ಬ್ರೇಕಿಂಗ್ ನ್ಯೂಸ್
18-11-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 18: ಉತ್ತರ ಪ್ರದೇಶ, ಕರ್ನಾಟಕ ಸರಕಾರಗಳು ಲವ್ ಜಿಹಾದ್ ವಿರುದ್ಧ ಕಾನೂನು ತರುವ ಬಗ್ಗೆ ಹೇಳಿಕೆ ನೀಡುತ್ತಿರುವಾಗಲೇ ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಮಸೂದೆ ರೂಪ ತಳೆದಿದೆ. ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿಕೆ ನೀಡಿ, ನಮ್ಮ ಸರಕಾರ ಕಾನೂನು ರೆಡಿ ಮಾಡಿದ್ದು, ಲವ್ ಜಿಹಾದ್ ಸಾಬೀತಾದರೆ ಆರೋಪಿಗಳಿಗೆ 5 ವರ್ಷ ಕಠಿಣ ಸಜೆ ವಿಧಿಸಲಾಗುವುದು ಎಂದಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದಿರುವ ನರೋತ್ತಮ್ ಮಿಶ್ರಾ, ಈ ಮಸೂದೆಗೆ ಧರ್ಮ ಸ್ವಾತಂತ್ರ್ಯ ವಿಧೇಯಕ್ ಎಂದು ಹೆಸರಿಡಲಾಗಿದೆ. ಬಲವಂತದ ಮದುವೆ ಮತ್ತು ಮತಾಂತರವನ್ನು ಹತ್ತಿಕ್ಕುವ ಸಲುವಾಗಿ ಈ ಕಾನೂನು ಜಾರಿಗೆ ಬರಲಿದೆ ಎಂದಿದ್ದಾರೆ.
ಈ ಕಾನೂನಿನಡಿ, ಬಲವಂತದ ಮದುವೆ, ಮತಾಂತರ ಮಾಡುವುದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಒಂದು ವೇಳೆ, ಈ ರೀತಿ ಮದುವೆಯಾದರೆ ಅವನ್ನು ಅನೂರ್ಜಿತ ವಿವಾಹ ಎಂದು ಘೋಷಿಸಲು ಕಾಯ್ದೆಯಡಿ ಅವಕಾಶ ಇರಲಿದೆ. ಒಂದು ಧರ್ಮದ ಹೆಣ್ಣನ್ನು ಆಮಿಷವೊಡ್ಡಿ ಅಥವಾ ಬಲವಂತವಾಗಿ ಮತಾಂತರಿಸುವುದು, ತಮ್ಮ ಧರ್ಮಕ್ಕೆ ಮತಾಂತರಗೊಳ್ಳಲು ಹಿಂಸಿಸುವುದು, ಅದಕ್ಕೆ ಪ್ರೋತ್ಸಾಹಿಸುವುದು ಇವೆಲ್ಲವೂ ಈ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದಿದ್ದಾರೆ.
ಒಂದು ವೇಳೆ, ಎರಡೂ ಧರ್ಮೀಯರು ಇಷ್ಟಪಟ್ಟು ಮದುವೆಯಾಗಲು ಬಯಸಿದರೆ ಒಂದು ತಿಂಗಳ ಮುನ್ನವೇ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಲಿಖಿತವಾಗಿ ತಿಳಿಸಬೇಕು. ಅಂಥ ಸಂದರ್ಭದಲ್ಲಿ ಮಾತ್ರ ಅಂತರ್ ಧರ್ಮೀಯ ವಿವಾಹಕ್ಕೆ ಅವಕಾಶ ನೀಡಲಾಗುವುದು. ಅಲ್ಲದೆ, ಅದು ಲವ್ ಜಿಹಾದ್ ಅಲ್ಲ ಎಂದು ಪರಿಗಣಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಬಿಜೆಪಿ ಆಡಳಿತ ಇರುವ ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕದಲ್ಲಿ ಈಗಾಗ್ಲೇ ಲವ್ ಜಿಹಾದ್ ವಿರುದ್ಧ ಕಾನೂನು ತರುವ ಮಾತು ಕೇಳಿಬಂದಿದೆ. ಇದೀಗ ಮಧ್ಯಪ್ರದೇಶ ಸರಕಾರ ಕಾನೂನು ಬಗ್ಗೆ ರೂಪುರೇಷೆ ತಯಾರಿಸಿದ್ದು, ಡಿಸೆಂಬರ್ ತಿಂಗಳ ಚಳಿಗಾಲದ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
Madhya Pradesh home minister Narottam Mishra has said that a ‘love jihad bill’, which includes five years of rigorous imprisonment for ‘violators’, will soon be introduced in the state assembly.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
06-10-25 02:58 pm
Mangalore Correspondent
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm