ಬ್ರೇಕಿಂಗ್ ನ್ಯೂಸ್
06-12-23 12:45 pm HK News Desk ದೇಶ - ವಿದೇಶ
ಅಬುಜಾ, ಡಿ 06: ವಾಯುವ್ಯ ನೈಜೀರಿಯಾದಲ್ಲಿ ಸೇನೆಯ ಡ್ರೋನ್ ದಾಳಿ ಗುರಿ ತಪ್ಪಿ, 85 ಮಂದಿ ನಾಗರಿಕರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.
ಕಡುನಾ ರಾಜ್ಯದ ತುಡುನ್ ಬಿರಿ ಗ್ರಾಮದ ಬಳಿ ಭಯೋತ್ಪಾದಕರನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆದರೆ ಗುರಿ ತಪ್ಪಿದ್ದು, ನಾಗರಿಕರ ಸಾವಿಗೆ ಕಾರಣವಾಗಿದೆ. ನೈಜೀರಿಯಾದ ಸಂಘರ್ಷದ ವಲಯದಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ತನಿಖೆ ನಡೆಸಲು ದೇಶದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ದಾಳಿಯಲ್ಲಿ ಕನಿಷ್ಠ 66 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಸೇರಿದಂತೆ 85 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಸಿಲುಕಿರುವ ಸಂತ್ರಸ್ತರಿಗಾಗಿ ಶೋಧಕಾರ್ಯ ನಡೆಯುತ್ತಿದೆ.
ನೈಜೀರಿಯಾದ ಸೇನಾ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ತೌರೀದ್ ಲಗ್ಬಾಜಾ ಅವರು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಡ್ರೋನ್ ದಾಳಿಗೆ ಕ್ಷಮೆಯಾಚಿಸಿದ್ದಾರೆ
ತಪ್ಪಾದ ಲೆಕ್ಕಾಚಾರದ ವೈಮಾನಿಕ ದಾಳಿಯ ಘಟನೆಗಳು ದೇಶದಲ್ಲಿ ಆತಂಕಕಾರಿ ಆಯಾಮವನ್ನು ಪಡೆದುಕೊಳ್ಳುತ್ತಿದೆ ಎಂದು ನೈಜೀರಿಯಾದ ಮಾಜಿ ಉಪಾಧ್ಯಕ್ಷ ಮತ್ತು ಈ ವರ್ಷದ ಚುನಾವಣೆಯಲ್ಲಿ ಪ್ರಮುಖ ವಿಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಅತಿಕು ಅಬುಬಕರ್ ಅಭಿಪ್ರಾಯಪಟ್ಟಿದ್ದಾರೆ.
ಒಂದು ದಶಕಕ್ಕೂ ಹೆಚ್ಚು ಕಾಲ ನೈಜೀರಿಯಾದ ಉತ್ತರವನ್ನು ಅಸ್ಥಿರಗೊಳಿಸಿದ ಉಗ್ರಗಾಮಿ ಹಿಂಸಾಚಾರ ಮತ್ತು ಬಂಡುಕೋರರ ದಾಳಿಯ ವಿರುದ್ಧ ಹೋರಾಡುವಾಗ ನೈಜೀರಿಯಾದ ಮಿಲಿಟರಿ ಆಗಾಗ್ಗೆ ವೈಮಾನಿಕ ದಾಳಿಗಳನ್ನು ನಡೆಸುತ್ತದೆ. ಆಗಾಗ್ಗೆ ನಾಗರಿಕ ಸಾವುನೋವುಗಳನ್ನು ಉಂಟುಮಾಡುತ್ತದೆ. ಜನವರಿಯಲ್ಲಿ ನಸಾರಾವಾ ರಾಜ್ಯ ಹಾಗೂ 2022 ರ ಡಿಸೆಂಬರ್ನಲ್ಲಿ ಝಂಫಾರಾ ರಾಜ್ಯದಲ್ಲಿ ಹತ್ತಾರು ಮಂದಿ ಇಂತಹ ದಾಳಿಗಳಿಗೆ ಬಲಿಯಾಗಿದ್ದಾರೆ.
A Nigerian army drone strike accidentally killed at least 85 civilians on Sunday in a village in northwest Kaduna State, officials said, in one of the country's deadliest military bombing mishaps.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 09:32 am
HK News Staffer
'ಸನಾತನಿ ಸಿಂಹ' ಹೆಸರಲ್ಲಿ ಜಾಲತಾಣದಲ್ಲಿ ಅಕ್ಷೇಪಾರ್ಹ...
28-06-26 09:38 pm
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm