ಬ್ರೇಕಿಂಗ್ ನ್ಯೂಸ್
18-11-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 18: ಉತ್ತರ ಪ್ರದೇಶ, ಕರ್ನಾಟಕ ಸರಕಾರಗಳು ಲವ್ ಜಿಹಾದ್ ವಿರುದ್ಧ ಕಾನೂನು ತರುವ ಬಗ್ಗೆ ಹೇಳಿಕೆ ನೀಡುತ್ತಿರುವಾಗಲೇ ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಮಸೂದೆ ರೂಪ ತಳೆದಿದೆ. ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿಕೆ ನೀಡಿ, ನಮ್ಮ ಸರಕಾರ ಕಾನೂನು ರೆಡಿ ಮಾಡಿದ್ದು, ಲವ್ ಜಿಹಾದ್ ಸಾಬೀತಾದರೆ ಆರೋಪಿಗಳಿಗೆ 5 ವರ್ಷ ಕಠಿಣ ಸಜೆ ವಿಧಿಸಲಾಗುವುದು ಎಂದಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದಿರುವ ನರೋತ್ತಮ್ ಮಿಶ್ರಾ, ಈ ಮಸೂದೆಗೆ ಧರ್ಮ ಸ್ವಾತಂತ್ರ್ಯ ವಿಧೇಯಕ್ ಎಂದು ಹೆಸರಿಡಲಾಗಿದೆ. ಬಲವಂತದ ಮದುವೆ ಮತ್ತು ಮತಾಂತರವನ್ನು ಹತ್ತಿಕ್ಕುವ ಸಲುವಾಗಿ ಈ ಕಾನೂನು ಜಾರಿಗೆ ಬರಲಿದೆ ಎಂದಿದ್ದಾರೆ.
ಈ ಕಾನೂನಿನಡಿ, ಬಲವಂತದ ಮದುವೆ, ಮತಾಂತರ ಮಾಡುವುದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಒಂದು ವೇಳೆ, ಈ ರೀತಿ ಮದುವೆಯಾದರೆ ಅವನ್ನು ಅನೂರ್ಜಿತ ವಿವಾಹ ಎಂದು ಘೋಷಿಸಲು ಕಾಯ್ದೆಯಡಿ ಅವಕಾಶ ಇರಲಿದೆ. ಒಂದು ಧರ್ಮದ ಹೆಣ್ಣನ್ನು ಆಮಿಷವೊಡ್ಡಿ ಅಥವಾ ಬಲವಂತವಾಗಿ ಮತಾಂತರಿಸುವುದು, ತಮ್ಮ ಧರ್ಮಕ್ಕೆ ಮತಾಂತರಗೊಳ್ಳಲು ಹಿಂಸಿಸುವುದು, ಅದಕ್ಕೆ ಪ್ರೋತ್ಸಾಹಿಸುವುದು ಇವೆಲ್ಲವೂ ಈ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದಿದ್ದಾರೆ.

ಒಂದು ವೇಳೆ, ಎರಡೂ ಧರ್ಮೀಯರು ಇಷ್ಟಪಟ್ಟು ಮದುವೆಯಾಗಲು ಬಯಸಿದರೆ ಒಂದು ತಿಂಗಳ ಮುನ್ನವೇ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಲಿಖಿತವಾಗಿ ತಿಳಿಸಬೇಕು. ಅಂಥ ಸಂದರ್ಭದಲ್ಲಿ ಮಾತ್ರ ಅಂತರ್ ಧರ್ಮೀಯ ವಿವಾಹಕ್ಕೆ ಅವಕಾಶ ನೀಡಲಾಗುವುದು. ಅಲ್ಲದೆ, ಅದು ಲವ್ ಜಿಹಾದ್ ಅಲ್ಲ ಎಂದು ಪರಿಗಣಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಬಿಜೆಪಿ ಆಡಳಿತ ಇರುವ ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕದಲ್ಲಿ ಈಗಾಗ್ಲೇ ಲವ್ ಜಿಹಾದ್ ವಿರುದ್ಧ ಕಾನೂನು ತರುವ ಮಾತು ಕೇಳಿಬಂದಿದೆ. ಇದೀಗ ಮಧ್ಯಪ್ರದೇಶ ಸರಕಾರ ಕಾನೂನು ಬಗ್ಗೆ ರೂಪುರೇಷೆ ತಯಾರಿಸಿದ್ದು, ಡಿಸೆಂಬರ್ ತಿಂಗಳ ಚಳಿಗಾಲದ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
Madhya Pradesh home minister Narottam Mishra has said that a ‘love jihad bill’, which includes five years of rigorous imprisonment for ‘violators’, will soon be introduced in the state assembly.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm