ಬ್ರೇಕಿಂಗ್ ನ್ಯೂಸ್
07-12-23 05:22 pm HK News Desk ದೇಶ - ವಿದೇಶ
ಕಾಸರಗೋಡು, ಡಿ.7: ಮಹಿಳೆಯರು ಸಾಮಾನ್ಯವಾಗಿ ದಿನವಿಡೀ ಅಡುಗೆ ಕೆಲಸ ಮಾಡಬೇಕು, ಮನೆಯವರಿಗೆಲ್ಲ ನಾವೇ ತಿನ್ನುವುದಕ್ಕೆ ಮಾಡಿ ಹಾಕಬೇಕು ಎಂದು ಮೂಗು ಮುರಿಯುತ್ತಾರೆ. ಆದರೆ, ಇಲ್ಲಿನ ಮೂವರು ಗೃಹಿಣಿಯರು ಪುರುಷರೇ ಪಾರಮ್ಯ ಹೊಂದಿರುವ ಗ್ಯಾರೇಜ್ ಕೆಲಸವನ್ನೂ ಆರಂಭಿಸಿದ್ದಾರೆ. ಅಷ್ಟೇ ಅಲ್ಲ, ತಾವೇ ಪ್ರತ್ಯೇಕವಾಗಿ ಮಹಿಳಾ ಟು ವೀಲರ್ ಗ್ಯಾರೇಜ್ ಶಾಪ್ ಒಂದನ್ನು ಆರಂಭಿಸಿ ಎಲ್ಲರ ಹುಬ್ಬೇರಿಸಿದ್ದಾರೆ.
ಕಾಸರಗೋಡಿನ ಮೂವರು ಮಹಿಳೆಯರ ಈ ಸಾಧನೆ ರಾಜ್ಯದ ಗಮನ ಸೆಳೆದಿದೆ. ಯಾಕಂದ್ರೆ, ಕೇರಳ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರೇ ಸೇರಿಕೊಂಡು ಟು ವೀಲರ್ ಗ್ಯಾರೇಜ್ ಆರಂಭಿಸಿದ್ದಾರೆ. ಬಿನ್ಸಿ, ಮರ್ಸಿ ಮತ್ತು ಬಿಂಟು ಎಂಬ ಕಾಸರಗೋಡು ನಗರದ ಮೂವರು ಮಹಿಳೆಯರು ಸೇರಿಕೊಂಡು ದ್ವಿಚಕ್ರ ವಾಹನಗಳ ಗ್ಯಾರೇಜ್ ತೆರೆದಿದ್ದಾರೆ. ಕೇರಳ ಸರಕಾರದ ಕುಟುಂಬಶ್ರೀ ಯೋಜನೆಯಡಿ ದ್ವಿಚಕ್ರ ವಾಹನಗಳ ರಿಪೇರಿ ತರಬೇತಿ ಪಡೆದ ಈ ಮಹಿಳೆಯರು ಈಗ ಸ್ವಂತ ಗ್ಯಾರೇಜ್ ಆರಂಭಿಸಿದ್ದಾರೆ.
ತಮ್ಮ ಓರಗೆಯ ಮಹಿಳೆಯರು ಮನೆಯಲ್ಲಿ ಅಡುಗೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದರೆ, ಇವರು ಮಾತ್ರ ವರ್ಕ್ ಶಾಪ್ ನಲ್ಲಿ ಸ್ಪಾನರ್ ಹಿಡಿದು ನಟ್, ಬೋಲ್ಟ್ ತಿರುಗಿಸಲು ಆರಂಭಿಸಿದ್ದಾರೆ. ಕಾಸರಗೋಡು ನಗರದಲ್ಲಿ ಸಿಗ್ನೋರಾ ಹೆಸರಿನ ವರ್ಕ್ ಶಾಪ್ ತೆರೆದಿರುವುದು ಓರಗೆಯ ಮಹಿಳೆಯರಲ್ಲಿ ಉತ್ಸಾಹ ಇಮ್ಮಡಿಗೊಳಿಸಿದೆ. ಸದಾ ಅಡುಗೆ ಕೆಲಸದಲ್ಲೇ ಬಿಝಿಯಾಗಿದ್ದವರು ಈಗ ಈ ಕೆಲಸದಲ್ಲಿ ತೊಡಗಿಸಿದ್ದು ತುಂಬ ಸಂತೋಷ ಕೊಟ್ಟಿದೆ. ವಿಭಿನ್ನ ರೀತಿಯ ಕೆಲಸದ ಬಗ್ಗೆ ಹೆಮ್ಮೆಯಿದೆ. ಬೇರೆಯವರ ಕೈಕೆಳಗೆ ಕೆಲಸ ಮಾಡುವ ಬದಲು ನಾವು ಮೂವರು ಸೇರಿ ನಮ್ಮದೇ ವರ್ಕ್ ಶಾಪ್ ತೆರೆದಿದ್ದೇವೆ ಎಂದು ಮರ್ಸಿ ತಿಳಿಸಿದ್ದಾರೆ.
ಇಂತಹದ್ದೊಂದು ಕನಸಿತ್ತು. ಕನಸನ್ನು ಈಡೇರಿಸಿಕೊಂಡ ಬಗ್ಗೆ ಹೆಮ್ಮೆ ಇದೆ. ನಾವು ಈ ಫೀಲ್ಡ್ ನಲ್ಲಿ ಕೆಲಸ ಮಾಡಿ ತೋರಿಸಬೇಕೆಂಬ ಗುರಿ ಇದೆ. ಆಮೂಲಕ ಪುರುಷನಿಗಿಂತ ನಾವೇನು ಕಮ್ಮಿಯಿಲ್ಲ ಎಂದು ತೋರಿಸುತ್ತೇವೆ ಎಂದಿದ್ದಾರೆ, ಬಿನ್ಸಿ. ಮಹಿಳೆಯರೇ ಸೇರಿಕೊಂಡು ಮಾಡಿರುವ ಈ ಗ್ಯಾರೇಜ್ ಕೇರಳದಲ್ಲಿ ಭಾರೀ ಸುದ್ದಿಯಾಗಿದೆ.
It was a dream come true for three Kasargod women, who pulled themselves out of the kitchen to the street only to become proud partners of Kerala's first all-women two-wheeler workshop.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm