ಬ್ರೇಕಿಂಗ್ ನ್ಯೂಸ್
06-12-23 12:45 pm HK News Desk ದೇಶ - ವಿದೇಶ
ಅಬುಜಾ, ಡಿ 06: ವಾಯುವ್ಯ ನೈಜೀರಿಯಾದಲ್ಲಿ ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪಿದ್ದು, ನಾಗರಿಕರ ಸಾವಿಗೆ ಕಾರಣವಾಗಿದೆ. ನೈಜೀರಿಯಾದ ಸಂಘರ್ಷದ ವಲಯದಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ತನಿಖೆ ನಡೆಸಲು ದೇಶದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ದಾಳಿಯಲ್ಲಿ ಕನಿಷ್ಠ 66 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಸಂತ್ರಸ್ತರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ
ತಪ್ಪಾದ ಲೆಕ್ಕಾಚಾರದ ವೈಮಾನಿಕ ದಾಳಿಯ ಘಟನೆಗಳು ದೇಶದಲ್ಲಿ ಆತಂಕಕಾರಿ ಆಯಾಮವನ್ನು ಪಡೆದುಕೊಳ್ಳುತ್ತಿದೆ ಎಂದು ನೈಜೀರಿಯಾದ ಮಾಜಿ ಉಪಾಧ್ಯಕ್ಷ ಮತ್ತು ಈ ವರ್ಷದ ಚುನಾವಣೆಯಲ್ಲಿ ಪ್ರಮುಖ ವಿಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅತಿಕು ಅಬುಬಕರ್ ಅಭಿಪ್ರಾಯಪಟ್ಟಿದ್ದಾರೆ.
ಒಂದು ದಶಕಕ್ಕೂ ಹೆಚ್ಚು ಕಾಲ ನೈಜೀರಿಯಾದ ಉತ್ತರವನ್ನು ಅಸ್ಥಿರಗೊಳಿಸಿದ ಉಗ್ರಗಾಮಿ ಹಿಂಸಾಚಾರ ಮತ್ತು ಬಂಡುಕೋರರ ದಾಳಿಯ ವಿರುದ್ಧ ಹೋರಾಡುವಾಗ ನೈಜೀರಿಯಾದ ಮಿಲಿಟರಿ ಆಗಾಗ್ಗೆ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಆಗಾಗ್ಗೆ ನಾಗರಿಕ ಸಾವುನೋವುಗಳನ್ನು ಉಂಟುಮಾಡುತ್ತದೆ. ಜನವರಿಯಲ್ಲಿ ನಸಾರಾವಾ ರಾಜ್ಯ ಹಾಗೂ 2022 ರ ಡಿಸೆಂಬರ್ನಲ್ಲಿ ಝಂಫಾರಾ ರಾಜ್ಯದಲ್ಲಿ ಹತ್ತಾರು ಮಂದಿ ಇಂತಹ ದಾಳಿಗಳಿಗೆ ಬಲಿಯಾಗಿದ್ದಾರೆ.
A Nigerian army drone strike accidentally killed at least 85 civilians on Sunday in a village in northwest Kaduna State, officials said, in one of the country's deadliest military bombing mishaps.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm