ಸೆಗಾಗಿ ವೈದ್ಯರ ಕೊಠಡಿಗೆ ಶ್ವಾನವನ್ನು ಎತ್ತಿಕೊಂಡು ಹೋಗಲಾಗಿದೆ. ಆಗ 15 ನಿಮಿಷಗಳ ಬಳಿಕ ಮತ್ತೊಬ್ಬ ವೈದ್ಯ ಶ್ವಾನ ಮೃತಪಟ್ಟಿದೆ ಎಂದು ಮಾಲಕಿಗೆ ತಿಳಿಸಿದ್ದಾರೆ. ಆದರೆ, ಶ್ವಾನದ ಸಾವಿನ ಕಾರಣದ ಕುರಿತು ಸರಿಯಾದ ಮಾಹಿತಿಯನ್ನು ಈ ವೈದ್ಯರು ನೀಡಿಲ್ಲ. ಹೀಗಾಗಿ ಈ ಘಟನೆಯ ನಂತರ ಮಾಲಕಿ ಚತುರ್ಶೃಂಗಿ ಪೊಲೀಸ್ ಠಾಣೆಗೆ ಬಂದು ಡಾ.ಸಜೀನ್ ರಾಜಾಧ್ಯಕ್ಷ (60), ಡಾ.ಶುಭಂ ರಜಪೂತ್ (35) ಮತ್ತು ಇಬ್ಬರು ಅಪರಿಚಿತ ವ್ಯಕ್ತಿಗಳು ಸೇರಿ ಒಟ್ಟು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದೂರುದಾರ ಮಾಲಕಿಯು ಲ್ಯಾಬ್ರಡಾರ್ ಶ್ವಾನ 'ಹನಿ'ಯನ್ನು ಕಳೆದ 8 ವರ್ಷಗಳಿಂದ ಸಾಕುತ್ತಿದ್ದರು. ಅದನ್ನು 40 ದಿನಗಳ ಮರಿಯಾಗಿದ್ದಾಗಲೇ ಮನೆಗೆ ತರಲಾಗಿತ್ತು. ಕ್ಲಿನಿಕ್ನಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಶ್ವಾನ ಮೃತಪಟ್ಟಿದೆ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
In a startling turn of events at Pune’s Chaturshrungi Police Station, a routine dog vaccination took a tragic turn, leading to a legal dispute and raising questions about the handling of the situation by two local veterinary doctors.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm