ಬ್ರೇಕಿಂಗ್ ನ್ಯೂಸ್
15-12-23 07:31 pm HK News Desk ದೇಶ - ವಿದೇಶ
ಪಾಟ್ನಾ, ಡಿ 15: ವಿಚಾರಣಾಧೀನ ಕೈದಿಯೊಬ್ಬನನ್ನ ಕೋರ್ಟ್ ಆವರಣದಲ್ಲೇ ಗುಂಡಿಕ್ಕಿ ಕೊಂದಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದ ದಾನಪುರ ಕೋರ್ಟ್ ಕ್ಯಾಂಪಸ್ನಲ್ಲಿ ಬೇರ್ ಜೈಲಿನಿಂದ ವಿಚಾರಣೆಗೆ ಕರೆತಂದಿದ್ದ ಕೈದಿಯನ್ನ ಪೊಲೀಸರ ಎದುರಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊಲೆಯಾದ ವ್ಯಕ್ತಿಯನ್ನ ಅಭಿಷೇಕ್ ಕುಮಾರ್ ಅಲಿಯಾಸ್ ಛೋಟೆ ಸರ್ಕಾರ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.
ಛೋಟೆ ಸರ್ಕಾರ್ ಸಿಕಂದರ್ಪುರದ ನಿವಾಸಿಯಾಗಿದ್ದು ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದ. ಆತನನ್ನು ನಗರದ ಬೇರ್ ಜೈಲಿನಲ್ಲಿ ಇರಿಸಲಾಗಿದ್ದು, ಇಂದು ಕೋರ್ಟ್ಗೆ ಹಾಜರುಪರಿಸಲು ಕರೆತರಲಾಗುತ್ತಿತ್ತು. ವಿಚಾರಣಾಧೀನ ಕೈದಿಯಾಗಿದ್ದ ಛೋಟೆ ಸರ್ಕಾರ್ನನ್ನು ದಾನಪುರ ನ್ಯಾಯಾಲಯಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಇಬ್ಬರು ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ವಿಚಾರಣಾಧೀನ ಕೈದಿಯನ್ನ ಹತ್ಯೆ ಮಾಡಿದ ಇಬ್ಬರು ಆರೋಪಿಗಳನ್ನ ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಅವರನ್ನು ಯಾರು ಕಳುಹಿಸಿದ್ದಾರೆ, ಈ ಕೊಲೆಯ ಹಿಂದಿನ ಉದ್ದೇಶವೇನು ಅನ್ನೋ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಪಾಟ್ನಾ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.
ದಾಳಿಕೋರರು ಮುಜಾಫರ್ಪುರದವರು ಎಂದು ತಿಳಿದುಬಂದಿದೆ. ಘಟನಾ ಸ್ಥಳದಲ್ಲಿ ಆರೋಪಿಗಳ ಬಳಿಯಿದ್ದ 4 ಬುಲೆಟ್ ಶೆಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆದ್ರೆ ಎಷ್ಟು ಬುಲೆಟ್ಗಳನ್ನ ಹಾರಿಸಲಾಗಿದೆ ಎಂಬುದರ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ.
An undertrial prisoner, Abhishek alias Chhote Sarkar, was shot and killed inside the premises of the Danapur civil court in Bihar’s Patna district on Friday, police said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm