ಬ್ರೇಕಿಂಗ್ ನ್ಯೂಸ್
16-12-23 10:14 pm HK News Desk ದೇಶ - ವಿದೇಶ
ನವದೆಹಲಿ, ಡಿ.16: ಸಂಸತ್ತಿನಲ್ಲಿ ಸ್ಮೋಕ್ ಬಾಂಬ್ ಸಿಡಿಸಿದ ಪ್ರಕರಣದ ಮಾಸ್ಟರ್ ಮೈಂಡ್ ಎನ್ನಲಾಗುತ್ತಿರುವ ಲಲಿತ್ ಮೋಹನ್ ಝಾ ಪೊಲೀಸರ ವಿಚಾರಣೆಯಲ್ಲಿ ಸ್ಫೋಟಕ ವಿಚಾರವನ್ನು ಬಾಯ್ಬಿಟ್ಟಿದ್ದಾನೆ. ಅಸಲಿಗೆ ಸಂಸತ್ತಿನಲ್ಲಿ ಒಳಗೆ ಮತ್ತು ಹೊರಗೆ ಮೈಗೆ ಬೆಂಕಿ ಹಚ್ಚಿಕೊಳ್ಳಲು ಪ್ಲಾನ್ ಮಾಡಿದ್ದರಂತೆ. ಆದರೆ, ಬೆಂಕಿಯಿಂದ ಗಾಯ ಆಗದಂತೆ ತಡೆಯುವ ಮೈಗೆ ಹಚ್ಚಿಕೊಳ್ಳುವ ಜೆಲ್ ಲಭ್ಯವಾಗದ ಕಾರಣ ಹೊಗೆ ಸಿಡಿಸುವುದಕ್ಕೆ ಮುಂದಾಗಿದ್ದರು ಎನ್ನುವ ಮಾಹಿತಿ ನೀಡಿದ್ದಾನೆ.
ಆರೋಪಿಗಳು ಪ್ಲಾನ್ ಎ ಮತ್ತು ಪ್ಲಾನ್ ಬಿ ಎಂಬ ಎರಡು ಐಡಿಯಾಗಳನ್ನು ಮಾಡಿಕೊಂಡಿದ್ದರು. ಪ್ಲಾನ್ ಎ ಪ್ರಕಾರ, ಮೈಗೆ ಹಚ್ಚಿಕೊಳ್ಳುವುದಕ್ಕೆ ಆದ್ಯತೆ ಇತ್ತು. ಸೂಕ್ತ ಸಂದರ್ಭದಲ್ಲಿ ಜೆಲ್ ಲಭ್ಯವಾಗದ ಕಾರಣ ಪ್ಲಾನ್ ಬಿ ಅನುಸರಿಸಿದ್ದರು. ಪ್ಲಾನ್ ಬಿ ಪ್ರಕಾರ, ಕಲರ್ ಹೊಗೆ ಸಿಡಿಸುವ ಕ್ಯಾನಿಸ್ಟರ್ ಬಳಸುವುದು ಯೋಜನೆ ಇತ್ತು. ಅದನ್ನೇ ಆರೋಪಿಗಳು ಅನುಸರಿಸಿದ್ದಾರೆ ಎಂಬುದು ಲಲಿತ್ ಝಾ ನೀಡಿರುವ ಮಾಹಿತಿ.

ನಾಲ್ವರು ಆರೋಪಿಗಳ ಮೊಬೈಲ್ ಫೋನ್ಗಗಳು ಲಲಿತ್ ಝಾನಲ್ಲಿಯೇ ಇದ್ದವು. ಆದರೆ ಅವನ್ನು ಸುಟ್ಟು ಹಾಕಿದ್ದಾನೆ ಎನ್ನಲಾಗುತ್ತಿದ್ದು, ಹೀಗೆ ಯಾಕೆ ಮಾಡಿದೆ ಎಂದು ಕೇಳಿದ ಪ್ರಶ್ನೆಗೆ, ಅದೇ ಮಾಸ್ಟರ್ ಪ್ಲಾನ್ ಎಂದು ಲಲಿತ್ ಝಾ ತಿಳಿಸಿದ್ದಾನಂತೆ. ಇದಲ್ಲದೆ, ಲಲಿತ್ ಝಾ ತನಿಖೆಗೆ ಸರಿಯಾಗಿ ಸಹಕರಿಸದೆ, ಪ್ರತಿ ಬಾರಿ ತನ್ನ ಹೇಳಿಕೆಯನ್ನು ಬದಲಿಸುತ್ತಿದ್ದಾನಂತೆ. ಆಮೂಲಕ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿ.13ರಂದು ಸಂಸತ್ ದಾಳಿಯ 22ನೇ ವಾರ್ಷಿಕ ದಿನದಂದೇ ನಾಲ್ವರು ಆರೋಪಿಗಳು ಸಂಸತ್ತಿನ ಒಳಗೆ ಮತ್ತು ಹೊರಗಡೆ ಹೊಗೆ ಬಾಂಬ್ ಸಿಡಿಸಿ ಭದ್ರತಾ ಉಲ್ಲಂಘನೆ ಮಾಡಿದ್ದರು. ಅಧಿವೇಶನ ನಡೆಯುತ್ತಿದ್ದಾಗಲೇ ಈ ರೀತಿ ಮಾಡುವ ಮೂಲಕ ಭಾರೀ ಭದ್ರತಾ ಲೋಪ ಎಸಗಿದ್ದರು. ಲೋಕಸಭೆಯ ಗ್ಯಾಲರಿಯಲ್ಲಿದ್ದ ಮನೋರಂಜನ್ ಮತ್ತು ಸಾಗರ್ ಶರ್ಮಾ ಅಲ್ಲಿಂದ ನೇರವಾಗಿ ಸಂಸದರು ಕುಳಿತಿದ್ದ ಅಂಗಣಕ್ಕೆ ಹಾರಿದ್ದ ಇಬ್ಬರು ಕಲರ್ ಬಾಂಬ್ ಸಿಡಿಸಿದ್ದಾರೆ.
As Delhi Police continues to investigate Parliament security breach conspiracy, key conspirator Lalit Mohan Jha made some shocking revelations during the interrogation and said that he and other members of the group had originally planned to immolate themselves inside and outside Parliament.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm