ಬ್ರೇಕಿಂಗ್ ನ್ಯೂಸ್
18-11-20 11:57 am Headline Karnataka News Network ದೇಶ - ವಿದೇಶ
ನವದೆಹಲಿ, ನವೆಂಬರ್ 18: ಉತ್ತರ ಪ್ರದೇಶ, ಕರ್ನಾಟಕ ಸರಕಾರಗಳು ಲವ್ ಜಿಹಾದ್ ವಿರುದ್ಧ ಕಾನೂನು ತರುವ ಬಗ್ಗೆ ಹೇಳಿಕೆ ನೀಡುತ್ತಿರುವಾಗಲೇ ಮಧ್ಯಪ್ರದೇಶದಲ್ಲಿ ಲವ್ ಜಿಹಾದ್ ವಿರುದ್ಧ ಮಸೂದೆ ರೂಪ ತಳೆದಿದೆ. ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿಕೆ ನೀಡಿ, ನಮ್ಮ ಸರಕಾರ ಕಾನೂನು ರೆಡಿ ಮಾಡಿದ್ದು, ಲವ್ ಜಿಹಾದ್ ಸಾಬೀತಾದರೆ ಆರೋಪಿಗಳಿಗೆ 5 ವರ್ಷ ಕಠಿಣ ಸಜೆ ವಿಧಿಸಲಾಗುವುದು ಎಂದಿದ್ದಾರೆ.
ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದಿರುವ ನರೋತ್ತಮ್ ಮಿಶ್ರಾ, ಈ ಮಸೂದೆಗೆ ಧರ್ಮ ಸ್ವಾತಂತ್ರ್ಯ ವಿಧೇಯಕ್ ಎಂದು ಹೆಸರಿಡಲಾಗಿದೆ. ಬಲವಂತದ ಮದುವೆ ಮತ್ತು ಮತಾಂತರವನ್ನು ಹತ್ತಿಕ್ಕುವ ಸಲುವಾಗಿ ಈ ಕಾನೂನು ಜಾರಿಗೆ ಬರಲಿದೆ ಎಂದಿದ್ದಾರೆ.
ಈ ಕಾನೂನಿನಡಿ, ಬಲವಂತದ ಮದುವೆ, ಮತಾಂತರ ಮಾಡುವುದು ಜಾಮೀನು ರಹಿತ ಅಪರಾಧವಾಗಿರುತ್ತದೆ. ಒಂದು ವೇಳೆ, ಈ ರೀತಿ ಮದುವೆಯಾದರೆ ಅವನ್ನು ಅನೂರ್ಜಿತ ವಿವಾಹ ಎಂದು ಘೋಷಿಸಲು ಕಾಯ್ದೆಯಡಿ ಅವಕಾಶ ಇರಲಿದೆ. ಒಂದು ಧರ್ಮದ ಹೆಣ್ಣನ್ನು ಆಮಿಷವೊಡ್ಡಿ ಅಥವಾ ಬಲವಂತವಾಗಿ ಮತಾಂತರಿಸುವುದು, ತಮ್ಮ ಧರ್ಮಕ್ಕೆ ಮತಾಂತರಗೊಳ್ಳಲು ಹಿಂಸಿಸುವುದು, ಅದಕ್ಕೆ ಪ್ರೋತ್ಸಾಹಿಸುವುದು ಇವೆಲ್ಲವೂ ಈ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತದೆ ಎಂದಿದ್ದಾರೆ.

ಒಂದು ವೇಳೆ, ಎರಡೂ ಧರ್ಮೀಯರು ಇಷ್ಟಪಟ್ಟು ಮದುವೆಯಾಗಲು ಬಯಸಿದರೆ ಒಂದು ತಿಂಗಳ ಮುನ್ನವೇ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಲಿಖಿತವಾಗಿ ತಿಳಿಸಬೇಕು. ಅಂಥ ಸಂದರ್ಭದಲ್ಲಿ ಮಾತ್ರ ಅಂತರ್ ಧರ್ಮೀಯ ವಿವಾಹಕ್ಕೆ ಅವಕಾಶ ನೀಡಲಾಗುವುದು. ಅಲ್ಲದೆ, ಅದು ಲವ್ ಜಿಹಾದ್ ಅಲ್ಲ ಎಂದು ಪರಿಗಣಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಬಿಜೆಪಿ ಆಡಳಿತ ಇರುವ ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕದಲ್ಲಿ ಈಗಾಗ್ಲೇ ಲವ್ ಜಿಹಾದ್ ವಿರುದ್ಧ ಕಾನೂನು ತರುವ ಮಾತು ಕೇಳಿಬಂದಿದೆ. ಇದೀಗ ಮಧ್ಯಪ್ರದೇಶ ಸರಕಾರ ಕಾನೂನು ಬಗ್ಗೆ ರೂಪುರೇಷೆ ತಯಾರಿಸಿದ್ದು, ಡಿಸೆಂಬರ್ ತಿಂಗಳ ಚಳಿಗಾಲದ ಅಧಿವೇಶನದಲ್ಲಿ ಕಾನೂನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
Madhya Pradesh home minister Narottam Mishra has said that a ‘love jihad bill’, which includes five years of rigorous imprisonment for ‘violators’, will soon be introduced in the state assembly.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm