ಬ್ರೇಕಿಂಗ್ ನ್ಯೂಸ್
06-12-23 12:45 pm HK News Desk ದೇಶ - ವಿದೇಶ
ಅಬುಜಾ, ಡಿ 06: ವಾಯುವ್ಯ ನೈಜೀರಿಯಾದಲ್ಲಿ ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪಿದ್ದು, ನಾಗರಿಕರ ಸಾವಿಗೆ ಕಾರಣವಾಗಿದೆ. ನೈಜೀರಿಯಾದ ಸಂಘರ್ಷದ ವಲಯದಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ತನಿಖೆ ನಡೆಸಲು ದೇಶದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ದಾಳಿಯಲ್ಲಿ ಕನಿಷ್ಠ 66 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಸಂತ್ರಸ್ತರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ
ತಪ್ಪಾದ ಲೆಕ್ಕಾಚಾರದ ವೈಮಾನಿಕ ದಾಳಿಯ ಘಟನೆಗಳು ದೇಶದಲ್ಲಿ ಆತಂಕಕಾರಿ ಆಯಾಮವನ್ನು ಪಡೆದುಕೊಳ್ಳುತ್ತಿದೆ ಎಂದು ನೈಜೀರಿಯಾದ ಮಾಜಿ ಉಪಾಧ್ಯಕ್ಷ ಮತ್ತು ಈ ವರ್ಷದ ಚುನಾವಣೆಯಲ್ಲಿ ಪ್ರಮುಖ ವಿಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅತಿಕು ಅಬುಬಕರ್ ಅಭಿಪ್ರಾಯಪಟ್ಟಿದ್ದಾರೆ.
ಒಂದು ದಶಕಕ್ಕೂ ಹೆಚ್ಚು ಕಾಲ ನೈಜೀರಿಯಾದ ಉತ್ತರವನ್ನು ಅಸ್ಥಿರಗೊಳಿಸಿದ ಉಗ್ರಗಾಮಿ ಹಿಂಸಾಚಾರ ಮತ್ತು ಬಂಡುಕೋರರ ದಾಳಿಯ ವಿರುದ್ಧ ಹೋರಾಡುವಾಗ ನೈಜೀರಿಯಾದ ಮಿಲಿಟರಿ ಆಗಾಗ್ಗೆ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಆಗಾಗ್ಗೆ ನಾಗರಿಕ ಸಾವುನೋವುಗಳನ್ನು ಉಂಟುಮಾಡುತ್ತದೆ. ಜನವರಿಯಲ್ಲಿ ನಸಾರಾವಾ ರಾಜ್ಯ ಹಾಗೂ 2022 ರ ಡಿಸೆಂಬರ್ನಲ್ಲಿ ಝಂಫಾರಾ ರಾಜ್ಯದಲ್ಲಿ ಹತ್ತಾರು ಮಂದಿ ಇಂತಹ ದಾಳಿಗಳಿಗೆ ಬಲಿಯಾಗಿದ್ದಾರೆ.
A Nigerian army drone strike accidentally killed at least 85 civilians on Sunday in a village in northwest Kaduna State, officials said, in one of the country's deadliest military bombing mishaps.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm