ಬ್ರೇಕಿಂಗ್ ನ್ಯೂಸ್
16-11-20 12:02 pm Headline Karnataka News Network ದೇಶ - ವಿದೇಶ
ಇಥಿಯೋಪಿಯಾ, ನವೆಂಬರ್ 16: ಇಥಿಯೋಪಿಯಾದ ಪೂರ್ವ ಭಾಗದಲ್ಲಿ ಶನಿವಾರ ರಾತ್ರಿ ಬಸ್ ಮೇಲೆ ದಾಳಿ ನಡೆಸಿದ ಬಂದೂಕುಧಾರಿಗಳು ಕನಿಷ್ಠ 34 ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ತಿಳಿಸಿದೆ.
ಉತ್ತರ ಭಾಗದಲ್ಲಿ ಸೇನಾ ಪಡೆಯು ಸಮರದಲ್ಲಿ ನಿರತರಾಗಿರುವ ನಡುವೆ ಇಥಿಯೋಪಿಯಾದಲ್ಲಿ ಮತ್ತಷ್ಟು ಭದ್ರತೆಯ ಕುರಿತಾದ ಭೀತಿ ಆವರಿಸಿದೆ. ಬೆನಿಶಂಗುಲ್-ಗುಮುಜ್ ಪ್ರಾಂತ್ಯದಲ್ಲಿ ಪ್ರಯಾಣಿಕ ಬಸ್ ಮೇಲೆ ನಡೆದ ಹೇಯ ದಾಳಿ ಇದು ಎಂದು ಇಥಿಯೋಪಿಯನ್ ಮಾನವ ಹಕ್ಕುಗಳ ಆಯೋಗ ತಿಳಿಸಿದ್ದು, ಘಟನೆಯಲ್ಲಿ ಬಲಿಯಾದವರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದಿದೆ. ಈ ಭಾಗದ ಇತರೆ ಸ್ಥಳಗಳಲ್ಲಿಯೂ ಇದೇ ರೀತಿಯ ದಾಳಿಗಳು ನಡೆದ ವರದಿಯಾಗಿದ್ದು, ಜನರಲ್ಲಿ ತೀವ್ರ ಭಯ ಉಂಟಾಗಿದೆ ಎಂದು ಅದು ಹೇಳಿದೆ.

ಬೆನಿಶಂಗುಲ್-ಗುಮುಜ್ ಪ್ರಾಂತ್ಯದಲ್ಲಿ ಪದೇ ಪದೇ ದಾಳಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರಾದೇಶ ಮತ್ತು ಫೆಡರಲ್ ಆಡಳಿತವು ಇಲ್ಲಿ ಭದ್ರತೆ ಹೆಚ್ಚಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥ ಡೇನಿಯಲ್ ಬೆಕೆಲೆ ಒತ್ತಾಯಿಸಿದ್ದಾರೆ. ಕಳೆದ ಸೆಪ್ಟೆಂಬರ್ನಲ್ಲಿ ಇದೇ ಜಾಗದಲ್ಲಿ ನಡೆದಿದ್ದ ಸಶಸ್ತ್ರ ಭಯೋತ್ಪಾದಕರು ನಡೆಸಿದ ದಾಳಿಗೆ ಕನಿಷ್ಠ 45 ಮಂದಿ ಬಲಿಯಾಗಿದ್ದರು.
ಇಥಿಯೋಪಿಯಾ ಸರ್ಕಾರ ಮತ್ತು ದೇಶದ ಉತ್ತರ ಭಾಗದ ಟಿಗ್ರೇ ಪ್ರದೇಶದ ನಡುವೆ 12 ದಿನಗಳಿಂದ ಯುದ್ಧ ನಡೆಯುತ್ತಿದೆ. ಈ ಸಂಘರ್ಷವು ಇತರೆ ಮೂಲ ಗುಂಪುಗಳನ್ನು ಮತ್ತಷ್ಟು ಉದ್ರೇಕಿಸುವ ಮೂಲಕ ಇನ್ನಷ್ಟು ಹಿಂಸಾಚಾರಕ್ಕೆ ಕಾರಣವಾಗಬಹುದು ಎಂಬ ಆತಂಕ ಉಂಟಾಗಿದೆ. ಟಿಗ್ರೇ ಪ್ರದೇಶದಲ್ಲಿ ಸೇನಾ ಪಡೆಗಳನ್ನು ಮರು ನಿಯೋಜನೆ ಮಾಡುತ್ತಿರುವುದು ಇತರೆ ಪ್ರದೇಶಗಳಲ್ಲಿ ಜನರು ಭದ್ರತೆಯಿಂದ ವಂಚಿತರಾಗುವಂತೆ ಮಾಡಿದೆ.
“The latest attack is a grim addition to the human cost which we bear collectively." - @DanielBekele@EthioHRC is saddened to learn of gruesome attack on passenger bus heading from Wonbera to Chagni in Benishangul-Gumuz on Nov 14. Fatalities estimated at 34, but likely to rise.
— Ethiopian Human Rights Commission (@EthioHRC) November 15, 2020
Gunmen have killed dozens of people in a “gruesome” attack on a bus carrying civilians in western Ethiopia, according to the country’s human rights body.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm