ಬ್ರೇಕಿಂಗ್ ನ್ಯೂಸ್
14-12-23 08:54 pm HK News Desk ದೇಶ - ವಿದೇಶ
ನವದೆಹಲಿ, ಡಿ.14: ಸಂಸತ್ತಿನಲ್ಲಿ ಭದ್ರತಾ ಲೋಪ ಘಟನೆ ವಿಚಾರದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಗುರುವಾರ ಕೋಲಾಹಲವೇ ನಡೆದಿದ್ದು ಪ್ರತಿಭಟನೆ ನಡೆಸಿ ಅಶಿಸ್ತು ತೋರಿದ 15 ಸಂಸದರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ.
ಭದ್ರತಾ ಲೋಪದ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಸಂಸದರು ಭಾರಿ ಗದ್ದಲ ನಡೆಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಲಕ್ಷ್ಯ, ಭದ್ರತಾ ವೈಫಲ್ಯಕ್ಕೆ ಪ್ರತಿಪಕ್ಷಗಳು ಸ್ಪೀಕರ್ ಎಚ್ಚರಿಕೆ ಲೆಕ್ಕಿಸದೆ ಪ್ರತಿಭಟನೆ ನಡೆಸಿದ್ದಾರೆ. ಸದನದಲ್ಲಿ ಅಶಿಸ್ತು ತೋರಿದ ಕಾರಣಕ್ಕೆ ಸ್ಪೀಕರ್ ಓಂ ಬಿರ್ಲಾ ಲೋಕಸಭೆಯ 14 ಸಂಸದರನ್ನು ಅಮಾನತು ಮಾಡಿದ್ದಾರೆ. ಸಂಸದರಾದ ಟಿಎನ್ ಪ್ರತಾಪನ್, ಹಿಬಿ ಇಡನ್, ಎಸ್ ಜ್ಯೋತಿಮಣಿ, ರಮ್ಯಾ ಹರಿದಾಸ್, ಡೀನ್ ಕುರಿಯಾಕೋಸ್, ಬೆನ್ನಿ ಬೆಹನಾನ್, ವಿಕೆ ಶ್ರೀಕಂಠನ್, ಮೊಹಮ್ಮದ್ ಜಾವೇದ್, ಪಿಆರ್ ನಟರಾಜನ್, ಕನ್ನಿಮೊಳಿ ಕರುಣಾನಿಧಿ, ಕೆ ಸುಬ್ರಹ್ಮಮಣ್ಯಂ, ಎಸ್ ಆರ್ ಪ್ರತಿಭನ್, ಎಸ್. ವೆಂಕಟೇಶನ್ ಹಾಗೂ ಮಣಿಕಂ ಠಾಗೋರ್ ಅಮಾನತಾಗಿದ್ದು ಇವರನ್ನು ಸಂಪೂರ್ಣ ಚಳಿಗಾಲದ ಅಧಿವೇಶನದಿಂದ ಅಮಾನತು ಮಾಡಲಾಗಿದೆ. 15 ಸಂಸದರ ಪೈಕಿ ಒಂಬತ್ತು ಮಂದಿ ಕಾಂಗ್ರೆಸ್, ಇಬ್ಬರು ಸಿಪಿಎಂ, ಒಬ್ಬರು ಸಿಪಿಐ ಮತ್ತು ಇಬ್ಬರು ಡಿಎಂಕೆ ಸಂಸದರು ಸೇರಿದ್ದಾರೆ. ಇನ್ನು ರಾಜ್ಯಸಭೆಯಲ್ಲಿ ಟಿಎಂಸಿ ಸಂಸದ ಡೆರೆಕ್ ಓಬ್ರಿಯಾನ್ರನ್ನ ಅಮಾನತುಗೊಳಿಸಲಾಗಿದೆ.
ಪ್ರತಿಪಕ್ಷಗಳ ಸಂಸದರು ಗುರುವಾರ ಬೆಳಗ್ಗೆ ಮಹತ್ವದ ಸಭೆ ನಡಸಿದ್ದು ಅಧಿವೇಶನದಲ್ಲಿ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಪಾಸ್ ನೀಡಿ ಸಂಸತ್ ಭದ್ರತಾ ಲೋಪಕ್ಕೆ ಕಾರಣವಾಗಿರುವ ಸಂಸದ ಪ್ರತಾಪ್ ಸಿಂಹ ಅವರ ಸಂಸದ ಸ್ಥಾನ ರದ್ದು ಮಾಡುವಂತೆ ಆಗ್ರಹಿಸಿದ್ದಲ್ಲದೆ, ಭದ್ರತಾ ವೈಫಲ್ಯದ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು. ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕು. ತನಿಖೆಯಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಪ್ರತಿಪಕ್ಷಗಳು ಆಗ್ರಹಿಸಿದ್ದವು.
ಗುರುವಾರ ಬೆಳಗ್ಗೆ ರಾಜ್ಯಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷಗಳ ಸಂಸದರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಸಂಸತ್ ಭದ್ರತಾ ಲೋಪದ ಕುರಿತು ಚರ್ಚೆಗೆ ಪಟ್ಟು ಹಿಡಿದಿದ್ದು ಭದ್ರತಾ ವೈಫಲ್ಯದ ಕುರಿತು ಚರ್ಚಿಸಲು ಉಳಿದ ಕಲಾಪವನ್ನು ಬದಿಗಿಟ್ಟು ಅವಕಾಶ ನೀಡುವಂತೆ 28 ನೋಟಿಸ್ಗಳನ್ನು ಮಂಡಿಸಿದರು. ಆದರೆ, ಈ ನೋಟಿಸ್ಗಳನ್ನು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ತಿರಸ್ಕರಿಸಿದರು. ಇದರಿಂದ ಕೋಪಗೊಂಡ ವಿಪಕ್ಷ ಸದಸ್ಯರು ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗಿದರು, ಗೃಹ ಸಚಿವ ಅಮಿತ್ ಶಾ ಅವರೇ ಭದ್ರತಾ ಲೋಪದ ಬಗ್ಗೆ ಪ್ರತಿಕ್ರಿಯೆ ನೀಡಬೇಕೆಂದು ಆಗ್ರಹಿಸಿದರು. ಸಂಸದರ 'ಅನುಚಿತ ನಡವಳಿಕೆ'ಯನ್ನು ಖಂಡಿಸಿದ ಧನಕರ್, ಡೆರೆಕ್ ಓಬ್ರಿಯನ್ ಅವರ ನಡವಳಿಕೆಯು ಅಧ್ಯಕ್ಷ ಸ್ಥಾನಕ್ಕೆ ತೋರುವ ಅಗೌರವವಾಗಿದೆ, ಇದು ಗಂಭೀರ ದುರ್ವರ್ತನೆ ಎಂದು ಹೇಳಿ ಸದನದಿಂದ ಹೊರ ಹೋಗುವಂತೆ ಸೂಚಿಸಿದರು. ಆನಂತರ, ಲೋಕಸಭೆಯಲ್ಲೂ ಇದೇ ರೀತಿ ಕಾಂಗ್ರೆಸ್ ಸದಸ್ಯರು ಗದ್ದಲ ನಡೆಸಿದ್ದು ಸ್ಪೀಕರ್ ಅಮಾನತುಗೊಳಿಸುವ ಚಾಟಿ ಬೀಸಿದ್ದಾರೆ. ಒಂದೇ ದಿನ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಅಮಾನತುಗೊಳಿಸಿದ್ದು ಇದೇ ಮೊದಲು ಎನ್ನಲಾಗುತ್ತಿದೆ.
15 MPs suspended for remaining session amid uproar; both houses adjourned for the day, 15 MPs have been suspended from the Parliament for disrupting house proceedings, a day after a major security breach in parliament on Wednesday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm