ಬ್ರೇಕಿಂಗ್ ನ್ಯೂಸ್
07-12-23 05:22 pm HK News Desk ದೇಶ - ವಿದೇಶ
ಕಾಸರಗೋಡು, ಡಿ.7: ಮಹಿಳೆಯರು ಸಾಮಾನ್ಯವಾಗಿ ದಿನವಿಡೀ ಅಡುಗೆ ಕೆಲಸ ಮಾಡಬೇಕು, ಮನೆಯವರಿಗೆಲ್ಲ ನಾವೇ ತಿನ್ನುವುದಕ್ಕೆ ಮಾಡಿ ಹಾಕಬೇಕು ಎಂದು ಮೂಗು ಮುರಿಯುತ್ತಾರೆ. ಆದರೆ, ಇಲ್ಲಿನ ಮೂವರು ಗೃಹಿಣಿಯರು ಪುರುಷರೇ ಪಾರಮ್ಯ ಹೊಂದಿರುವ ಗ್ಯಾರೇಜ್ ಕೆಲಸವನ್ನೂ ಆರಂಭಿಸಿದ್ದಾರೆ. ಅಷ್ಟೇ ಅಲ್ಲ, ತಾವೇ ಪ್ರತ್ಯೇಕವಾಗಿ ಮಹಿಳಾ ಟು ವೀಲರ್ ಗ್ಯಾರೇಜ್ ಶಾಪ್ ಒಂದನ್ನು ಆರಂಭಿಸಿ ಎಲ್ಲರ ಹುಬ್ಬೇರಿಸಿದ್ದಾರೆ.
ಕಾಸರಗೋಡಿನ ಮೂವರು ಮಹಿಳೆಯರ ಈ ಸಾಧನೆ ರಾಜ್ಯದ ಗಮನ ಸೆಳೆದಿದೆ. ಯಾಕಂದ್ರೆ, ಕೇರಳ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯರೇ ಸೇರಿಕೊಂಡು ಟು ವೀಲರ್ ಗ್ಯಾರೇಜ್ ಆರಂಭಿಸಿದ್ದಾರೆ. ಬಿನ್ಸಿ, ಮರ್ಸಿ ಮತ್ತು ಬಿಂಟು ಎಂಬ ಕಾಸರಗೋಡು ನಗರದ ಮೂವರು ಮಹಿಳೆಯರು ಸೇರಿಕೊಂಡು ದ್ವಿಚಕ್ರ ವಾಹನಗಳ ಗ್ಯಾರೇಜ್ ತೆರೆದಿದ್ದಾರೆ. ಕೇರಳ ಸರಕಾರದ ಕುಟುಂಬಶ್ರೀ ಯೋಜನೆಯಡಿ ದ್ವಿಚಕ್ರ ವಾಹನಗಳ ರಿಪೇರಿ ತರಬೇತಿ ಪಡೆದ ಈ ಮಹಿಳೆಯರು ಈಗ ಸ್ವಂತ ಗ್ಯಾರೇಜ್ ಆರಂಭಿಸಿದ್ದಾರೆ.
ತಮ್ಮ ಓರಗೆಯ ಮಹಿಳೆಯರು ಮನೆಯಲ್ಲಿ ಅಡುಗೆ ಕೆಲಸದಲ್ಲಿ ತೊಡಗಿಸಿಕೊಂಡಿದ್ದರೆ, ಇವರು ಮಾತ್ರ ವರ್ಕ್ ಶಾಪ್ ನಲ್ಲಿ ಸ್ಪಾನರ್ ಹಿಡಿದು ನಟ್, ಬೋಲ್ಟ್ ತಿರುಗಿಸಲು ಆರಂಭಿಸಿದ್ದಾರೆ. ಕಾಸರಗೋಡು ನಗರದಲ್ಲಿ ಸಿಗ್ನೋರಾ ಹೆಸರಿನ ವರ್ಕ್ ಶಾಪ್ ತೆರೆದಿರುವುದು ಓರಗೆಯ ಮಹಿಳೆಯರಲ್ಲಿ ಉತ್ಸಾಹ ಇಮ್ಮಡಿಗೊಳಿಸಿದೆ. ಸದಾ ಅಡುಗೆ ಕೆಲಸದಲ್ಲೇ ಬಿಝಿಯಾಗಿದ್ದವರು ಈಗ ಈ ಕೆಲಸದಲ್ಲಿ ತೊಡಗಿಸಿದ್ದು ತುಂಬ ಸಂತೋಷ ಕೊಟ್ಟಿದೆ. ವಿಭಿನ್ನ ರೀತಿಯ ಕೆಲಸದ ಬಗ್ಗೆ ಹೆಮ್ಮೆಯಿದೆ. ಬೇರೆಯವರ ಕೈಕೆಳಗೆ ಕೆಲಸ ಮಾಡುವ ಬದಲು ನಾವು ಮೂವರು ಸೇರಿ ನಮ್ಮದೇ ವರ್ಕ್ ಶಾಪ್ ತೆರೆದಿದ್ದೇವೆ ಎಂದು ಮರ್ಸಿ ತಿಳಿಸಿದ್ದಾರೆ.
ಇಂತಹದ್ದೊಂದು ಕನಸಿತ್ತು. ಕನಸನ್ನು ಈಡೇರಿಸಿಕೊಂಡ ಬಗ್ಗೆ ಹೆಮ್ಮೆ ಇದೆ. ನಾವು ಈ ಫೀಲ್ಡ್ ನಲ್ಲಿ ಕೆಲಸ ಮಾಡಿ ತೋರಿಸಬೇಕೆಂಬ ಗುರಿ ಇದೆ. ಆಮೂಲಕ ಪುರುಷನಿಗಿಂತ ನಾವೇನು ಕಮ್ಮಿಯಿಲ್ಲ ಎಂದು ತೋರಿಸುತ್ತೇವೆ ಎಂದಿದ್ದಾರೆ, ಬಿನ್ಸಿ. ಮಹಿಳೆಯರೇ ಸೇರಿಕೊಂಡು ಮಾಡಿರುವ ಈ ಗ್ಯಾರೇಜ್ ಕೇರಳದಲ್ಲಿ ಭಾರೀ ಸುದ್ದಿಯಾಗಿದೆ.
It was a dream come true for three Kasargod women, who pulled themselves out of the kitchen to the street only to become proud partners of Kerala's first all-women two-wheeler workshop.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm