ಬ್ರೇಕಿಂಗ್ ನ್ಯೂಸ್
18-11-20 12:48 pm Headline Karnataka News Network ದೇಶ - ವಿದೇಶ
ವಾಷಿಂಗ್ಟನ್, ನವೆಂಬರ್ 18: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಎದುರು ಸೋಲು ಅನುಭವಿಸಿರುವ ಡೊನಾಲ್ಡ್ ಟ್ರಂಪ್ , ಚುನಾವಣೆಯಲ್ಲಿ ಭಾರಿ ವಂಚನೆ ನಡೆದಿದೆ ಎಂಬ ಆರೋಪವನ್ನು ನಿರಾಕರಿಸಿದ್ದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.
ನವೆಂಬರ್ 3ರಂದು ನಡೆದ ಚುನಾವಣೆಯು ಅಮೆರಿಕದ ಇತಿಹಾಸದಲ್ಲಿಯೇ ಅತ್ಯಂತ ಸುರಕ್ಷಿತ ಚುನಾವಣೆ ಎಂದು ಸರ್ಕಾರದ ಹಿರಿಯ ಚುನಾವಣಾ ಭದ್ರತಾ ಅಧಿಕಾರಿ ಕ್ರಿಸ್ ಕ್ರೆಬ್ಸ್ ಮತ್ತು ಅವರ ಸಂಸ್ಥೆ ಜಂಟಿಯಾಗಿ ಘೋಷಣೆ ಮಾಡಿತ್ತು. ಕ್ರಿಸ್ ಕ್ರೆಬ್ಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕೆಲಸದಿಂದ ಕಿತ್ತುಹಾಕಲಾಗಿದೆ ಎಂದು ಡೊನಾಲ್ಡ್ ಟ್ರಂಪ್ ಟ್ವಿಟ್ಟರ್ನಲ್ಲಿ ಪ್ರಕಟಿಸಿದ್ದಾರೆ.

ಜೋ ಬೈಡನ್ ಎದುರು ತಮ್ಮ ಸೋಲನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಡೊನಾಲ್ಡ್ ಟ್ರಂಪ್, ಮತ ಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಪುರಾವೆರಹಿತ ಆರೋಪಗಳನ್ನು ಸತತವಾಗಿ ಮಾಡುತ್ತಿದ್ದಾರೆ.
'2020ರ ಚುನಾವಣೆಯ ಭದ್ರತೆ ಕುರಿತು ಕ್ರಿಸ್ ಕ್ರೆಬ್ಸ್ ಅವರ ಇತ್ತೀಚಿನ ಹೇಳಿಕೆ ತೀವ್ರ ಅಸಮರ್ಪಕವಾಗಿದೆ. ಚುನಾವಣೆಯಲ್ಲಿ ಭಾರಿ ಅಕ್ರಮಗಳು ಮತ್ತು ವಂಚನೆ ನಡೆದಿದೆ' ಎಂದು ಟ್ರಂಪ್ ಹೇಳಿದ್ದಾರೆ.
'ಹೀಗಾಗಿ ತಕ್ಷಣದಿಂದಲೇ ಜಾರಿಯಾಗುವಂತೆ ಕ್ರಿಸ್ ಕ್ರೆಬ್ಸ್ ಅವರನ್ನು ಸೈಬರ್ ಸೆಕ್ಯುರಿಟಿ ಮತ್ತು ಮೂಲಸೌಕರ್ಯ ಸೆಕ್ಯುರಿಟಿ ಸಂಸ್ಥೆಯ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಲಾಗಿದೆ' ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಯಾವುದೇ ಲೋಪವಾಗಿಲ್ಲ ಎಂದು ಹೇಳಿಕೊಂಡಿದ್ದ ಕ್ರಿಸ್ ಅವರು ತಮ್ಮನ್ನು ಕೆಲಸದಿಂದ ಕಿತ್ತುಹಾಕುವ ಸಾಧ್ಯತೆ ಇದೆ ಎಂದು ಕಳೆದ ವಾರವೇ ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. 'ಸೇವೆ ಸಲ್ಲಿಸುವ ಗೌರವ ನನ್ನದಾಗಿದೆ. ನಾವು ಸರಿಯಾಗಿ ಕೆಲಸ ಮಾಡಿದ್ದೇವೆ. ಇಂದು ರಕ್ಷಿಸಿ ನಾಳೆಯನ್ನು ಭದ್ರಗೊಳಿಸಿದ್ದೇವೆ' ಎಂದು ಕ್ರಿಸ್ ಟ್ವೀಟ್ ಮಾಡಿದ್ದರು.
President Trump took to Twitter, as he does, to announce the termination of Christopher Krebs - who was responsible for online election security, especially blocking outside interference - after he refuted POTUS' claims of election fraud
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm